Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...