Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...