Homeಕರ್ನಾಟಕತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ...

ತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ…

- Advertisement -
- Advertisement -

ತುಮಕೂರೆಂಬೋ ದೂಳುನಗರವನ್ನು ಸ್ಮಾರ್ಟ್ ಸಿಟಿ ಎಂದು ಘೋಷಣೆ ಮಾಡಿ ಮೂರು ತಿಂಗಳು ಕಳೆದರೆ ನಾಲ್ಕು ವರ್ಷ ಪೂರ್ಣಗೊಳ್ಳಲಿದೆ. 2016 ಮಾರ್ಚ್ 11 ರಂದು ಸ್ಮಾರ್ಟ್ ಸಿಟಿಯಾಗಿ ಘೋಷಣೆ ಮಾಡಿದ್ದರೂ ನಗರ ಅಭಿವೃದ್ಧಿಯನ್ನೇ ಕಂಡಿಲ್ಲ. ಅಮಾನಿಕೆರೆಯಂಗಳವನ್ನು ಬಿಟ್ಟರೆ ಇನ್ನೆಲ್ಲಿ ನೋಡಿದರೂ ದೂಳು, ಗುಂಡಿಗಳು. ಜನರ ರಸ್ತೆಗಿಳಿದರೆ ಸಾಕು ನಗರಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳಿಗೆ ಪಕ್ಷಾತೀತವಾಗಿ ಬೈಗುಳದ ಮಳೆಯನ್ನೇ ಸುರಿಸುತ್ತಾರೆ. ಆದರೆ ಕೆಲವೊಮ್ಮೆ ಭಕ್ತರು ಹೇಳಿಕೊಳ್ಳುವಂತಿಲ್ಲ. ಬಿಡುವಂತಿಲ್ಲ. ಆದರೂ ತುಮಕೂರಿನ ಜನ ಮಾತ್ರ ಸ್ಮಾರ್ಟ್ ಆಗದೇ ಇರುವ ಸಿಟಿಯ ಬಗ್ಗೆ ಆಕ್ರೋಶವನ್ನು ಹೊರಹಾಕುತ್ತಾರೆ. ಸ್ಮಾರ್ಟ್ ಸಿಟಿಯ ಕುರಿತು ಬರೆಯಲು ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದೇ ಕಾರಣ.

ಜನವರಿ 2ರಂದು ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನಕ್ಕೆ ಮೋದಿ ಬರುತ್ತಿದ್ದಾರೆ. ಈಗ ಬಂದರೆ ಇದು ಮೂರನೇ ಭೇಟಿ. ಪ್ರಧಾನಿ ತುಮಕೂರು ಭೇಟಿಗೆ ಕಾರಣಗಳೇನು ಎಂಬ ಬಗ್ಗೆ ಮೇಲ್ನೋಟಕ್ಕೆ ಹೇಳುತ್ತಿರುವ ಅಂಶಗಳು ಪ್ರಮುಖ ಕಾರಣಗಳೇ ಅಲ್ಲ. ಮುಖ್ಯಮಂತ್ರಿಗಳಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡುವುದು, ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತು ಹಣವನ್ನು ಬಿಡುಗಡೆ ಮಾಡುವುದು, 42 ಕೃಷಿಕರಿಗೆ ಪ್ರಶಸ್ತಿ ನೀಡುವುದು ಪ್ರಮುಖ ಆದ್ಯತೆಗಳಲ್ಲ ಎಂಬುದು ಯಾರು ಬೇಕಾದರೂ ಊಹಿಸಬಹುದು. ಆದರೆ  ಪ್ರಧಾನಿ ಕಾರ್ಯಕ್ರಮಕ್ಕೆ ಬರುತ್ತಿರುವ ಹಿಂದಿನ ಉದ್ದೇಶದ ಬಗ್ಗೆ  ಆಯೋಜಕರಾಗಲೀ, ಬಿಜೆಪಿಯ ಮುಖಂಡರಾಗಲೀ ಸ್ಪಷ್ಟ ಕಾರಣ ನೀಡುತ್ತಿಲ್ಲ.

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದಾಗಲೂ ಬರಲಿಲ್ಲ. ಹೆಚ್ಚು ಜನರು ಸೇರುವ ಮತ್ತು ಭದ್ರತೆಯ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮಾಡಲಿಲ್ಲ ಎಂಬ ಸಬೂಬು ಬೇರೆ. ಈಗ ಆ ವಿಷಯ ಮುನ್ನೆಲೆಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದೀಗ ಸಿದ್ದಗಂಗಾ ಮಠದಲ್ಲಿ ಒಂದೂವರೆ ಗಂಟೆ ಕಾಲ ಕಳೆಯಲಿದ್ದಾರೆ. ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡುವುದು, ಧ್ಯಾನದಲ್ಲಿ ತೊಡಗುವ ಕಾರ್ಯಕ್ರಮಗಳು ಪೂರ್ವನಿಗದಿಯಾಗಿವೆ. ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಧ್ಯಾನ ಮಾಡಿ ದೇಶದ ಗಮನ ಸೆಳೆದ ಪ್ರಧಾನಿ ಇದೀಗ ಸಿದ್ದಗಂಗಾ ಮಠದ ಧ್ಯಾನಮಂದಿರದಲ್ಲೂ ಧ್ಯಾನ ಮಾಡಿ ದೇಶದಲ್ಲಿ ಸುದ್ದಿಯಾಗಲಿದ್ದಾರೆ. ಧ್ಯಾನದ ನಂತರವೂ ಕಾರ್ಯಕ್ರಮಕ್ಕೆ ಹಾಜರಾಗುವುದು. ಹೀಗಾಗಿ ಧ್ಯಾನಮುಖಿ ನರೇಂದ್ರ ಮೋದಿ ಮತ್ತೆ ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾಗಲಿದ್ದಾರೆ.

ಮಠದಲ್ಲೇ ಹೆಚ್ಚು ಸಮಯ ಕಳೆಯುವ ಮೂಲಕ ರಾಜ್ಯದ ಬಹುದೊಡ್ಡ ಲಿಂಗಾಯತ ಸಮುದಾಯದ ಪ್ರೀತಿ ಗಿಟ್ಟಿಸಿಕೊಳ್ಳುವ ಉದ್ದೇಶವೂ ಇದರಿಂದೆ ಇರಬಹುದು. ಹಿರಿಯ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಮಠದ ಭಕ್ತರು ಪ್ರಧಾನಿ ಭೇಟಿ ನೀಡಲಿಲ್ಲವೆಂದು ಮುನಿಸಿಕೊಂಡಿದ್ದರು. ಆ ಮುನಿಸನ್ನು ಹೋಗಲಾಡಿಸುವುದು ಮಠದಲ್ಲಿ ಹೆಚ್ಚು ಕಾಲ ಕಳೆಯುವುದರ ಹಿಂದಿನ ಉದ್ದೇಶವೆಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದಗಂಗಾ ಮಠದ ಮೂಲಕ ಪ್ರಧಾನಿ ಮೋದಿ ಏನು ಸಂದೇಶಗಳನ್ನು ರವಾನಿಸಬಹುದು ಎಂಬ ಕುತೂಹಲ ಜನರಲ್ಲಿದೆ. ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬ ಒತ್ತಾಯ ಹಲವು ವರ್ಷಗಳದ್ದು. ಆದರೆ ಕೇಂದ್ರದ ಯಾವ ಸರ್ಕಾರವೂ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಉತ್ಸಾಹ ತೋರಿಸಲಿಲ್ಲ. ನರೇಂದ್ರ ಮೋದಿ ಎರಡು ಬಾರಿ ಪ್ರಧಾನಿಯಾದರೂ ಇದರ ಬಗ್ಗೆ ಕಿವಿಗೆ ಹಾಕಿಕೊಳ್ಳಲಿಲ್ಲ. ಸಿಟ್ಟಿಗೆದ್ದ ಜನರ ಮನಸ್ಸನ್ನು ಸೆಳೆಯುವುದು ಭೇಟಿಯ ಹಿಂದಿನ ಉದ್ದೇಶವೇ? ಇರಬಹುದು.

ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮಿಸಿದರೆ ತುಮಕೂರು ಚಿತ್ರದುರ್ಗ ರಾಜಕೀಯವಾಗಿ (ಸಂಸತ್ ಚುನಾವಣೆಯಲ್ಲಿ) ಬಿಜೆಪಿ ತೆಕ್ಕೆಗೆ ಹೋಗಿರುವುದು ಪ್ರಮುಖ ಕಾರಣ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿದಿರುವುದು ಮಗದೊಂದು ಕಾರಣ. ಕೆಲವೇ ದಿನಗಳ ಹಿಂದೆ ಆರ್‌ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತುಮಕೂರು ಜಿಲ್ಲೆಯ ಪಾವಗಡಕ್ಕೆ ಭೇಟಿ ನೀಡಿರುವುದು ಕೂಡ ಗಮನಾರ್ಹ ಸಂಗತಿ. ಪ್ರಧಾನಿ ಸುಮ್ಮಸುಮ್ಮನೆ ತುಮಕೂರಿಗೆ ಭೇಟಿ ನೀಡುತ್ತಿಲ್ಲ. ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರವನ್ನು ಹಾಕಿಯೇ ಭೇಟಿ ನೀಡುತ್ತಿರುವುದು ಎನ್ನಲಾಗುತ್ತಿದೆ.

ಮೇಲೆಯೇ ಹೇಳಿದಂತೆ ತುಮಕೂರು ಸ್ಮಾರ್ಟ್ ಸಿಟಿ ಆಗಿದ್ದರೂ ಇದುವರೆಗೂ ಸ್ಮಾರ್ಟ್ ಅಂತೂ ಆಗಿಲ್ಲ. ರಸ್ತೆಗಳು ಗುಂಡಿ ಗುದ್ರಗಳಿಂದ ಕೂಡಿವೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆಂಬ ಕಾರಣಕ್ಕೆ ತೇಪೆ ಹಚ್ಚುವ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಸೇರಿಕೊಂಡಿದ್ದ ದೂಳನ್ನು ಹೊಡೆದು ಟಾರು ಹಾಕುವ ಕಾರ್ಯ ಭರದಿಂದ ನಡೆಯುತ್ತಿದೆ. ರಸ್ತೆಗಳಿಗೆ ನೀರು ಸಿಂಪಡಿಸಲಾಗುತ್ತಿದೆ. ನಗರದಲ್ಲಿ ಹಾದುಹೋಗಿರುವ ಬಿ.ಎಚ್.ರಸ್ತೆಯ ಡಾಂಬರೀಕಣ ಕಾರ್ಯ ಹಗಲಿರುಳು ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ಸರ್ವೀಸ್ ರಸ್ತೆ ಹಲವು ದಿನಗಳಿಂದ ಕುಂಠಿತಗೊಂಡಿತ್ತು. ಈಗ ಆ ಸರ್ವೀಸ್ ರಸ್ತೆಯನ್ನು ಹೊಳೆಯುವಂತೆ ಮಾಡಲಾಗಿದೆ. ಆಟೋ ಚಾಲಕರು, ಬೈಕ್ ಸವಾರರು, ಸಾರ್ವಜನಿಕರು ನಗರದಲ್ಲಿ (ಪ್ರಮುಖ ರಸ್ತೆ) ನಡೆಯುತ್ತಿರುವ ಕೆಲಸ ನೋಡಿ, “ಮೋದಿ ತಿಂಗಳಿಗೊಮ್ಮೆಯಾದರೂ ಬರ್ಲಪ್ಪ” ಅಂತ ಮನವಿ ಮಾಡುತ್ತಿದ್ದಾರೆ.

ಜನರ ನೋವು ಮನವಿಯಾಗಿ ಪರಿವರ್ತನೆಯಾಗಿದೆ. ರಸ್ತೆಗಳಲ್ಲಿನ ಗುಂಡಿ ಗುದ್ರೆಗಳು ದೂಳು ಇರುವದನ್ನು ಯಾರಿಗೆ ಹೇಳಿದರೂ ಸ್ವಚ್ಚಗೊಳಿಸುವ ಗೋಜಿಗೆ ಹೋಗದೇ ಇರುವುದರಿಂದ ಮೋದಿ ಮತ್ತೆ ಮತ್ತೆ ಬರ್ಲಪ್ಪ ಎನ್ನುವ ಮನವಿ ಮಾಡುತ್ತಿದ್ದಾರೆ ಜನ. ಹಾಗಾಗಿವೆ ತುಮಕೂರು ನಗರದ ರಸ್ತೆಗಳು. ಸಿದ್ದಗಂಗಾ ಮಠ, ಕ್ಯಾತ್ಸಂದ್ರದಿಂದ ಹಿಡಿದು ಟೌನ್ ಹಾಲ್ ವರೆಗಿನ ಬಿ.ಎಚ್.ರಸ್ತೆಯನ್ನು ಶುಚಿಗೊಳಿಸಿ ಡಾಂಬರು ಹಾಕಲಾಗುತ್ತಿದೆ. ಆದರೆ ಒಳಗಿನ ರಸ್ತೆಗಳಲ್ಲಿ ಅದೇ ದೂಳು, ದಡಕ್ಕೆನ್ನುವ ಗುದ್ರಗಳು, ಅಗೆದ ರಸ್ತೆಗಳು, ಡಾಂಬರ್ ಕಾಣದ ರಸ್ತೆ ಬದಿಗಳು, ಜಿಯೋ, ನೀರು, ಗ್ಯಾಸ್ ಗಾಗಿ ಅಗೆದಿರುವ ಜಾಡುಗಳು ಎದ್ದು ಕಾಣುತ್ತಿವೆ. ಅವುಗಳು ಯಾವಾಗ ರಿಪೇರಿ ಕಾಣತ್ತವೋ ಎಂದು ಜನ ಕಾಯುತ್ತಿದ್ದಾರೆ.

ಸ್ಮಾರ್ಟ್ ಸಿಟಿಯ ಕೆಲಸಗಳು ಕುಂಟುತ್ತಾ ಸಾಗಿವೆ. ದೊಡ್ಡದೊಡ್ಡ ಗುಂಡಿಗಳು ಜನರ ಗಮನ ಸೆಳೆಯುತ್ತವೆ. ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಬೋರ್ಡುಗಳ ಕಾಣಸಿಗುತ್ತವೆ. ರೆಡ್ ಟೇಪ್ ಗಳು ರಸ್ತೆಗಳಲ್ಲಿ ಓಡಾಡುವ ವಾಹನ ಸವಾರರಿಗೆ ರಾಚುತ್ತಿವೆ. ಬೀದಿ ದೀಪಗಳಿಲ್ಲದ ವೇಳೆಯಲ್ಲಿ ರಸ್ತೆಯಲ್ಲಿ ಬೈಕ್ ಸವಾರರು ಪ್ರಯಾಣಿಸಿದರೆ ಬೀಳುವುದು ಗ್ಯಾರೆಂಟಿ. ಹೆಲ್ಮೆಟ್ಟಿದ್ದರೆ ತಲೆಗೆ ಪಟ್ಟಿಲ್ಲ. ಕೈಕಾಲು ಮರಿದರೆ ಕೇಳೋರಿಲ್ಲ ಅನ್ನುವಂತಹ ಪರಿಸ್ಥಿತಿ ಇದೆ. ತುಮಕೂರು ನಗರದ ಜನರ ಗೋಳು ಸಾಕಷ್ಟಿವೆ. ಸ್ಮಾರ್ಟ್ ಸಿಟಿಯ ಅವಾಂತರಗಳಿಗೆ ಜನ ರೋಸಿ ಹೋಗಿದ್ದಾರೆ. ಜನ ಕೇಳುವ ಪ್ರಶ್ನೆಗಳಿಗೆ ಮೋದಿ ಸಾಹೇಬರು ಉತ್ತರಿಸುತ್ತಾರೆಯೇ. ಸ್ಮಾರ್ಟ್ ಸಿಟಿಯಲ್ಲಿ ಆಗಿರುವ ಅವ್ಯವಹಾರದ ವಿರುದ್ದ ಕ್ರಮ ಕೈಗೊಳ್ಳುತ್ತಾರೆಯೇ? ಮೌನವಹಿಸುತ್ತಾರೆ? ನಾನು ತಿನ್ನುವುದಿಲ್ಲ. ತಿನ್ನಲೂ ಬಿಡುವುದಿಲ್ಲ ಎಂಬ ಮಾತನ್ನು ಉಳಿಸಿಕೊಳ್ಳುತ್ತಾರೆಯೇ ನೋಡಬೇಕು.

ಪುಸ್ತಕದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಪ್ರಶಸ್ತಿಗಳು ಬರುತ್ತಲೇ ಇವೆ. ಪತ್ರಿಕೆಗಳು ಅದನ್ನು ಪ್ರಕಟಿಸುತ್ತಲೇ ಇವೆ. ಆದರೆ ಸ್ಮಾರ್ಟ್ ಸಿಟಿಯಿಂದ ಜನರಿಗೆ ಯಾವ ಪ್ರಯೋಜವಾಗಿದೆ ಎಂಬುದನ್ನು ಇದುವರೆಗೂ ಪ್ರಕಟಿಸಿಲ್ಲ. ಪಾರದರ್ಶಕತೆ, ಬದ್ದತೆ ಅಂದರೆ ಇದೇ ಇರಬೇಕು. ಪಾರದರ್ಶಕತೆ ಇಲ್ಲದ ಕಾಮಗಾರಿ ಬದ್ದತೆ ಇಲ್ಲದ ಕೆಲಸ ಎರಡೂ ವ್ಯರ್ಥ. ಹೀಗಾಗಿ ಪ್ರಧಾನಿಗಳಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳಿಗೆ ಮನ್ನಣೆ ಸಿಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...