Homeಕರ್ನಾಟಕತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ...

ತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ…

- Advertisement -
- Advertisement -

ತುಮಕೂರೆಂಬೋ ದೂಳುನಗರವನ್ನು ಸ್ಮಾರ್ಟ್ ಸಿಟಿ ಎಂದು ಘೋಷಣೆ ಮಾಡಿ ಮೂರು ತಿಂಗಳು ಕಳೆದರೆ ನಾಲ್ಕು ವರ್ಷ ಪೂರ್ಣಗೊಳ್ಳಲಿದೆ. 2016 ಮಾರ್ಚ್ 11 ರಂದು ಸ್ಮಾರ್ಟ್ ಸಿಟಿಯಾಗಿ ಘೋಷಣೆ ಮಾಡಿದ್ದರೂ ನಗರ ಅಭಿವೃದ್ಧಿಯನ್ನೇ ಕಂಡಿಲ್ಲ. ಅಮಾನಿಕೆರೆಯಂಗಳವನ್ನು ಬಿಟ್ಟರೆ ಇನ್ನೆಲ್ಲಿ ನೋಡಿದರೂ ದೂಳು, ಗುಂಡಿಗಳು. ಜನರ ರಸ್ತೆಗಿಳಿದರೆ ಸಾಕು ನಗರಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳಿಗೆ ಪಕ್ಷಾತೀತವಾಗಿ ಬೈಗುಳದ ಮಳೆಯನ್ನೇ ಸುರಿಸುತ್ತಾರೆ. ಆದರೆ ಕೆಲವೊಮ್ಮೆ ಭಕ್ತರು ಹೇಳಿಕೊಳ್ಳುವಂತಿಲ್ಲ. ಬಿಡುವಂತಿಲ್ಲ. ಆದರೂ ತುಮಕೂರಿನ ಜನ ಮಾತ್ರ ಸ್ಮಾರ್ಟ್ ಆಗದೇ ಇರುವ ಸಿಟಿಯ ಬಗ್ಗೆ ಆಕ್ರೋಶವನ್ನು ಹೊರಹಾಕುತ್ತಾರೆ. ಸ್ಮಾರ್ಟ್ ಸಿಟಿಯ ಕುರಿತು ಬರೆಯಲು ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದೇ ಕಾರಣ.

ಜನವರಿ 2ರಂದು ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನಕ್ಕೆ ಮೋದಿ ಬರುತ್ತಿದ್ದಾರೆ. ಈಗ ಬಂದರೆ ಇದು ಮೂರನೇ ಭೇಟಿ. ಪ್ರಧಾನಿ ತುಮಕೂರು ಭೇಟಿಗೆ ಕಾರಣಗಳೇನು ಎಂಬ ಬಗ್ಗೆ ಮೇಲ್ನೋಟಕ್ಕೆ ಹೇಳುತ್ತಿರುವ ಅಂಶಗಳು ಪ್ರಮುಖ ಕಾರಣಗಳೇ ಅಲ್ಲ. ಮುಖ್ಯಮಂತ್ರಿಗಳಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡುವುದು, ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತು ಹಣವನ್ನು ಬಿಡುಗಡೆ ಮಾಡುವುದು, 42 ಕೃಷಿಕರಿಗೆ ಪ್ರಶಸ್ತಿ ನೀಡುವುದು ಪ್ರಮುಖ ಆದ್ಯತೆಗಳಲ್ಲ ಎಂಬುದು ಯಾರು ಬೇಕಾದರೂ ಊಹಿಸಬಹುದು. ಆದರೆ  ಪ್ರಧಾನಿ ಕಾರ್ಯಕ್ರಮಕ್ಕೆ ಬರುತ್ತಿರುವ ಹಿಂದಿನ ಉದ್ದೇಶದ ಬಗ್ಗೆ  ಆಯೋಜಕರಾಗಲೀ, ಬಿಜೆಪಿಯ ಮುಖಂಡರಾಗಲೀ ಸ್ಪಷ್ಟ ಕಾರಣ ನೀಡುತ್ತಿಲ್ಲ.

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದಾಗಲೂ ಬರಲಿಲ್ಲ. ಹೆಚ್ಚು ಜನರು ಸೇರುವ ಮತ್ತು ಭದ್ರತೆಯ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮಾಡಲಿಲ್ಲ ಎಂಬ ಸಬೂಬು ಬೇರೆ. ಈಗ ಆ ವಿಷಯ ಮುನ್ನೆಲೆಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದೀಗ ಸಿದ್ದಗಂಗಾ ಮಠದಲ್ಲಿ ಒಂದೂವರೆ ಗಂಟೆ ಕಾಲ ಕಳೆಯಲಿದ್ದಾರೆ. ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡುವುದು, ಧ್ಯಾನದಲ್ಲಿ ತೊಡಗುವ ಕಾರ್ಯಕ್ರಮಗಳು ಪೂರ್ವನಿಗದಿಯಾಗಿವೆ. ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಧ್ಯಾನ ಮಾಡಿ ದೇಶದ ಗಮನ ಸೆಳೆದ ಪ್ರಧಾನಿ ಇದೀಗ ಸಿದ್ದಗಂಗಾ ಮಠದ ಧ್ಯಾನಮಂದಿರದಲ್ಲೂ ಧ್ಯಾನ ಮಾಡಿ ದೇಶದಲ್ಲಿ ಸುದ್ದಿಯಾಗಲಿದ್ದಾರೆ. ಧ್ಯಾನದ ನಂತರವೂ ಕಾರ್ಯಕ್ರಮಕ್ಕೆ ಹಾಜರಾಗುವುದು. ಹೀಗಾಗಿ ಧ್ಯಾನಮುಖಿ ನರೇಂದ್ರ ಮೋದಿ ಮತ್ತೆ ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾಗಲಿದ್ದಾರೆ.

ಮಠದಲ್ಲೇ ಹೆಚ್ಚು ಸಮಯ ಕಳೆಯುವ ಮೂಲಕ ರಾಜ್ಯದ ಬಹುದೊಡ್ಡ ಲಿಂಗಾಯತ ಸಮುದಾಯದ ಪ್ರೀತಿ ಗಿಟ್ಟಿಸಿಕೊಳ್ಳುವ ಉದ್ದೇಶವೂ ಇದರಿಂದೆ ಇರಬಹುದು. ಹಿರಿಯ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಮಠದ ಭಕ್ತರು ಪ್ರಧಾನಿ ಭೇಟಿ ನೀಡಲಿಲ್ಲವೆಂದು ಮುನಿಸಿಕೊಂಡಿದ್ದರು. ಆ ಮುನಿಸನ್ನು ಹೋಗಲಾಡಿಸುವುದು ಮಠದಲ್ಲಿ ಹೆಚ್ಚು ಕಾಲ ಕಳೆಯುವುದರ ಹಿಂದಿನ ಉದ್ದೇಶವೆಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದಗಂಗಾ ಮಠದ ಮೂಲಕ ಪ್ರಧಾನಿ ಮೋದಿ ಏನು ಸಂದೇಶಗಳನ್ನು ರವಾನಿಸಬಹುದು ಎಂಬ ಕುತೂಹಲ ಜನರಲ್ಲಿದೆ. ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬ ಒತ್ತಾಯ ಹಲವು ವರ್ಷಗಳದ್ದು. ಆದರೆ ಕೇಂದ್ರದ ಯಾವ ಸರ್ಕಾರವೂ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಉತ್ಸಾಹ ತೋರಿಸಲಿಲ್ಲ. ನರೇಂದ್ರ ಮೋದಿ ಎರಡು ಬಾರಿ ಪ್ರಧಾನಿಯಾದರೂ ಇದರ ಬಗ್ಗೆ ಕಿವಿಗೆ ಹಾಕಿಕೊಳ್ಳಲಿಲ್ಲ. ಸಿಟ್ಟಿಗೆದ್ದ ಜನರ ಮನಸ್ಸನ್ನು ಸೆಳೆಯುವುದು ಭೇಟಿಯ ಹಿಂದಿನ ಉದ್ದೇಶವೇ? ಇರಬಹುದು.

ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮಿಸಿದರೆ ತುಮಕೂರು ಚಿತ್ರದುರ್ಗ ರಾಜಕೀಯವಾಗಿ (ಸಂಸತ್ ಚುನಾವಣೆಯಲ್ಲಿ) ಬಿಜೆಪಿ ತೆಕ್ಕೆಗೆ ಹೋಗಿರುವುದು ಪ್ರಮುಖ ಕಾರಣ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿದಿರುವುದು ಮಗದೊಂದು ಕಾರಣ. ಕೆಲವೇ ದಿನಗಳ ಹಿಂದೆ ಆರ್‌ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತುಮಕೂರು ಜಿಲ್ಲೆಯ ಪಾವಗಡಕ್ಕೆ ಭೇಟಿ ನೀಡಿರುವುದು ಕೂಡ ಗಮನಾರ್ಹ ಸಂಗತಿ. ಪ್ರಧಾನಿ ಸುಮ್ಮಸುಮ್ಮನೆ ತುಮಕೂರಿಗೆ ಭೇಟಿ ನೀಡುತ್ತಿಲ್ಲ. ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರವನ್ನು ಹಾಕಿಯೇ ಭೇಟಿ ನೀಡುತ್ತಿರುವುದು ಎನ್ನಲಾಗುತ್ತಿದೆ.

ಮೇಲೆಯೇ ಹೇಳಿದಂತೆ ತುಮಕೂರು ಸ್ಮಾರ್ಟ್ ಸಿಟಿ ಆಗಿದ್ದರೂ ಇದುವರೆಗೂ ಸ್ಮಾರ್ಟ್ ಅಂತೂ ಆಗಿಲ್ಲ. ರಸ್ತೆಗಳು ಗುಂಡಿ ಗುದ್ರಗಳಿಂದ ಕೂಡಿವೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆಂಬ ಕಾರಣಕ್ಕೆ ತೇಪೆ ಹಚ್ಚುವ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಸೇರಿಕೊಂಡಿದ್ದ ದೂಳನ್ನು ಹೊಡೆದು ಟಾರು ಹಾಕುವ ಕಾರ್ಯ ಭರದಿಂದ ನಡೆಯುತ್ತಿದೆ. ರಸ್ತೆಗಳಿಗೆ ನೀರು ಸಿಂಪಡಿಸಲಾಗುತ್ತಿದೆ. ನಗರದಲ್ಲಿ ಹಾದುಹೋಗಿರುವ ಬಿ.ಎಚ್.ರಸ್ತೆಯ ಡಾಂಬರೀಕಣ ಕಾರ್ಯ ಹಗಲಿರುಳು ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ಸರ್ವೀಸ್ ರಸ್ತೆ ಹಲವು ದಿನಗಳಿಂದ ಕುಂಠಿತಗೊಂಡಿತ್ತು. ಈಗ ಆ ಸರ್ವೀಸ್ ರಸ್ತೆಯನ್ನು ಹೊಳೆಯುವಂತೆ ಮಾಡಲಾಗಿದೆ. ಆಟೋ ಚಾಲಕರು, ಬೈಕ್ ಸವಾರರು, ಸಾರ್ವಜನಿಕರು ನಗರದಲ್ಲಿ (ಪ್ರಮುಖ ರಸ್ತೆ) ನಡೆಯುತ್ತಿರುವ ಕೆಲಸ ನೋಡಿ, “ಮೋದಿ ತಿಂಗಳಿಗೊಮ್ಮೆಯಾದರೂ ಬರ್ಲಪ್ಪ” ಅಂತ ಮನವಿ ಮಾಡುತ್ತಿದ್ದಾರೆ.

ಜನರ ನೋವು ಮನವಿಯಾಗಿ ಪರಿವರ್ತನೆಯಾಗಿದೆ. ರಸ್ತೆಗಳಲ್ಲಿನ ಗುಂಡಿ ಗುದ್ರೆಗಳು ದೂಳು ಇರುವದನ್ನು ಯಾರಿಗೆ ಹೇಳಿದರೂ ಸ್ವಚ್ಚಗೊಳಿಸುವ ಗೋಜಿಗೆ ಹೋಗದೇ ಇರುವುದರಿಂದ ಮೋದಿ ಮತ್ತೆ ಮತ್ತೆ ಬರ್ಲಪ್ಪ ಎನ್ನುವ ಮನವಿ ಮಾಡುತ್ತಿದ್ದಾರೆ ಜನ. ಹಾಗಾಗಿವೆ ತುಮಕೂರು ನಗರದ ರಸ್ತೆಗಳು. ಸಿದ್ದಗಂಗಾ ಮಠ, ಕ್ಯಾತ್ಸಂದ್ರದಿಂದ ಹಿಡಿದು ಟೌನ್ ಹಾಲ್ ವರೆಗಿನ ಬಿ.ಎಚ್.ರಸ್ತೆಯನ್ನು ಶುಚಿಗೊಳಿಸಿ ಡಾಂಬರು ಹಾಕಲಾಗುತ್ತಿದೆ. ಆದರೆ ಒಳಗಿನ ರಸ್ತೆಗಳಲ್ಲಿ ಅದೇ ದೂಳು, ದಡಕ್ಕೆನ್ನುವ ಗುದ್ರಗಳು, ಅಗೆದ ರಸ್ತೆಗಳು, ಡಾಂಬರ್ ಕಾಣದ ರಸ್ತೆ ಬದಿಗಳು, ಜಿಯೋ, ನೀರು, ಗ್ಯಾಸ್ ಗಾಗಿ ಅಗೆದಿರುವ ಜಾಡುಗಳು ಎದ್ದು ಕಾಣುತ್ತಿವೆ. ಅವುಗಳು ಯಾವಾಗ ರಿಪೇರಿ ಕಾಣತ್ತವೋ ಎಂದು ಜನ ಕಾಯುತ್ತಿದ್ದಾರೆ.

ಸ್ಮಾರ್ಟ್ ಸಿಟಿಯ ಕೆಲಸಗಳು ಕುಂಟುತ್ತಾ ಸಾಗಿವೆ. ದೊಡ್ಡದೊಡ್ಡ ಗುಂಡಿಗಳು ಜನರ ಗಮನ ಸೆಳೆಯುತ್ತವೆ. ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಬೋರ್ಡುಗಳ ಕಾಣಸಿಗುತ್ತವೆ. ರೆಡ್ ಟೇಪ್ ಗಳು ರಸ್ತೆಗಳಲ್ಲಿ ಓಡಾಡುವ ವಾಹನ ಸವಾರರಿಗೆ ರಾಚುತ್ತಿವೆ. ಬೀದಿ ದೀಪಗಳಿಲ್ಲದ ವೇಳೆಯಲ್ಲಿ ರಸ್ತೆಯಲ್ಲಿ ಬೈಕ್ ಸವಾರರು ಪ್ರಯಾಣಿಸಿದರೆ ಬೀಳುವುದು ಗ್ಯಾರೆಂಟಿ. ಹೆಲ್ಮೆಟ್ಟಿದ್ದರೆ ತಲೆಗೆ ಪಟ್ಟಿಲ್ಲ. ಕೈಕಾಲು ಮರಿದರೆ ಕೇಳೋರಿಲ್ಲ ಅನ್ನುವಂತಹ ಪರಿಸ್ಥಿತಿ ಇದೆ. ತುಮಕೂರು ನಗರದ ಜನರ ಗೋಳು ಸಾಕಷ್ಟಿವೆ. ಸ್ಮಾರ್ಟ್ ಸಿಟಿಯ ಅವಾಂತರಗಳಿಗೆ ಜನ ರೋಸಿ ಹೋಗಿದ್ದಾರೆ. ಜನ ಕೇಳುವ ಪ್ರಶ್ನೆಗಳಿಗೆ ಮೋದಿ ಸಾಹೇಬರು ಉತ್ತರಿಸುತ್ತಾರೆಯೇ. ಸ್ಮಾರ್ಟ್ ಸಿಟಿಯಲ್ಲಿ ಆಗಿರುವ ಅವ್ಯವಹಾರದ ವಿರುದ್ದ ಕ್ರಮ ಕೈಗೊಳ್ಳುತ್ತಾರೆಯೇ? ಮೌನವಹಿಸುತ್ತಾರೆ? ನಾನು ತಿನ್ನುವುದಿಲ್ಲ. ತಿನ್ನಲೂ ಬಿಡುವುದಿಲ್ಲ ಎಂಬ ಮಾತನ್ನು ಉಳಿಸಿಕೊಳ್ಳುತ್ತಾರೆಯೇ ನೋಡಬೇಕು.

ಪುಸ್ತಕದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಪ್ರಶಸ್ತಿಗಳು ಬರುತ್ತಲೇ ಇವೆ. ಪತ್ರಿಕೆಗಳು ಅದನ್ನು ಪ್ರಕಟಿಸುತ್ತಲೇ ಇವೆ. ಆದರೆ ಸ್ಮಾರ್ಟ್ ಸಿಟಿಯಿಂದ ಜನರಿಗೆ ಯಾವ ಪ್ರಯೋಜವಾಗಿದೆ ಎಂಬುದನ್ನು ಇದುವರೆಗೂ ಪ್ರಕಟಿಸಿಲ್ಲ. ಪಾರದರ್ಶಕತೆ, ಬದ್ದತೆ ಅಂದರೆ ಇದೇ ಇರಬೇಕು. ಪಾರದರ್ಶಕತೆ ಇಲ್ಲದ ಕಾಮಗಾರಿ ಬದ್ದತೆ ಇಲ್ಲದ ಕೆಲಸ ಎರಡೂ ವ್ಯರ್ಥ. ಹೀಗಾಗಿ ಪ್ರಧಾನಿಗಳಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳಿಗೆ ಮನ್ನಣೆ ಸಿಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...