Homeಕರ್ನಾಟಕವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ತುಮಕೂರು ಕ್ಯಾತ್ಸಂದ್ರದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಹೈಟೆಕ್ ವೇಶ್ಯಾವಾಟಿಕೆ ಜಾಲವೊಂದು ಬಯಲಿಗೆ ಬಂದಿದೆ.

- Advertisement -
- Advertisement -

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದೆರಡು ವಾರಗಳ ಹಿಂದೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ವಿಚಾರ ಜನರಲ್ಲಿ ಗೊಂದಲ ಮೂಡಿಸಿತ್ತು. ಇದು ನಗರದಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆಯ ಪರಿಣಾಮ ಎಂದು ಇದೀಗ ತಿಳಿದುಬಂದಿದೆ.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ಸ್ಟ್ಯಾನ್ಲಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರು ನಾನುಗೌರಿ.ಕಾಂ ಜೊತೆ ತುಮಕೂರಿನಲ್ಲಿನ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ.

“ಕಳೆದೆರಡು ವಾರಗಳ ಹಿಂದೆ ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಇಂದು (ಮಂಗಳವಾರ) ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದೇವೆ” ಎಂದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದರು.

“ಹಣ ಸಂಪಾದನೆಗೆ ಹೆಣ್ಣು ಮಕ್ಕಳನ್ನು ಬಳಸುವುದು, ಅವರ ಮೂಲಕ ಹಣ ಸಂಪಾದಿಸುವುದು ಅಮಾನವೀಯ. ಒಬ್ಬೊಬ್ಬ ಹೆಣ್ಣು ಮಕ್ಕಳು ಪ್ರತಿದಿನ 10, 15, 18 ಗಂಡಸರನ್ನು ನಿಭಾಯಿಸಬೇಕು. ಇದಕ್ಕಾಗಿ ಇವರನ್ನು ಹಿಂಸೆಗೆ ನೂಕಲಾಗುತ್ತದೆ. ಹೆದರಿಸಿ, ಬೆದರಿಸಿ ಇಂತಹ ಮಾನಸಿಕ ಸ್ಥಿತಿಯನ್ನು ಮಹಿಳೆಯರಲ್ಲಿ ಸೃಷ್ಟಿಸುತ್ತಾರೆ. ವಿಳಾಸವಿಲ್ಲದ ಉತ್ತರ ಭಾರತ, ಬಾಂಗ್ಲಾದ ಮಹಿಳೆಯರನ್ನು ಇಂತಹ ಕೆಲಸಗಳಿಗೆ ಬಳಸಲಾಗುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

“ರಾಜ್ಯದಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡಿದ್ದಾರೆ. ಅಡಗುದಾಣಗಳನ್ನು ನಿರ್ಮಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ಮುಂಬೈ ಮಾದರಿಯ ವೇಶ್ಯಾವಾಟಿಕೆ. ಇದನ್ನು ಒಡನಾಡಿ ಸಂಸ್ಥೆ 15 ವರ್ಷಗಳ ಹಿಂದೆ ಕಂಡು ಹಿಡಿದಿತ್ತು. ದಾಳಿ ನಡೆಯುವಾಗ ಇಲ್ಲಿ ಅಡಗುದಾಣ ಇದೆ ಎಂಬುದು ತಿಳಿಯುವುದು ಇಲ್ಲ. ಅವರ ಮಾಹಿತಿದಾರರು ಹಲವು ಕಡೆಗಳಲ್ಲಿ ಇರುತ್ತಾರೆ. ಪೊಲೀಸರು, ನಾವುಗಳು ದಾಳಿಗೆ ಹೋಗುತ್ತಿರುವ ಮಾಹಿತಿ ದಂಧೆ ನಡೆಸುವವರಿಗೆ ಬೇಗನೆ ತಿಳಿದುಬಿಡುತ್ತದೆ. ನಮ್ಮ ಚಲನವಲನಗಳನ್ನು ಈ ಇವರು ಗಮನಿಸುತ್ತಿರುತ್ತಾರೆ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿರುತ್ತಾರೆ” ಎಂದರು.

ಸ್ಟ್ಯಾನ್ಲಿ ಅವರು ತುಮಕೂರಿನ ವಿಚಾರದ ಬಗ್ಗೆ ವಿವರಸಿದ್ದು ಹೀಗೆ, “ಕಾಂಡೋಮ್‌ಗಳ ಸುದ್ದಿಯಿಂದ ನಾವು ಇದರ ಜಾಡು ಹಿಡಿದೆವು. ಕ್ಯಾತ್ಸಂದ್ರದ ನಂದಿ ಲಾಡ್ಜ್‌, ನಾಲ್ಕು ಅಂತಸ್ತಿನ ಕಟ್ಟಡ. ಉಳಿಯಲು ಅಷ್ಟು ಯೋಗ್ಯವಲ್ಲದ ಅದು, ಹಣ ಮುದ್ರಿಸುವ ಟಂಕಸಾಲೆಯಾಗಿದೆ. ಒಂದು ರೂಮ್‌ನಿಂದ ದಿನಕ್ಕೆ 10, 20 ಸಾವಿರಕ್ಕೂ ಹೆಚ್ಚು ಗಳಿಸುತ್ತಾರೆ. ರೂಮ್‌ಗಳನ್ನು ಮಾರ್ಪಡಿಸಿದ್ದಾರೆ. ಲಾಡ್ಜ್‌ನ ಮೂರನೇ ಮಹಡಿಯಲ್ಲಿ ಒಂದು ಗೇಟ್ ಇದೆ ಅದನ್ನು ಕ್ಲೋಸ್ ಮಾಡಿ, ಅಲ್ಲಿರುವ ಎಲ್ಲಾ ಹುಡುಗಿರನ್ನು ಮೊದಲೇ ರಚನೆ ಮಾಡಿರುವ ಅಡಗುದಾಣಗಳಲ್ಲಿ ಬಚ್ಚಿಡಲಾಗುತ್ತದೆ. ಈ ಅಡಗುದಾಣಗಳು ವಿಚಿತ್ರವಾಗಿರುತ್ತವೆ. ಕಬೋರ್ಡ್, ಟಿವಿಯ ಹಿಂದೆ, ಡ್ರೈನೇಜ್‌ನಲ್ಲಿಯೂ ಅಡಗುದಾಣಗಳು ಇರುತ್ತವೆ. ಇವುಗಳನ್ನ ಒಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಿಸ್ಕ್ ತೆಗೆದುಕೊಳ್ಳಬೇಕು ಅಷ್ಟೆ. ಇಲ್ಲಿ ಒಂದು ಟೇಬಲ್‌ ತರಹದ ರಚನೆಯಲ್ಲಿ ಅಡಗುದಾಣವಿತ್ತು. ಸದ್ಯ ಪೊಲಿಸರು ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಒಬ್ಬ ಮಹಿಳೆಯನ್ನು ಪಿಂಪ್‌ಗಳು ಆಟೋದಲ್ಲಿ ಕರೆದುಕೊಂಡು ಪರಾರಿಯಾಗಿದ್ದಾರೆ” ಎಂದರು.

“ಇಂದು ಸಿಕ್ಕಿಹಾಕಿಕೊಂಡವರಲ್ಲಿ ಇಬ್ಬರನ್ನು ಈ ಮೊದಲು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೆ ಕೆಲಸದಲ್ಲಿ ತೊಡಗುತ್ತಾರೆ. ಇವರಿಗೆ ಭಯ, ಮುಜುಗುರ ಇಲ್ಲ. ಇವರಿಗಾಗಿ ಒಂದು ಸಪೋರ್ಟ್ ಸಿಸ್ಟಮ್ ಇದೆ. ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಸಂಘಟಿತ ಅಪರಾಧ. ಇದಕ್ಕೆ ಐಟಿಪಿಎ ಸೆಕ್ಷನ್ ಸಾಕಾಗುವುದಿಲ್ಲ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಬಳಸಿದ್ದಾರೆ. ರಾಜ್ಯದಲ್ಲಿ ವೇಶ್ಯಾವಾಟಿಕೆ ನೆಟ್‌ವರ್ಕ್ ದೊಡ್ಡ ಕ್ಯಾನ್ಸರ್‌ ತರ ಬೆಳೆದಿದೆ. ಮನಸ್ಸು ಮಾಡಿದರೆ ಈ ಜಾಲವನ್ನು ಹಿಡಿಯಬಹುದು” ಎಂದು ಸ್ಟ್ಯಾನ್ಲಿ ಅಭಿಪ್ರಾಯ ಪಟ್ಟರು.

ಹೆಣ್ಣು ಮಕ್ಕಳ ಜೀವನದಲ್ಲಿ ದೌರ್ಜನ್ಯ ನಡೆಸುವ ಈ ಪಿಂಪ್‌ಗಳು ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. “ಒಬ್ಬೊಬ್ಬ ಕಿಂಗ್ ಪಿಂಪ್ 150, 175 ಕೋಟಿ ಬೆಲೆ ಬಾಳುತ್ತಾರೆ. ಇವರು ಮುಂದೊಂದು ದಿನ ನಮ್ಮನ್ನು ಆಳುವವರಾಗುತ್ತಾರೆ. ಮಂಗಳೂರಿನಲ್ಲಿ ಒಬ್ಬ ಪಿಂಪ್ 175 ಕೋಟಿ ಬೆಲೆ ಬಾಳುತ್ತಾನೆ. ಆತ ಎಂಎಲ್‌ಎ ಆಗಲು ಕೂಡ ಪ್ರಯತ್ನಿಸಿದ್ದ. ಇನ್ನೊಬ್ಬ ಬೆಂಗಳೂರಿನ ಪಿಂಪ್ ರಾಜಕಾರಣಿಯ ಆಶ್ರಯದಲ್ಲಿದ್ದಾನೆ. ಇವರೆಲ್ಲಾ ತುಂಬಾ ಅಪಾಯಕಾರಿ. ನಮಗೆ ಜನರ ಬೆಂಬಲ ಇರೋದ್ರಿಂದ ನಾವು ಈ ಕೆಲಸದಲ್ಲಿ ಮುಂದುವರೆಯತ್ತಿದ್ದೇವೆ” ಎಂದರು.

ಮುಂದುವರಿದು, “ಇಂತಹ ಅಡಗುತಾಣಗಳನ್ನು ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಾಶಗೊಳಿಸಲು, ಕೆಡವಲು ಈಗಾಗಲೇ ಆದೇಶವಿದೆ. ಕಟ್ಟಡಗಳನ್ನು ಕೆಡವಿ, ತನಿಖೆ ನಡೆಸಲ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಎಲ್ಲ ಅಧಿಕಾರಿಗಳ ಬಗ್ಗೆ ಇದರ ಆರ್ಡರ್ ಕಾಪಿ ಇದೆ ಕ್ರಮ ಕೈಗೊಳ್ಳಬೇಕು ಅಷ್ಟೆ. ಒಂದೇ ಜಾಗದಲ್ಲಿ ಪುನರಾವರ್ತಿತ ಅಪರಾಧಗಳು ಮತ್ತು ಕಟ್ಟಡದ ನಕ್ಷೆ ಬದಲಿಸಿದ ಆರೋಪ ಸೇರಿ ಹಲವು ಅಪರಾಧಗಳಿಗೆ ಕಾರಣವಾಗುತ್ತದೆ. ಹಾಗಾಗಿ ಇದಕ್ಕೆ ಇರುವ ಕಾನೂನು ಬಳಸಿ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರನ್ನು ಮಾನವೀಯ ನೆಲೆಯಲ್ಲಿ ನೋಡಬೇಕು” ಎಂದರು.

ಮೈಸೂರಿನ ಒಡನಾಡಿ… ಒಂದು ಸಾಮಾಜಿಕ, ಸರ್ಕಾರೇತರ ಸಂಸ್ಥೆ. ಈ ಸಂಸ್ಥೆ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ, ಇತ್ಯಾದಿ ಕೆಲಸಗಳನ್ನು ಮಾಡುತ್ತಿದೆ. ಈ ಸಂಸ್ಥೆಯನ್ನು 1984ರಲ್ಲಿ ಕೆ. ವಿ ಸ್ಟಾನ್ಲಿ ಮತ್ತು ಎಂ. ಎಲ್. ಪರಶುರಾಮ ಅವರು ಪ್ರಾರಂಭಿಸಿದರು. ಅದನ್ನು 1993 ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಾಯಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...