Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...