Homeಕರ್ನಾಟಕತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ...

ತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ…

- Advertisement -
- Advertisement -

ತುಮಕೂರೆಂಬೋ ದೂಳುನಗರವನ್ನು ಸ್ಮಾರ್ಟ್ ಸಿಟಿ ಎಂದು ಘೋಷಣೆ ಮಾಡಿ ಮೂರು ತಿಂಗಳು ಕಳೆದರೆ ನಾಲ್ಕು ವರ್ಷ ಪೂರ್ಣಗೊಳ್ಳಲಿದೆ. 2016 ಮಾರ್ಚ್ 11 ರಂದು ಸ್ಮಾರ್ಟ್ ಸಿಟಿಯಾಗಿ ಘೋಷಣೆ ಮಾಡಿದ್ದರೂ ನಗರ ಅಭಿವೃದ್ಧಿಯನ್ನೇ ಕಂಡಿಲ್ಲ. ಅಮಾನಿಕೆರೆಯಂಗಳವನ್ನು ಬಿಟ್ಟರೆ ಇನ್ನೆಲ್ಲಿ ನೋಡಿದರೂ ದೂಳು, ಗುಂಡಿಗಳು. ಜನರ ರಸ್ತೆಗಿಳಿದರೆ ಸಾಕು ನಗರಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳಿಗೆ ಪಕ್ಷಾತೀತವಾಗಿ ಬೈಗುಳದ ಮಳೆಯನ್ನೇ ಸುರಿಸುತ್ತಾರೆ. ಆದರೆ ಕೆಲವೊಮ್ಮೆ ಭಕ್ತರು ಹೇಳಿಕೊಳ್ಳುವಂತಿಲ್ಲ. ಬಿಡುವಂತಿಲ್ಲ. ಆದರೂ ತುಮಕೂರಿನ ಜನ ಮಾತ್ರ ಸ್ಮಾರ್ಟ್ ಆಗದೇ ಇರುವ ಸಿಟಿಯ ಬಗ್ಗೆ ಆಕ್ರೋಶವನ್ನು ಹೊರಹಾಕುತ್ತಾರೆ. ಸ್ಮಾರ್ಟ್ ಸಿಟಿಯ ಕುರಿತು ಬರೆಯಲು ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದೇ ಕಾರಣ.

ಜನವರಿ 2ರಂದು ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನಕ್ಕೆ ಮೋದಿ ಬರುತ್ತಿದ್ದಾರೆ. ಈಗ ಬಂದರೆ ಇದು ಮೂರನೇ ಭೇಟಿ. ಪ್ರಧಾನಿ ತುಮಕೂರು ಭೇಟಿಗೆ ಕಾರಣಗಳೇನು ಎಂಬ ಬಗ್ಗೆ ಮೇಲ್ನೋಟಕ್ಕೆ ಹೇಳುತ್ತಿರುವ ಅಂಶಗಳು ಪ್ರಮುಖ ಕಾರಣಗಳೇ ಅಲ್ಲ. ಮುಖ್ಯಮಂತ್ರಿಗಳಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡುವುದು, ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತು ಹಣವನ್ನು ಬಿಡುಗಡೆ ಮಾಡುವುದು, 42 ಕೃಷಿಕರಿಗೆ ಪ್ರಶಸ್ತಿ ನೀಡುವುದು ಪ್ರಮುಖ ಆದ್ಯತೆಗಳಲ್ಲ ಎಂಬುದು ಯಾರು ಬೇಕಾದರೂ ಊಹಿಸಬಹುದು. ಆದರೆ  ಪ್ರಧಾನಿ ಕಾರ್ಯಕ್ರಮಕ್ಕೆ ಬರುತ್ತಿರುವ ಹಿಂದಿನ ಉದ್ದೇಶದ ಬಗ್ಗೆ  ಆಯೋಜಕರಾಗಲೀ, ಬಿಜೆಪಿಯ ಮುಖಂಡರಾಗಲೀ ಸ್ಪಷ್ಟ ಕಾರಣ ನೀಡುತ್ತಿಲ್ಲ.

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದಾಗಲೂ ಬರಲಿಲ್ಲ. ಹೆಚ್ಚು ಜನರು ಸೇರುವ ಮತ್ತು ಭದ್ರತೆಯ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮಾಡಲಿಲ್ಲ ಎಂಬ ಸಬೂಬು ಬೇರೆ. ಈಗ ಆ ವಿಷಯ ಮುನ್ನೆಲೆಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದೀಗ ಸಿದ್ದಗಂಗಾ ಮಠದಲ್ಲಿ ಒಂದೂವರೆ ಗಂಟೆ ಕಾಲ ಕಳೆಯಲಿದ್ದಾರೆ. ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡುವುದು, ಧ್ಯಾನದಲ್ಲಿ ತೊಡಗುವ ಕಾರ್ಯಕ್ರಮಗಳು ಪೂರ್ವನಿಗದಿಯಾಗಿವೆ. ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಧ್ಯಾನ ಮಾಡಿ ದೇಶದ ಗಮನ ಸೆಳೆದ ಪ್ರಧಾನಿ ಇದೀಗ ಸಿದ್ದಗಂಗಾ ಮಠದ ಧ್ಯಾನಮಂದಿರದಲ್ಲೂ ಧ್ಯಾನ ಮಾಡಿ ದೇಶದಲ್ಲಿ ಸುದ್ದಿಯಾಗಲಿದ್ದಾರೆ. ಧ್ಯಾನದ ನಂತರವೂ ಕಾರ್ಯಕ್ರಮಕ್ಕೆ ಹಾಜರಾಗುವುದು. ಹೀಗಾಗಿ ಧ್ಯಾನಮುಖಿ ನರೇಂದ್ರ ಮೋದಿ ಮತ್ತೆ ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾಗಲಿದ್ದಾರೆ.

ಮಠದಲ್ಲೇ ಹೆಚ್ಚು ಸಮಯ ಕಳೆಯುವ ಮೂಲಕ ರಾಜ್ಯದ ಬಹುದೊಡ್ಡ ಲಿಂಗಾಯತ ಸಮುದಾಯದ ಪ್ರೀತಿ ಗಿಟ್ಟಿಸಿಕೊಳ್ಳುವ ಉದ್ದೇಶವೂ ಇದರಿಂದೆ ಇರಬಹುದು. ಹಿರಿಯ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಮಠದ ಭಕ್ತರು ಪ್ರಧಾನಿ ಭೇಟಿ ನೀಡಲಿಲ್ಲವೆಂದು ಮುನಿಸಿಕೊಂಡಿದ್ದರು. ಆ ಮುನಿಸನ್ನು ಹೋಗಲಾಡಿಸುವುದು ಮಠದಲ್ಲಿ ಹೆಚ್ಚು ಕಾಲ ಕಳೆಯುವುದರ ಹಿಂದಿನ ಉದ್ದೇಶವೆಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದಗಂಗಾ ಮಠದ ಮೂಲಕ ಪ್ರಧಾನಿ ಮೋದಿ ಏನು ಸಂದೇಶಗಳನ್ನು ರವಾನಿಸಬಹುದು ಎಂಬ ಕುತೂಹಲ ಜನರಲ್ಲಿದೆ. ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬ ಒತ್ತಾಯ ಹಲವು ವರ್ಷಗಳದ್ದು. ಆದರೆ ಕೇಂದ್ರದ ಯಾವ ಸರ್ಕಾರವೂ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಉತ್ಸಾಹ ತೋರಿಸಲಿಲ್ಲ. ನರೇಂದ್ರ ಮೋದಿ ಎರಡು ಬಾರಿ ಪ್ರಧಾನಿಯಾದರೂ ಇದರ ಬಗ್ಗೆ ಕಿವಿಗೆ ಹಾಕಿಕೊಳ್ಳಲಿಲ್ಲ. ಸಿಟ್ಟಿಗೆದ್ದ ಜನರ ಮನಸ್ಸನ್ನು ಸೆಳೆಯುವುದು ಭೇಟಿಯ ಹಿಂದಿನ ಉದ್ದೇಶವೇ? ಇರಬಹುದು.

ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮಿಸಿದರೆ ತುಮಕೂರು ಚಿತ್ರದುರ್ಗ ರಾಜಕೀಯವಾಗಿ (ಸಂಸತ್ ಚುನಾವಣೆಯಲ್ಲಿ) ಬಿಜೆಪಿ ತೆಕ್ಕೆಗೆ ಹೋಗಿರುವುದು ಪ್ರಮುಖ ಕಾರಣ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿದಿರುವುದು ಮಗದೊಂದು ಕಾರಣ. ಕೆಲವೇ ದಿನಗಳ ಹಿಂದೆ ಆರ್‌ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತುಮಕೂರು ಜಿಲ್ಲೆಯ ಪಾವಗಡಕ್ಕೆ ಭೇಟಿ ನೀಡಿರುವುದು ಕೂಡ ಗಮನಾರ್ಹ ಸಂಗತಿ. ಪ್ರಧಾನಿ ಸುಮ್ಮಸುಮ್ಮನೆ ತುಮಕೂರಿಗೆ ಭೇಟಿ ನೀಡುತ್ತಿಲ್ಲ. ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರವನ್ನು ಹಾಕಿಯೇ ಭೇಟಿ ನೀಡುತ್ತಿರುವುದು ಎನ್ನಲಾಗುತ್ತಿದೆ.

ಮೇಲೆಯೇ ಹೇಳಿದಂತೆ ತುಮಕೂರು ಸ್ಮಾರ್ಟ್ ಸಿಟಿ ಆಗಿದ್ದರೂ ಇದುವರೆಗೂ ಸ್ಮಾರ್ಟ್ ಅಂತೂ ಆಗಿಲ್ಲ. ರಸ್ತೆಗಳು ಗುಂಡಿ ಗುದ್ರಗಳಿಂದ ಕೂಡಿವೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆಂಬ ಕಾರಣಕ್ಕೆ ತೇಪೆ ಹಚ್ಚುವ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಸೇರಿಕೊಂಡಿದ್ದ ದೂಳನ್ನು ಹೊಡೆದು ಟಾರು ಹಾಕುವ ಕಾರ್ಯ ಭರದಿಂದ ನಡೆಯುತ್ತಿದೆ. ರಸ್ತೆಗಳಿಗೆ ನೀರು ಸಿಂಪಡಿಸಲಾಗುತ್ತಿದೆ. ನಗರದಲ್ಲಿ ಹಾದುಹೋಗಿರುವ ಬಿ.ಎಚ್.ರಸ್ತೆಯ ಡಾಂಬರೀಕಣ ಕಾರ್ಯ ಹಗಲಿರುಳು ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ಸರ್ವೀಸ್ ರಸ್ತೆ ಹಲವು ದಿನಗಳಿಂದ ಕುಂಠಿತಗೊಂಡಿತ್ತು. ಈಗ ಆ ಸರ್ವೀಸ್ ರಸ್ತೆಯನ್ನು ಹೊಳೆಯುವಂತೆ ಮಾಡಲಾಗಿದೆ. ಆಟೋ ಚಾಲಕರು, ಬೈಕ್ ಸವಾರರು, ಸಾರ್ವಜನಿಕರು ನಗರದಲ್ಲಿ (ಪ್ರಮುಖ ರಸ್ತೆ) ನಡೆಯುತ್ತಿರುವ ಕೆಲಸ ನೋಡಿ, “ಮೋದಿ ತಿಂಗಳಿಗೊಮ್ಮೆಯಾದರೂ ಬರ್ಲಪ್ಪ” ಅಂತ ಮನವಿ ಮಾಡುತ್ತಿದ್ದಾರೆ.

ಜನರ ನೋವು ಮನವಿಯಾಗಿ ಪರಿವರ್ತನೆಯಾಗಿದೆ. ರಸ್ತೆಗಳಲ್ಲಿನ ಗುಂಡಿ ಗುದ್ರೆಗಳು ದೂಳು ಇರುವದನ್ನು ಯಾರಿಗೆ ಹೇಳಿದರೂ ಸ್ವಚ್ಚಗೊಳಿಸುವ ಗೋಜಿಗೆ ಹೋಗದೇ ಇರುವುದರಿಂದ ಮೋದಿ ಮತ್ತೆ ಮತ್ತೆ ಬರ್ಲಪ್ಪ ಎನ್ನುವ ಮನವಿ ಮಾಡುತ್ತಿದ್ದಾರೆ ಜನ. ಹಾಗಾಗಿವೆ ತುಮಕೂರು ನಗರದ ರಸ್ತೆಗಳು. ಸಿದ್ದಗಂಗಾ ಮಠ, ಕ್ಯಾತ್ಸಂದ್ರದಿಂದ ಹಿಡಿದು ಟೌನ್ ಹಾಲ್ ವರೆಗಿನ ಬಿ.ಎಚ್.ರಸ್ತೆಯನ್ನು ಶುಚಿಗೊಳಿಸಿ ಡಾಂಬರು ಹಾಕಲಾಗುತ್ತಿದೆ. ಆದರೆ ಒಳಗಿನ ರಸ್ತೆಗಳಲ್ಲಿ ಅದೇ ದೂಳು, ದಡಕ್ಕೆನ್ನುವ ಗುದ್ರಗಳು, ಅಗೆದ ರಸ್ತೆಗಳು, ಡಾಂಬರ್ ಕಾಣದ ರಸ್ತೆ ಬದಿಗಳು, ಜಿಯೋ, ನೀರು, ಗ್ಯಾಸ್ ಗಾಗಿ ಅಗೆದಿರುವ ಜಾಡುಗಳು ಎದ್ದು ಕಾಣುತ್ತಿವೆ. ಅವುಗಳು ಯಾವಾಗ ರಿಪೇರಿ ಕಾಣತ್ತವೋ ಎಂದು ಜನ ಕಾಯುತ್ತಿದ್ದಾರೆ.

ಸ್ಮಾರ್ಟ್ ಸಿಟಿಯ ಕೆಲಸಗಳು ಕುಂಟುತ್ತಾ ಸಾಗಿವೆ. ದೊಡ್ಡದೊಡ್ಡ ಗುಂಡಿಗಳು ಜನರ ಗಮನ ಸೆಳೆಯುತ್ತವೆ. ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಬೋರ್ಡುಗಳ ಕಾಣಸಿಗುತ್ತವೆ. ರೆಡ್ ಟೇಪ್ ಗಳು ರಸ್ತೆಗಳಲ್ಲಿ ಓಡಾಡುವ ವಾಹನ ಸವಾರರಿಗೆ ರಾಚುತ್ತಿವೆ. ಬೀದಿ ದೀಪಗಳಿಲ್ಲದ ವೇಳೆಯಲ್ಲಿ ರಸ್ತೆಯಲ್ಲಿ ಬೈಕ್ ಸವಾರರು ಪ್ರಯಾಣಿಸಿದರೆ ಬೀಳುವುದು ಗ್ಯಾರೆಂಟಿ. ಹೆಲ್ಮೆಟ್ಟಿದ್ದರೆ ತಲೆಗೆ ಪಟ್ಟಿಲ್ಲ. ಕೈಕಾಲು ಮರಿದರೆ ಕೇಳೋರಿಲ್ಲ ಅನ್ನುವಂತಹ ಪರಿಸ್ಥಿತಿ ಇದೆ. ತುಮಕೂರು ನಗರದ ಜನರ ಗೋಳು ಸಾಕಷ್ಟಿವೆ. ಸ್ಮಾರ್ಟ್ ಸಿಟಿಯ ಅವಾಂತರಗಳಿಗೆ ಜನ ರೋಸಿ ಹೋಗಿದ್ದಾರೆ. ಜನ ಕೇಳುವ ಪ್ರಶ್ನೆಗಳಿಗೆ ಮೋದಿ ಸಾಹೇಬರು ಉತ್ತರಿಸುತ್ತಾರೆಯೇ. ಸ್ಮಾರ್ಟ್ ಸಿಟಿಯಲ್ಲಿ ಆಗಿರುವ ಅವ್ಯವಹಾರದ ವಿರುದ್ದ ಕ್ರಮ ಕೈಗೊಳ್ಳುತ್ತಾರೆಯೇ? ಮೌನವಹಿಸುತ್ತಾರೆ? ನಾನು ತಿನ್ನುವುದಿಲ್ಲ. ತಿನ್ನಲೂ ಬಿಡುವುದಿಲ್ಲ ಎಂಬ ಮಾತನ್ನು ಉಳಿಸಿಕೊಳ್ಳುತ್ತಾರೆಯೇ ನೋಡಬೇಕು.

ಪುಸ್ತಕದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಪ್ರಶಸ್ತಿಗಳು ಬರುತ್ತಲೇ ಇವೆ. ಪತ್ರಿಕೆಗಳು ಅದನ್ನು ಪ್ರಕಟಿಸುತ್ತಲೇ ಇವೆ. ಆದರೆ ಸ್ಮಾರ್ಟ್ ಸಿಟಿಯಿಂದ ಜನರಿಗೆ ಯಾವ ಪ್ರಯೋಜವಾಗಿದೆ ಎಂಬುದನ್ನು ಇದುವರೆಗೂ ಪ್ರಕಟಿಸಿಲ್ಲ. ಪಾರದರ್ಶಕತೆ, ಬದ್ದತೆ ಅಂದರೆ ಇದೇ ಇರಬೇಕು. ಪಾರದರ್ಶಕತೆ ಇಲ್ಲದ ಕಾಮಗಾರಿ ಬದ್ದತೆ ಇಲ್ಲದ ಕೆಲಸ ಎರಡೂ ವ್ಯರ್ಥ. ಹೀಗಾಗಿ ಪ್ರಧಾನಿಗಳಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳಿಗೆ ಮನ್ನಣೆ ಸಿಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...