Homeಮುಖಪುಟತುಮಕೂರು ನಗರ: ಬಿಜೆಪಿಯಲ್ಲಿ ಬಂಡಾಯ - ಕಾಂಗ್ರೆಸ್, ಜೆಡಿಎಸ್‌ಗೆ ಜಯದ ಅವಕಾಶ

ತುಮಕೂರು ನಗರ: ಬಿಜೆಪಿಯಲ್ಲಿ ಬಂಡಾಯ – ಕಾಂಗ್ರೆಸ್, ಜೆಡಿಎಸ್‌ಗೆ ಜಯದ ಅವಕಾಶ

- Advertisement -
- Advertisement -

ತುಮಕೂರು ನಗರ ಬಿಜೆಪಿ ಟಿಕೆಟ್ ಹಾಲಿ ಶಾಸಕ ಜ್ಯೋತಿ ಗಣೇಶ್ ಪಾಲಾಗಿದೆ. ಟಿಕೆಟ್‌ ವಂಚಿತರಾದ ಮಾಜಿ ಸಚಿವ ಸೊಗಡು ಶಿವಣ್ಣನವರು ಬಂಡಾಯದ ಬಾವುಟ ಹಾರಿಸಿದ್ದು ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತುಮಕೂರು ನಗರದಲ್ಲಿ ಹೊಸ ಮುಖಕ್ಕೆ ಮನ್ನಣೆ ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ತನ್ನ ಮನೆಯನ್ನೇ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿ ಸೇವೆ ನೀಡುವ ಮೂಲಕ ಗಮನ ಸೆಳೆದಿದ್ದ ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಇಕ್ಬಾಲ್ ಅಹಮದ್ ಅವರಿಗೆ ಟಿಕೆಟ್ ದೊರೆತಿದೆ.

ತುಮಕೂರು
ಇಕ್ಬಾಲ್ ಅಹಮದ್

ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷವು ಕಳೆದ 11 ಚುನಾವಣೆಗಳಲ್ಲಿ ಸತತವಾಗಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಾ ಬಂದಿದೆ. ನಾಲ್ಕು ಬಾರಿ ಗೆದ್ದು, ಏಳು ಬಾರಿ ಸೋತರೂ ಮುಸ್ಲಿಮರಿಗೆ ಟಿಕೆಟ್ ನೀಡುವ ಪರಿಪಾಠ ಮುಂದುವರಿಸಿದೆ. ಈ ಬಾರಿಯೂ ಅದನ್ನೆ ಪುನಾರಾವರ್ತಿಸಿದೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚಿತ್ರಣ ಈ ರೀತಿ ಇದೆ.

ಅತಿ ಹೆಚ್ಚು ಜನಸಂಖ್ಯೆ ಇರುವ ಕಾರಣದಿಂದ ತುಮಕೂರು ನಗರ ಕ್ಷೇತ್ರದ ಜೊತೆಗೆ ಈ ಹಿಂದೆ ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳು ಇದ್ದವು. 1952ರಲ್ಲಿ ಇದ್ದ ಕೋರ ಕ್ಷೇತ್ರವನ್ನು ಕೈಬಿಟ್ಟು 1957ರಲ್ಲಿ ಹೆಬ್ಬೂರು ಕ್ಷೇತ್ರವನ್ನು ಅಸ್ತಿತ್ವಕ್ಕೆ ತರಲಾಯಿತು. 1967ರ ಹೊತ್ತಿಗೆ ಹೆಬ್ಬೂರು ಬದಲಿಗೆ ಗೂಳೂರು ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) ಅಸ್ತಿತ್ವಕ್ಕೆ ಬಂದಿತು. ಆನಂತರ ಅದನ್ನು ಕೈಬಿಟ್ಟು 1978ರ ವೇಳೆಗೆ ಬೆಳ್ಳಾವಿ ಕ್ಷೇತ್ರ ಅಸ್ತಿತ್ವಕ್ಕೆ ಬಂತು. 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಬೆಳ್ಳಾವಿ ಬದಲಿಗೆ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಸೃಷ್ಟಿಸಲಾಯಿತು. ಈಗ ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳು ಅಸ್ತಿತ್ವ ಉಳಿಸಿಕೊಂಡಿವೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರ – ರಾಜಕೀಯ ಇತಿಹಾಸ

ಇದುವರೆಗೂ ತುಮಕೂರು ನಗರದಲ್ಲಿ ನಡೆದ 15 ಚುನಾವಣೆಗಳಲ್ಲಿ 6 ಬಾರಿ ಕಾಂಗ್ರೆಸ್, 5 ಬಾರಿ ಬಿಜೆಪಿ, ಎರಡು ಬಾರಿ ಜನತಾಪಕ್ಷ ಮತ್ತು ಎರಡು ಬಾರಿ ಪ್ರಜಾ ಸೋಷಿಯಲಿಸ್ಟ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇಲ್ಲಿ ಜೆಡಿಎಸ್ ಖಾತೆ ತೆರೆಯಲು ವಿಫಲವಾಗಿರುವುದನ್ನು ಗಮನಿಸಬಹುದು.

1989ರಲ್ಲಿ ಜನತಾ ಪಕ್ಷದ ಲಕ್ಷ್ಮಿ ನರಸಿಂಹಯ್ಯನವರು ಕಾಂಗ್ರೆಸ್ ಅಭ್ಯರ್ಥಿ ಎಸ್.ಶಫಿ ಅಹಮದ್ ಎದುರು ಸೋಲುಕಂಡರು. 1994ರ ನಂತರ ತುಮಕೂರು ನಗರ ಕ್ಷೇತ್ರ ಬಿಜೆಪಿ ವಶವಾಯಿತು. ಆ ಚುನಾವಣೆಯಲ್ಲಿ ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಸೊಗಡು ಶಿವಣ್ಣ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. ಡಾ. ರಫಿಕ್ ಅಹ್ಮದ್ 43,681 ಮತಗಳನ್ನು ಪಡೆದರೆ, ಕೆಜೆಪಿಯ ಜಿ.ಬಿ.ಜ್ಯೋತಿಗಣೇಶ್ 40,073 ಮತಗಳನ್ನು ಗಳಿಸಿ ಪೈಪೋಟಿ ನೀಡಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎನ್. ಗೋವಿಂದರಾಜುರವರು 38,322 ಮತಗಳನ್ನು ಪಡೆದರೆ, ಬಿಜೆಪಿಯ ಸೊಗಡು ಶಿವಣ್ಣ ಕೇವಲ 13,159 ಮತಗಳಿಗೆ ಕುಸಿದು ಮುಖಭಂಗ ಅನುಭವಿಸಿದ್ದರು.

2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಡಾ. ರಫಿಕ್ ಅಹ್ಮದ್ ಮತ್ತು ಜೆಡಿಎಸ್‌ನಿಂದ ಎನ್. ಗೋವಿಂದರಾಜು ಸ್ಪರ್ಧಿಸಿದ್ದರು. ಮೂರು ಜನರ ತ್ರಿಕೋನ ಹಣಾಹಣಿಯಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ 5,293 ಮತಗಳ ಅಂತರದಿಂದ ಗೆದ್ದು ಬಂದರು. ಅವರು 60,421 ಮತಗಳನ್ನು ಪಡೆದರೆ ಜೆಡಿಎಸ್‌ನ ಗೋವಿಂದರಾಜುರವರು 55,128 ಮತಗಳನ್ನು ಪಡೆದರು. ಕಾಂಗ್ರೆಸ್‌ನ ರಫೀಕ್ ಅಹಮದ್ 51,219 ಮತಗಳನ್ನು ಪಡೆದ ಮೂರನೇ ಸ್ಥಾನಕ್ಕೆ ನೂಕಲ್ಪಟ್ಟರು.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,65,000; ಮುಸ್ಲಿಂ: 60,000; ಲಿಂಗಾಯಿತ: 50,000; ಪರಿಶಿಷ್ಟ ಜಾತಿ: 40,000; ಒಕ್ಕಲಿಗ: 40,000; ಕುರುಬ: 15,000; ಎಸ್‌ಟಿ: 11,000; ಗೊಲ್ಲರು: 8,000; ಇತರೆ: 41,000

ಹಾಲಿ ಪರಿಸ್ಥಿತಿ

ಮೊದಲ ಬಾರಿಗೆ ಶಾಸಕರಾದ ಜ್ಯೋತಿ ಗಣೇಶ್ ತುಮಕೂರಿನಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ, ಡಿಜಿಟಲ್ ಲೈಬ್ರರಿ, ಅಮಾನಿ ಕೆರೆ ಅಭಿವೃದ್ಧಿ, ಕಾಲೇಜು ಕಟ್ಟಡ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳ ಅನುಷ್ಠಾನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಜನರೊಟ್ಟಿಗೆ ಉತ್ತಮ ಬಾಂಧವ್ಯ ಸಹ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಸಾಕಷ್ಟು ಹಣ ಮಾಡಿದ್ದಾರೆ, ಪ್ರತಿ ಕಾಮಗಾರಿಗಳಲ್ಲಿ ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬ ಆರೋಪ ಸಹ ಅವರ ಮೇಲಿದೆ. ಕಾಂಗ್ರೆಸ್ ಕಾರ್ಯಕರ್ತರು ಜ್ಯೋತಿಗಣೇಶ್ ವಿರುದ್ಧ ಪೆಎಂಎಲ್‌ಎ ಪ್ರತಿಭಟನೆ ಸಹ ನಡೆಸಿ ಬಂಧನಕ್ಕೊಳಗಾಗಿದ್ದರು.

ಜ್ಯೋತಿ ಗಣೇಶ್

ಜ್ಯೋತಿಗಣೇಶ್‌ರವರ ತಂದೆ ಜಿ.ಎಸ್ ಬಸವರಾಜುರವರು ಕಾಂಗ್ರೆಸ್‌ನಿಂದ ಬಂದವರಾಗಿದ್ದು ಬಿಜೆಪಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರನ್ನು ಮಣಿಸಿ ಸಂಸದರಾಗಿದ್ದಾರೆ. ಅಪ್ಪ ಮಗ ಇಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಟಿಕೆಟ್ ವಂಚಿತ ಸೊಗಡು ಶಿವಣ್ಣ

ಮಾಜಿ ಸಚಿವ ಲಿಂಗಾಯತ ಸಮುದಾಯದ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್‌ಗಾಗಿ ಕಸರತ್ತು ನಡೆಸಿಯು ವಿಫಲರಾಗಿದ್ದಾರೆ. 2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಸೊಗಡು ಶಿವಣ್ಣ

ಜೆಡಿಎಸ್

ಜೆಡಿಎಸ್ ಪಕ್ಷವು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಒಕ್ಕಲಿಗ ಸಮುದಾಯದ ಎನ್ ಗೋವಿಂದರಾಜುರವರಿಗೆ ಟಿಕೆಟ್ ಘೋಷಿಸಿದೆ. ಅವರು ಈ ಹಿಂದೆಯೆಲ್ಲ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಆದರೆ ಸತತ ಎರಡು ಚುನಾವಣೆಗಳಲ್ಲಿ ಸೋತ ನಂತರ ಬೇಸರಗೊಂಡು ನೀರು ಕೊಡುವುದನ್ನು ನಿಲ್ಲಿಸಿದ್ದರು. ಈಗ ಚುನಾವಣೆ ಸಮಯದಲ್ಲಿ ಅವರು ಸಕ್ರಿಯರಾಗಿದ್ದಾರೆ. ಈ ಬಾರಿ ಎಂಎಲ್‌ಎ ಆಗಲೇಬೇಕೆಂದು ಕೆಲಸ ಮಾಡುತ್ತಿದ್ದಾರೆ.

ಗೋವಿಂದರಾಜು

ಕಾಂಗ್ರೆಸ್

ಈ ಬಾರಿ ಮೂವರು ಮುಸ್ಲಿಂ ಸಮುದಾಯದ ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಕಸರತ್ತು ನಡೆಸಿದ್ದರು. ಅದರಲ್ಲಿ ಇಕ್ಬಾಲ್ ಅಹಮದ್ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಸೋತಿರುವ ಡಾ.ರಫೀಕ್ ಅಹ್ಮದ್ ಮತ್ತು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕರಾದ ಅಟ್ಟಿಕಾ ಬಾಬುರವರು ಕಾಂಗ್ರೆಸ್ ಟಿಕೆಟ್ ಬೇಕೆಂದು ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ ಇಕ್ಬಾಲ್ ಅಹಮದ್‌ರವರ ಕೈ ಹಿಡಿದಿದೆ.

ಕೋವಿಡ್ ಸಂದರ್ಭದಲ್ಲಿ ತನ್ನ ಮನೆಯನ್ನೆ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿ ಗಮನ ಸೆಳೆದಿದ್ದ ಅವರು ತನಗೆ ಮಾಜಿ ಶಾಸಕ ಶಫಿ ಅಹ್ಮದ್ ಬೆಂಬಲ ಇದೆ ಎಂದು ಹೇಳಿಕೊಂಡು ಪ್ರಚಾರ ಆರಂಭಿಸಿದ್ದಾರೆ.

2023ರ ಸಾಧ್ಯಾಸಾಧ್ಯತೆ

ಕಾಂಗ್ರೆಸ್‌ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಮತಗಳು, ದಲಿತ, ಕುರುಬ ಸಮುದಾಯದ ಮತಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ. ಕಳೆದ ಸಾರಿ ಇದ್ದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ ಇಲ್ಲಿದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಹಾಗಾಗಿ ಐದನೇ ಮುಸ್ಲಿಂ ಶಾಸಕರಾಗಲು ಅವರು ಕಾತುರರಾಗಿದ್ದಾರೆ.

ಅದೇ ರೀತಿ ಜೆಡಿಎಸ್‌ನಲ್ಲಿಯೂ ಸಹ ಗೋವಿಂದರಾಜುರವರಿಗೆ ಯಾವುದೇ ಬಂಡಾಯ ಮತ್ತು ಒಳೇಟಿನ ಭೀತಿ ಇಲ್ಲ. ಎರಡು ಬಾರಿ ಸೋತಿರುವ ಅನುಕಂಪ ಅವರಿಗಿದೆ. ಒಮ್ಮೆಯೂ ಜೆಡಿಎಸ್ ಗೆದ್ದಲ್ಲದ ತುಮಕೂರು ನಗರದಲ್ಲಿ ಈ ಬಾರಿ ಖಾತೆ ತೆರೆಯಲು ಉತ್ಸುಕರಾಗಿದ್ದಾರೆ.

ಆದರೆ ಬಿಜೆಪಿಯ ಜ್ಯೋತಿ ಗಣೇಶ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸೊಗಡು ಶಿವಣ್ಣ ಸ್ಪರ್ಧಿಸಿದರೆ ಲಿಂಗಾಯಿತ ಮತಗಳ ವಿಭಜನೆಯಾಗುತ್ತದೆ. ಆಗ 2013ರಂತೆ ಕಾಂಗ್ರೆಸ್‌ ಅಥವಾ ಜೆಡಿಎಸ್ ಅದರ ಲಾಭ ಪಡೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...