Homeಕರೋನಾ ತಲ್ಲಣತುಮಕೂರು: ಕೊರೊನಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ; ವೀಡಿಯೊ ವೈರಲ್

ತುಮಕೂರು: ಕೊರೊನಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ; ವೀಡಿಯೊ ವೈರಲ್

ಮೂರ್ನಾಲ್ಕು ದಿನಗಳಿಂದಲೂ ಸ್ನಾವನ್ನೇ ಮಾಡಿಲ್ಲ. ನಮಗೆ ಕೊರೋನ ಸೋಂಕಿನ ಲಕ್ಷಣಗಳೇ ಇಲ್ಲ. ನಮಗೆ ಕೋವಿಡ್-19 ಜಿಲ್ಲಾಸ್ಪತ್ರೆಗೆ ಕರೆತರುವಾಗ ಕಾಡಿನ ಪ್ರಾಣಿಗಳನ್ನು ಕರೆತಂದಂತೆ ತಂದರು ಎಂದು ಕೇಂದ್ರದಲ್ಲಿ ಇರುವವರು ದೂರಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲಾಸ್ಪತ್ರೆಯ ಕೋವಿಡ್-19 ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿರುವುದಕ್ಕೆ ಕೊರೊನ ಸೋಂಕಿತರೇ ಬಿಡುಗಡೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ.

ವಾರ್ಡ್ ನಲ್ಲಿ ಸುಮಾರು 16 ಹಾಸಿಗೆಗಳಿರುವ ಅಂದಾಜಿದ್ದು  ಅವರೆಲ್ಲರೂ ಬಹುತೇಕ ಯುವಕರೇ ಆಗಿದ್ದಾರೆ. ಈಗ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕುಡಿಯಲು ಬಿಸಿನೀರು ಕೊಡುತ್ತಿಲ್ಲ. ಕಸವನ್ನೂ ಹೊಡೆಯುತ್ತಿಲ್ಲ. ಯಾವುದೇ ಮಾತ್ರಗಳನ್ನೂ ಕೊಡುತ್ತಿಲ್ಲ ಎಂದು ದೂರಿದ್ದಾರೆ.

ಮೂರ್ನಾಲ್ಕು ದಿನಗಳಿಂದಲೂ ಸ್ನಾವನ್ನೇ ಮಾಡಿಲ್ಲ. ನಮಗೆ ಕೊರೋನ ಸೋಂಕಿನ ಲಕ್ಷಣಗಳೇ ಇಲ್ಲ. ನಮಗೆ ಕೋವಿಡ್-19 ಜಿಲ್ಲಾಸ್ಪತ್ರೆಗೆ ಕರೆತರುವಾಗ ಕಾಡಿನ ಪ್ರಾಣಿಗಳನ್ನು ಕರೆತಂದಂತೆ ತಂದರು.

ಗ್ರಾಮಗಳಲ್ಲಿ ಸೀಲ್ ಡೌನ್ ಮಾಡಿದರು. ಸ್ಯಾನಿಟೈಜ್ ಮಾಡಿದರು. ಆದರೆ ಈ ಆಸ್ಪತ್ರೆಯಲ್ಲಿ ನಮ್ಮನ್ನು ಪ್ರಾಣಿ ಗಳಿಗಿಂತಲೂ ಕಡೆಯಾಗಿ ನೋಡಿಕೊಳ್ಳುತ್ತಾರೆ. ಬಹಿರ್ದೆಸೆಗೆ ಹೋಗಲು ನೀರಿನ ಸಮಸ್ಯೆ ಇದೆ. ನಮ್ಮನ್ನು ಕುರಿಗಳಂತೆ ಕೂಡಿ ಹಾಕಿದ್ದಾರೆ ಎಂದು ನೋವು ತೋಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಅವರು ಚೆನ್ನಾಗಿ ಕಾರ್ಯ ನಿರ್ವಹಿಸುತ್ತಾರೆ ಎಂಬ ಕಾರಣಕ್ಕೆ ಸಂಸದ ಬಸವರಾಜು ವರ್ಗಾವಣೆಯನ್ನು ರದ್ದುಪಡಿಸಿಕೊಂಡು ಬಂದರು. ಆದರೆ ಅದೇ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದ ನಗರಪಾಲಿಕೆಯ ಆಯುಕ್ತ ಭೂಬಾಲನ್ ವರ್ಗಾವಣೆಯಾದಾಗ ಬಾಯಿಬಿಡಲಿಲ್ಲ ಸಂಸದರು ಜಾತಿ ಕಾರಣಕ್ಕೆ ಶಸ್ತ್ರಚಿಕಿತ್ಸಕರನ್ನು ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜಿಲ್ಲಾಸ್ಪತ್ರೆಯನ್ನು ಕೋವಿಡ್ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಆದರೆ ಶುಚಿತ್ವ ಕಾಪಾಡಿಕೊಂಡಿಲ್ಲ. ಉಸ್ತುವಾರಿ ನೋಡಿಕೊಳ್ಳಬೇಕಾದ ಜಿಲ್ಲಾ ಶಸ್ತ್ರಚಿಕಿತ್ಸಕರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿವೆ.


ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...