Homeಮುಖಪುಟತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

ತುಮಕೂರು: ಬಡವರನ್ನು ಎತ್ತಂಗಡಿ ಮಾಡುವ ಪಾಲಿಕೆ, ಬಲಾಢ್ಯರ ಒತ್ತುವರಿ ಬಗ್ಗೆ ಮೌನ ವಹಿಸುವುದೇಕೆ?

- Advertisement -
- Advertisement -

ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೆಂಗಳೂರಿನಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಬಡವರು, ವಲಸೆ ಬಂದವರು, ಬಾಡಿಗೆ ತೆರಲು ಸಾಧ್ಯವಾಗದವರು ಸರ್ಕಾರಿ ಜಾಗಗಳಲ್ಲಿ ಜೋಪಡಿ-ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗುಸುತ್ತಿರುವವರನ್ನು ಎಲ್ಲೆಡೆ ನೋಡಿರುತ್ತೀರಿ. ಅಂತಹ ವಸತಿರಹಿತರನ್ನು ನಿರ್ದಯವಾಗಿ ಒಕ್ಕಲೆಬ್ಬಿಸುವ ಬೆಂಗಳೂರು ಮಹಾನಗರ ಪಾಲಿಕೆ ಸರ್ಕಾರದ ವಶಕ್ಕೆ ಸೇರಿದ ಕನ್ಸರ್ ವೆನ್ಸಿ ಗಳನ್ನು ಒತ್ತುವರಿ ಮಾಡಿ ದೊಡ್ಡ ದೊಡ್ಡ ಮಹಲುಗಳನ್ನು ನಿಮಾರ್ಣ ಮಾಡಿರುವವರ ಕ್ರಮ ಕೈಗೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಶ್ರೀಮಂತರು, ಬಲಾಢ್ಯರು, ಪ್ರಭಾವಿಗಳು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರು ನೀಡುವ ಅಮೇಧ್ಯ ತಿಂದುಕೊಂಡು  ಬೆಂಗಳೂರು ಮಹಾನಗರ ಪಾಲಿಕೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ಇದೇ ಪರಿಸ್ಥಿತಿ ತುಮಕೂರು ಸೇರಿದಂತೆ ಇತರೆ ನಗರಗಳಿಗೂ ವ್ಯಾಪಿಸಿದೆ. ಬೆಂಗಳೂರಿಗೆ 75 ಕಿಲೋ ಮೀಟರ್ ದೂರವಿರುವ, ಬೆಂಗಳೂರಿನ ಹೆಬ್ಬಾಗಿಲೆಂದೇ ಕರೆಯುವ ತುಮಕೂರು ಸ್ಮಾರ್ಟ್ ಸಿಟಿಯೂ ಹೌದು. ಇಂತಹ ಸ್ಮಾರ್ಟ್ ನಗರದಲ್ಲಿ ‘ಸ್ಮಾರ್ಟ್’ ಪದಕ್ಕೆ ಅರ್ಥವೇ ಇಲ್ಲವಾಗಿದೆ. ತುಮಕೂರು ಪುರಸಭೆ, ನಗರಸಭೆ ಆಗಿದ್ದ ಸಂದರ್ಭದಲ್ಲಿ ಕನ್ಸರ್ ವೆನ್ಸಿಗಳಿದ್ದವು. ಗಾಳಿ ಬೆಳಕಿಗೇನೂ ಕೊರತೆ ಇರಲಿಲ್ಲ. ತುಮಕೂರು ಮಹಾನಗರ  ಪಾಲಿಕೆಯಾದ ಮೇಲೆ ಕನ್ಸರ್ ವೆನ್ಸಿಗಳು ನಿಧಾನವಾಗಿ ಒತ್ತುವರಿಯಾಗುತ್ತಿವೆ. ಚರಂಡಿಗಳನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರಿ ಜಾಗದ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವವರೇ ಇಲ್ಲವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ಸರ್ ವೆನ್ಸಿಗಳ ಬಳಕೆ ಕುರಿತಂತೆ ಚರ್ಚೆ ನಡೆಯಿತು. ಕನ್ಸರ್ ವೆನ್ಸಿಗಳಿಗೆ ಕ್ರಾಂಕ್ರೀಟ್ ಹಾಕಿ ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡುವ ಯತ್ನವೂ ನಡೆಯಿತು. ಅದರಂತೆ ಸೋಮೇಶ್ವರಪುರಂ ಸೇರಿದಂತೆ ಕೆಲವು ಕಡೆ ಕನ್ಸರ್ ವೆನ್ಸಿಗಳಿಗೆ ಕಾಂಕ್ರೀಟ್ ಮಾಡಿ ಬೀದಿಬದಿ ವ್ಯಾಪಾರಿಗಳಿಗೆ ಅನುವು ಮೋಡಿಕೊಡಲಾಯಿತು. ಇದನ್ನೇ ನೆಪಮಾಡಿಕೊಂಡ ಕೆಲವು ಮಂದಿ ಬಲಾಢ್ಯರು, ರಾಜಕೀಯ ಪ್ರಭಾವವಿರುವವರು ತಮ್ಮ ಮನೆ, ಆಸ್ಪತ್ರೆ ಪಕ್ಕದಲ್ಲಿರುವ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡರು. ಇದಕ್ಕಾಗಿ ಆಯಾ ವಾರ್ಡ್‌ನ  ಪಾಲಿಕೆ ಸದಸ್ಯರಿಗೆ ಒಂದಿಷ್ಟು ‘ಕಾಣಿಕೆ’ಯೂ ಸಿಕ್ಕಿತು.

ಈ ರೋಗ ನಗರದೆಲ್ಲೆಡೆ ಹರಡಿಕೊಂಡಿದೆ. ಹೊಸದಾಗಿ ಮನೆಗಳನ್ನು ನಿರ್ಮಿಸುವವರು ಪಾಲಿಕೆಯ ಎಲ್ಲಾ ನಿಯಮಗಳನ್ನು ದಿಕ್ಕರಿಸುತ್ತಿದ್ದಾರೆ. ಗಾಂಧೀನಗರದ ಕಸ್ತೂರ ಬಾ ರಸ್ತೆಯಲ್ಲಿ ನಾಲ್ಕು ಹಂತಸ್ತಿನ ಮನೆ ನಿರ್ಮಾಣವಾಗುತ್ತಿದೆ. ಮಹಡಿಗಳ ಮೇಲೆ ಮಹಿಡಿ ನಿರ್ಮಾಣವಾದಂತೆ ಗಾಳಿ ಬೆಳಕು ಬೀಳುವಂತೆ ಹೆಚ್ಚು ಜಾಗ ಬಿಡಬೇಕು. ಕಟ್ಟಡದ ಎತ್ತರಕ್ಕೆ, ಗಾತ್ರಕ್ಕೆ ಅನುಗುಣವಾಗಿ ಅಕ್ಕಪಕ್ಕ ಜಾಗ ಬಿಡಬೇಕು. ಕಸ್ತೂರ ಬಾ ರಸ್ತೆಯಲ್ಲಿ ಐದು ಹಂತಸ್ತಿನ ಬೃಹತ್ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದಾರೆ. ಈ ಕಟ್ಟಡ ಮಾರ್ವಾಡಿಯೊಬ್ಬನಿಗೆ ಸೇರಿದ್ದು ಸ್ಥಳೀಯ ಕಾರ್ಪೋರೇಟರ್ ಅನ್ನು ಒಳಗೆ ಹಾಕಿಕೊಂಡು ಈ ಕಟ್ಟಡ ನಿರ್ಮಿಸುತ್ತಿದ್ದಾರೆ  ಎನ್ನಲಾಗುತ್ತಿದೆ.

ತುಮಕೂರು ನಗರದ ಸೋಮೇಶ್ವರಪುರಂ ಮುಖ್ಯರಸ್ತೆಯಲ್ಲಿ ಹಲವು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಪ್ರತಿಯೊಂದು ದೊಡ್ಡ ಮಳಿಗೆಯ ನೆಲಮಾಳಿಗೆಯನ್ನು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂಬ ನಿಯಮವಿದೆ. ಆದರೆ 13ನೇ ಕ್ರಾಸ್ ನ ಎದುರುಗಡೆ ಕಟ್ಟಡದ ನೆಲಮಾಳಿಗೆಯಲ್ಲಿ ಡ್ಯಾನ್ಸ್ ಕ್ಲಾಸ್ ಮಾಡುತ್ತಿದ್ದಾರೆ. ನಮ್ಮೂರ ಆಹಾರ ಕಟ್ಟಡದ ನೆಲಮಾಳಿಗೆಯಲ್ಲಿ ಬೇಕರಿ ತಯಾರಿಕೆ ಕೆಲಸ ನಡೆಯುತ್ತಿದೆ. ಮಲ್ಲಿಗೆ ಪ್ಯಾಲಸ್ ಕಟ್ಟಡಕ್ಕೊಂದು ನೆಲಮಾಳಿಗೆ ಇದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಸೋಮೇಶ್ವರ ಪುರಂ ಮುಖ್ಯರಸ್ತೆಯಲ್ಲಿ ವಾಹನನಿಲುಗಡೆ ಹೆಚ್ಚಾಗಿದ್ದು ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಆದರೂ ಸಂಚಾರಿ ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆ ನಿರ್ಮಾಣ ಮಾಡಿದವರನ್ನು ಪ್ರಶ್ನೆ ಮಾಡದೆ ನಾಲಿಗೆಯನ್ನು ಕಳೆದುಕೊಂಡಿದ್ದಾರೆ.

ಯಾವ ಮಹಾಶಯ ಹೇಳಿದನೋ ಗೊತ್ತಿಲ್ಲ. ಅವರವರ ಮನೆಗಳು ಇರುವ ಕನ್ಸರ್ ವೆನ್ಸಿಗಳ ಜಾಗ ಅವರಿಗೆ ಸೇರಿದ್ದು ಎಂದು. ಎಲ್ಲರೂ ತಮಗೆ ಸಾಧ್ಯವಿರುವಷ್ಟು ಒತ್ತುವರಿ ಮಾಡಿಕೊಂಡು ಪಕ್ಕದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಅಳಲುತೋಡಿಕೊಳ್ಳುತ್ತಿದ್ದಾರೆ. ಅಶೋಕನಗರ ವಿನಾಯಕ ಆಸ್ಪತ್ರೆಯ ರಸ್ತೆಯಲ್ಲೂ ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಹೊರಪೇಟೆ ಸೇರಿದಂತೆ ತುಮಕೂರಿನ ಬಹುತೇಕ ಕಡೆ ಕನ್ಸರ್ ವೆನ್ಸಿಗಳ ಒತ್ತುವರಿಯಾಗಿವೆ. ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಲಾಗಿದೆ. ಹೀಗಾಗಿ ಸಿದ್ದಗಂಗಾ ಬಡಾವಣೆಯಲ್ಲಿ ಮಳೆ ಬಂದರೆ ಕೆರೆ ನಿರ್ಮಾಣವಾಗುತ್ತದೆ. ಸಾರ್ವಜನಿಕ ಸ್ವತ್ತು, ಸರ್ಕಾರಿ ಭೂಮಿ ಎಗ್ಗಿಲ್ಲದೆ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾಡಳಿತ, ಪಾಲಿಕೆ ಸತ್ತಂತೆ ವರ್ತಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಬಡವರು ಒಂದಿಂಚು ಒತ್ತುವರಿ ಮಾಡಿಕೊಂಡರೆ ತೆರವುಗೊಳಿಸುವ ಪಾಲಿಕೆ ಬಲಾಢ್ಯರ ಬಗ್ಗೆ ಮೌನ ವಹಿಸಿದೆ. ಕಸ್ತೂರಾ ಆಸ್ಪತ್ರೆ, ಉಪ್ಪಾರಹಳ್ಳಿಯಲ್ಲಿ ಖಾಸಗಿ ಕಾಲೇಜೊಂದನ್ನು ರಾಜಗಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದರೂ ಪಾಲಿಕೆ ಮಾತ್ರ ಅತ್ತ ತಿರುಗಿಯೂ ನೋಡುತ್ತಿಲ್ಲ. ಕಾಲೇಜುಗಳು, ದೇವಾಲಯಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ. ಇಂತಹವರಿಗೆ ಪಾಲಿಕೆಯ ನಿಯಮಗಳು ಅನ್ವಯ ಆಗುವುದಿಲ್ಲವೇ? ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ನೀಡುವ ಕಟ್ಟಡದ ನಕಾಶೆಗಳನ್ನು ಸರಿಯಾಗಿ ಪರಿಶೀಲಿಸುವುದಿಲ್ಲವೇ? ನೆಪಮಾತ್ರಕ್ಕೆ ಕಟ್ಟಡಗಳ ನಕ್ಷೆಯನ್ನು ಪಡೆಯಲಾಗುತ್ತಿದೆಯೇ? ಪಾಲಿಕೆ ಆಯುಕ್ತ ಭೂಬಾಲನ್ ಹೇಳಬೇಕು. ಕನ್ಸರ್ ವೆನ್ಸಿಗಳನ್ನು ಒತ್ತುವರಿ ಮಾಡಿಕೊಂಡವರನ್ನು ತೆರೆಗೊಳಿಸುವ ಕೆಲಸಕ್ಕೆ ಕ್ರಮ ಕೈಗೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...