Homeಕರೋನಾ ತಲ್ಲಣತುಮಕೂರು: ಕೊರೊನಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ; ವೀಡಿಯೊ ವೈರಲ್

ತುಮಕೂರು: ಕೊರೊನಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ; ವೀಡಿಯೊ ವೈರಲ್

ಮೂರ್ನಾಲ್ಕು ದಿನಗಳಿಂದಲೂ ಸ್ನಾವನ್ನೇ ಮಾಡಿಲ್ಲ. ನಮಗೆ ಕೊರೋನ ಸೋಂಕಿನ ಲಕ್ಷಣಗಳೇ ಇಲ್ಲ. ನಮಗೆ ಕೋವಿಡ್-19 ಜಿಲ್ಲಾಸ್ಪತ್ರೆಗೆ ಕರೆತರುವಾಗ ಕಾಡಿನ ಪ್ರಾಣಿಗಳನ್ನು ಕರೆತಂದಂತೆ ತಂದರು ಎಂದು ಕೇಂದ್ರದಲ್ಲಿ ಇರುವವರು ದೂರಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲಾಸ್ಪತ್ರೆಯ ಕೋವಿಡ್-19 ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿರುವುದಕ್ಕೆ ಕೊರೊನ ಸೋಂಕಿತರೇ ಬಿಡುಗಡೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ.

ವಾರ್ಡ್ ನಲ್ಲಿ ಸುಮಾರು 16 ಹಾಸಿಗೆಗಳಿರುವ ಅಂದಾಜಿದ್ದು  ಅವರೆಲ್ಲರೂ ಬಹುತೇಕ ಯುವಕರೇ ಆಗಿದ್ದಾರೆ. ಈಗ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕುಡಿಯಲು ಬಿಸಿನೀರು ಕೊಡುತ್ತಿಲ್ಲ. ಕಸವನ್ನೂ ಹೊಡೆಯುತ್ತಿಲ್ಲ. ಯಾವುದೇ ಮಾತ್ರಗಳನ್ನೂ ಕೊಡುತ್ತಿಲ್ಲ ಎಂದು ದೂರಿದ್ದಾರೆ.

ಮೂರ್ನಾಲ್ಕು ದಿನಗಳಿಂದಲೂ ಸ್ನಾವನ್ನೇ ಮಾಡಿಲ್ಲ. ನಮಗೆ ಕೊರೋನ ಸೋಂಕಿನ ಲಕ್ಷಣಗಳೇ ಇಲ್ಲ. ನಮಗೆ ಕೋವಿಡ್-19 ಜಿಲ್ಲಾಸ್ಪತ್ರೆಗೆ ಕರೆತರುವಾಗ ಕಾಡಿನ ಪ್ರಾಣಿಗಳನ್ನು ಕರೆತಂದಂತೆ ತಂದರು.

ಗ್ರಾಮಗಳಲ್ಲಿ ಸೀಲ್ ಡೌನ್ ಮಾಡಿದರು. ಸ್ಯಾನಿಟೈಜ್ ಮಾಡಿದರು. ಆದರೆ ಈ ಆಸ್ಪತ್ರೆಯಲ್ಲಿ ನಮ್ಮನ್ನು ಪ್ರಾಣಿ ಗಳಿಗಿಂತಲೂ ಕಡೆಯಾಗಿ ನೋಡಿಕೊಳ್ಳುತ್ತಾರೆ. ಬಹಿರ್ದೆಸೆಗೆ ಹೋಗಲು ನೀರಿನ ಸಮಸ್ಯೆ ಇದೆ. ನಮ್ಮನ್ನು ಕುರಿಗಳಂತೆ ಕೂಡಿ ಹಾಕಿದ್ದಾರೆ ಎಂದು ನೋವು ತೋಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಅವರು ಚೆನ್ನಾಗಿ ಕಾರ್ಯ ನಿರ್ವಹಿಸುತ್ತಾರೆ ಎಂಬ ಕಾರಣಕ್ಕೆ ಸಂಸದ ಬಸವರಾಜು ವರ್ಗಾವಣೆಯನ್ನು ರದ್ದುಪಡಿಸಿಕೊಂಡು ಬಂದರು. ಆದರೆ ಅದೇ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದ ನಗರಪಾಲಿಕೆಯ ಆಯುಕ್ತ ಭೂಬಾಲನ್ ವರ್ಗಾವಣೆಯಾದಾಗ ಬಾಯಿಬಿಡಲಿಲ್ಲ ಸಂಸದರು ಜಾತಿ ಕಾರಣಕ್ಕೆ ಶಸ್ತ್ರಚಿಕಿತ್ಸಕರನ್ನು ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜಿಲ್ಲಾಸ್ಪತ್ರೆಯನ್ನು ಕೋವಿಡ್ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಆದರೆ ಶುಚಿತ್ವ ಕಾಪಾಡಿಕೊಂಡಿಲ್ಲ. ಉಸ್ತುವಾರಿ ನೋಡಿಕೊಳ್ಳಬೇಕಾದ ಜಿಲ್ಲಾ ಶಸ್ತ್ರಚಿಕಿತ್ಸಕರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿವೆ.


ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...