Homeಕರ್ನಾಟಕತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ...

ತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ…

- Advertisement -
- Advertisement -

ತುಮಕೂರೆಂಬೋ ದೂಳುನಗರವನ್ನು ಸ್ಮಾರ್ಟ್ ಸಿಟಿ ಎಂದು ಘೋಷಣೆ ಮಾಡಿ ಮೂರು ತಿಂಗಳು ಕಳೆದರೆ ನಾಲ್ಕು ವರ್ಷ ಪೂರ್ಣಗೊಳ್ಳಲಿದೆ. 2016 ಮಾರ್ಚ್ 11 ರಂದು ಸ್ಮಾರ್ಟ್ ಸಿಟಿಯಾಗಿ ಘೋಷಣೆ ಮಾಡಿದ್ದರೂ ನಗರ ಅಭಿವೃದ್ಧಿಯನ್ನೇ ಕಂಡಿಲ್ಲ. ಅಮಾನಿಕೆರೆಯಂಗಳವನ್ನು ಬಿಟ್ಟರೆ ಇನ್ನೆಲ್ಲಿ ನೋಡಿದರೂ ದೂಳು, ಗುಂಡಿಗಳು. ಜನರ ರಸ್ತೆಗಿಳಿದರೆ ಸಾಕು ನಗರಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳಿಗೆ ಪಕ್ಷಾತೀತವಾಗಿ ಬೈಗುಳದ ಮಳೆಯನ್ನೇ ಸುರಿಸುತ್ತಾರೆ. ಆದರೆ ಕೆಲವೊಮ್ಮೆ ಭಕ್ತರು ಹೇಳಿಕೊಳ್ಳುವಂತಿಲ್ಲ. ಬಿಡುವಂತಿಲ್ಲ. ಆದರೂ ತುಮಕೂರಿನ ಜನ ಮಾತ್ರ ಸ್ಮಾರ್ಟ್ ಆಗದೇ ಇರುವ ಸಿಟಿಯ ಬಗ್ಗೆ ಆಕ್ರೋಶವನ್ನು ಹೊರಹಾಕುತ್ತಾರೆ. ಸ್ಮಾರ್ಟ್ ಸಿಟಿಯ ಕುರಿತು ಬರೆಯಲು ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದೇ ಕಾರಣ.

ಜನವರಿ 2ರಂದು ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನಕ್ಕೆ ಮೋದಿ ಬರುತ್ತಿದ್ದಾರೆ. ಈಗ ಬಂದರೆ ಇದು ಮೂರನೇ ಭೇಟಿ. ಪ್ರಧಾನಿ ತುಮಕೂರು ಭೇಟಿಗೆ ಕಾರಣಗಳೇನು ಎಂಬ ಬಗ್ಗೆ ಮೇಲ್ನೋಟಕ್ಕೆ ಹೇಳುತ್ತಿರುವ ಅಂಶಗಳು ಪ್ರಮುಖ ಕಾರಣಗಳೇ ಅಲ್ಲ. ಮುಖ್ಯಮಂತ್ರಿಗಳಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡುವುದು, ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತು ಹಣವನ್ನು ಬಿಡುಗಡೆ ಮಾಡುವುದು, 42 ಕೃಷಿಕರಿಗೆ ಪ್ರಶಸ್ತಿ ನೀಡುವುದು ಪ್ರಮುಖ ಆದ್ಯತೆಗಳಲ್ಲ ಎಂಬುದು ಯಾರು ಬೇಕಾದರೂ ಊಹಿಸಬಹುದು. ಆದರೆ  ಪ್ರಧಾನಿ ಕಾರ್ಯಕ್ರಮಕ್ಕೆ ಬರುತ್ತಿರುವ ಹಿಂದಿನ ಉದ್ದೇಶದ ಬಗ್ಗೆ  ಆಯೋಜಕರಾಗಲೀ, ಬಿಜೆಪಿಯ ಮುಖಂಡರಾಗಲೀ ಸ್ಪಷ್ಟ ಕಾರಣ ನೀಡುತ್ತಿಲ್ಲ.

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದಾಗಲೂ ಬರಲಿಲ್ಲ. ಹೆಚ್ಚು ಜನರು ಸೇರುವ ಮತ್ತು ಭದ್ರತೆಯ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮಾಡಲಿಲ್ಲ ಎಂಬ ಸಬೂಬು ಬೇರೆ. ಈಗ ಆ ವಿಷಯ ಮುನ್ನೆಲೆಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದೀಗ ಸಿದ್ದಗಂಗಾ ಮಠದಲ್ಲಿ ಒಂದೂವರೆ ಗಂಟೆ ಕಾಲ ಕಳೆಯಲಿದ್ದಾರೆ. ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡುವುದು, ಧ್ಯಾನದಲ್ಲಿ ತೊಡಗುವ ಕಾರ್ಯಕ್ರಮಗಳು ಪೂರ್ವನಿಗದಿಯಾಗಿವೆ. ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಧ್ಯಾನ ಮಾಡಿ ದೇಶದ ಗಮನ ಸೆಳೆದ ಪ್ರಧಾನಿ ಇದೀಗ ಸಿದ್ದಗಂಗಾ ಮಠದ ಧ್ಯಾನಮಂದಿರದಲ್ಲೂ ಧ್ಯಾನ ಮಾಡಿ ದೇಶದಲ್ಲಿ ಸುದ್ದಿಯಾಗಲಿದ್ದಾರೆ. ಧ್ಯಾನದ ನಂತರವೂ ಕಾರ್ಯಕ್ರಮಕ್ಕೆ ಹಾಜರಾಗುವುದು. ಹೀಗಾಗಿ ಧ್ಯಾನಮುಖಿ ನರೇಂದ್ರ ಮೋದಿ ಮತ್ತೆ ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾಗಲಿದ್ದಾರೆ.

ಮಠದಲ್ಲೇ ಹೆಚ್ಚು ಸಮಯ ಕಳೆಯುವ ಮೂಲಕ ರಾಜ್ಯದ ಬಹುದೊಡ್ಡ ಲಿಂಗಾಯತ ಸಮುದಾಯದ ಪ್ರೀತಿ ಗಿಟ್ಟಿಸಿಕೊಳ್ಳುವ ಉದ್ದೇಶವೂ ಇದರಿಂದೆ ಇರಬಹುದು. ಹಿರಿಯ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಮಠದ ಭಕ್ತರು ಪ್ರಧಾನಿ ಭೇಟಿ ನೀಡಲಿಲ್ಲವೆಂದು ಮುನಿಸಿಕೊಂಡಿದ್ದರು. ಆ ಮುನಿಸನ್ನು ಹೋಗಲಾಡಿಸುವುದು ಮಠದಲ್ಲಿ ಹೆಚ್ಚು ಕಾಲ ಕಳೆಯುವುದರ ಹಿಂದಿನ ಉದ್ದೇಶವೆಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದಗಂಗಾ ಮಠದ ಮೂಲಕ ಪ್ರಧಾನಿ ಮೋದಿ ಏನು ಸಂದೇಶಗಳನ್ನು ರವಾನಿಸಬಹುದು ಎಂಬ ಕುತೂಹಲ ಜನರಲ್ಲಿದೆ. ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬ ಒತ್ತಾಯ ಹಲವು ವರ್ಷಗಳದ್ದು. ಆದರೆ ಕೇಂದ್ರದ ಯಾವ ಸರ್ಕಾರವೂ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಉತ್ಸಾಹ ತೋರಿಸಲಿಲ್ಲ. ನರೇಂದ್ರ ಮೋದಿ ಎರಡು ಬಾರಿ ಪ್ರಧಾನಿಯಾದರೂ ಇದರ ಬಗ್ಗೆ ಕಿವಿಗೆ ಹಾಕಿಕೊಳ್ಳಲಿಲ್ಲ. ಸಿಟ್ಟಿಗೆದ್ದ ಜನರ ಮನಸ್ಸನ್ನು ಸೆಳೆಯುವುದು ಭೇಟಿಯ ಹಿಂದಿನ ಉದ್ದೇಶವೇ? ಇರಬಹುದು.

ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮಿಸಿದರೆ ತುಮಕೂರು ಚಿತ್ರದುರ್ಗ ರಾಜಕೀಯವಾಗಿ (ಸಂಸತ್ ಚುನಾವಣೆಯಲ್ಲಿ) ಬಿಜೆಪಿ ತೆಕ್ಕೆಗೆ ಹೋಗಿರುವುದು ಪ್ರಮುಖ ಕಾರಣ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿದಿರುವುದು ಮಗದೊಂದು ಕಾರಣ. ಕೆಲವೇ ದಿನಗಳ ಹಿಂದೆ ಆರ್‌ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತುಮಕೂರು ಜಿಲ್ಲೆಯ ಪಾವಗಡಕ್ಕೆ ಭೇಟಿ ನೀಡಿರುವುದು ಕೂಡ ಗಮನಾರ್ಹ ಸಂಗತಿ. ಪ್ರಧಾನಿ ಸುಮ್ಮಸುಮ್ಮನೆ ತುಮಕೂರಿಗೆ ಭೇಟಿ ನೀಡುತ್ತಿಲ್ಲ. ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರವನ್ನು ಹಾಕಿಯೇ ಭೇಟಿ ನೀಡುತ್ತಿರುವುದು ಎನ್ನಲಾಗುತ್ತಿದೆ.

ಮೇಲೆಯೇ ಹೇಳಿದಂತೆ ತುಮಕೂರು ಸ್ಮಾರ್ಟ್ ಸಿಟಿ ಆಗಿದ್ದರೂ ಇದುವರೆಗೂ ಸ್ಮಾರ್ಟ್ ಅಂತೂ ಆಗಿಲ್ಲ. ರಸ್ತೆಗಳು ಗುಂಡಿ ಗುದ್ರಗಳಿಂದ ಕೂಡಿವೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆಂಬ ಕಾರಣಕ್ಕೆ ತೇಪೆ ಹಚ್ಚುವ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಸೇರಿಕೊಂಡಿದ್ದ ದೂಳನ್ನು ಹೊಡೆದು ಟಾರು ಹಾಕುವ ಕಾರ್ಯ ಭರದಿಂದ ನಡೆಯುತ್ತಿದೆ. ರಸ್ತೆಗಳಿಗೆ ನೀರು ಸಿಂಪಡಿಸಲಾಗುತ್ತಿದೆ. ನಗರದಲ್ಲಿ ಹಾದುಹೋಗಿರುವ ಬಿ.ಎಚ್.ರಸ್ತೆಯ ಡಾಂಬರೀಕಣ ಕಾರ್ಯ ಹಗಲಿರುಳು ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ಸರ್ವೀಸ್ ರಸ್ತೆ ಹಲವು ದಿನಗಳಿಂದ ಕುಂಠಿತಗೊಂಡಿತ್ತು. ಈಗ ಆ ಸರ್ವೀಸ್ ರಸ್ತೆಯನ್ನು ಹೊಳೆಯುವಂತೆ ಮಾಡಲಾಗಿದೆ. ಆಟೋ ಚಾಲಕರು, ಬೈಕ್ ಸವಾರರು, ಸಾರ್ವಜನಿಕರು ನಗರದಲ್ಲಿ (ಪ್ರಮುಖ ರಸ್ತೆ) ನಡೆಯುತ್ತಿರುವ ಕೆಲಸ ನೋಡಿ, “ಮೋದಿ ತಿಂಗಳಿಗೊಮ್ಮೆಯಾದರೂ ಬರ್ಲಪ್ಪ” ಅಂತ ಮನವಿ ಮಾಡುತ್ತಿದ್ದಾರೆ.

ಜನರ ನೋವು ಮನವಿಯಾಗಿ ಪರಿವರ್ತನೆಯಾಗಿದೆ. ರಸ್ತೆಗಳಲ್ಲಿನ ಗುಂಡಿ ಗುದ್ರೆಗಳು ದೂಳು ಇರುವದನ್ನು ಯಾರಿಗೆ ಹೇಳಿದರೂ ಸ್ವಚ್ಚಗೊಳಿಸುವ ಗೋಜಿಗೆ ಹೋಗದೇ ಇರುವುದರಿಂದ ಮೋದಿ ಮತ್ತೆ ಮತ್ತೆ ಬರ್ಲಪ್ಪ ಎನ್ನುವ ಮನವಿ ಮಾಡುತ್ತಿದ್ದಾರೆ ಜನ. ಹಾಗಾಗಿವೆ ತುಮಕೂರು ನಗರದ ರಸ್ತೆಗಳು. ಸಿದ್ದಗಂಗಾ ಮಠ, ಕ್ಯಾತ್ಸಂದ್ರದಿಂದ ಹಿಡಿದು ಟೌನ್ ಹಾಲ್ ವರೆಗಿನ ಬಿ.ಎಚ್.ರಸ್ತೆಯನ್ನು ಶುಚಿಗೊಳಿಸಿ ಡಾಂಬರು ಹಾಕಲಾಗುತ್ತಿದೆ. ಆದರೆ ಒಳಗಿನ ರಸ್ತೆಗಳಲ್ಲಿ ಅದೇ ದೂಳು, ದಡಕ್ಕೆನ್ನುವ ಗುದ್ರಗಳು, ಅಗೆದ ರಸ್ತೆಗಳು, ಡಾಂಬರ್ ಕಾಣದ ರಸ್ತೆ ಬದಿಗಳು, ಜಿಯೋ, ನೀರು, ಗ್ಯಾಸ್ ಗಾಗಿ ಅಗೆದಿರುವ ಜಾಡುಗಳು ಎದ್ದು ಕಾಣುತ್ತಿವೆ. ಅವುಗಳು ಯಾವಾಗ ರಿಪೇರಿ ಕಾಣತ್ತವೋ ಎಂದು ಜನ ಕಾಯುತ್ತಿದ್ದಾರೆ.

ಸ್ಮಾರ್ಟ್ ಸಿಟಿಯ ಕೆಲಸಗಳು ಕುಂಟುತ್ತಾ ಸಾಗಿವೆ. ದೊಡ್ಡದೊಡ್ಡ ಗುಂಡಿಗಳು ಜನರ ಗಮನ ಸೆಳೆಯುತ್ತವೆ. ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಬೋರ್ಡುಗಳ ಕಾಣಸಿಗುತ್ತವೆ. ರೆಡ್ ಟೇಪ್ ಗಳು ರಸ್ತೆಗಳಲ್ಲಿ ಓಡಾಡುವ ವಾಹನ ಸವಾರರಿಗೆ ರಾಚುತ್ತಿವೆ. ಬೀದಿ ದೀಪಗಳಿಲ್ಲದ ವೇಳೆಯಲ್ಲಿ ರಸ್ತೆಯಲ್ಲಿ ಬೈಕ್ ಸವಾರರು ಪ್ರಯಾಣಿಸಿದರೆ ಬೀಳುವುದು ಗ್ಯಾರೆಂಟಿ. ಹೆಲ್ಮೆಟ್ಟಿದ್ದರೆ ತಲೆಗೆ ಪಟ್ಟಿಲ್ಲ. ಕೈಕಾಲು ಮರಿದರೆ ಕೇಳೋರಿಲ್ಲ ಅನ್ನುವಂತಹ ಪರಿಸ್ಥಿತಿ ಇದೆ. ತುಮಕೂರು ನಗರದ ಜನರ ಗೋಳು ಸಾಕಷ್ಟಿವೆ. ಸ್ಮಾರ್ಟ್ ಸಿಟಿಯ ಅವಾಂತರಗಳಿಗೆ ಜನ ರೋಸಿ ಹೋಗಿದ್ದಾರೆ. ಜನ ಕೇಳುವ ಪ್ರಶ್ನೆಗಳಿಗೆ ಮೋದಿ ಸಾಹೇಬರು ಉತ್ತರಿಸುತ್ತಾರೆಯೇ. ಸ್ಮಾರ್ಟ್ ಸಿಟಿಯಲ್ಲಿ ಆಗಿರುವ ಅವ್ಯವಹಾರದ ವಿರುದ್ದ ಕ್ರಮ ಕೈಗೊಳ್ಳುತ್ತಾರೆಯೇ? ಮೌನವಹಿಸುತ್ತಾರೆ? ನಾನು ತಿನ್ನುವುದಿಲ್ಲ. ತಿನ್ನಲೂ ಬಿಡುವುದಿಲ್ಲ ಎಂಬ ಮಾತನ್ನು ಉಳಿಸಿಕೊಳ್ಳುತ್ತಾರೆಯೇ ನೋಡಬೇಕು.

ಪುಸ್ತಕದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಪ್ರಶಸ್ತಿಗಳು ಬರುತ್ತಲೇ ಇವೆ. ಪತ್ರಿಕೆಗಳು ಅದನ್ನು ಪ್ರಕಟಿಸುತ್ತಲೇ ಇವೆ. ಆದರೆ ಸ್ಮಾರ್ಟ್ ಸಿಟಿಯಿಂದ ಜನರಿಗೆ ಯಾವ ಪ್ರಯೋಜವಾಗಿದೆ ಎಂಬುದನ್ನು ಇದುವರೆಗೂ ಪ್ರಕಟಿಸಿಲ್ಲ. ಪಾರದರ್ಶಕತೆ, ಬದ್ದತೆ ಅಂದರೆ ಇದೇ ಇರಬೇಕು. ಪಾರದರ್ಶಕತೆ ಇಲ್ಲದ ಕಾಮಗಾರಿ ಬದ್ದತೆ ಇಲ್ಲದ ಕೆಲಸ ಎರಡೂ ವ್ಯರ್ಥ. ಹೀಗಾಗಿ ಪ್ರಧಾನಿಗಳಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳಿಗೆ ಮನ್ನಣೆ ಸಿಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...