Homeಕರ್ನಾಟಕವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ತುಮಕೂರು ಕ್ಯಾತ್ಸಂದ್ರದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಹೈಟೆಕ್ ವೇಶ್ಯಾವಾಟಿಕೆ ಜಾಲವೊಂದು ಬಯಲಿಗೆ ಬಂದಿದೆ.

- Advertisement -
- Advertisement -

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದೆರಡು ವಾರಗಳ ಹಿಂದೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ವಿಚಾರ ಜನರಲ್ಲಿ ಗೊಂದಲ ಮೂಡಿಸಿತ್ತು. ಇದು ನಗರದಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆಯ ಪರಿಣಾಮ ಎಂದು ಇದೀಗ ತಿಳಿದುಬಂದಿದೆ.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ಸ್ಟ್ಯಾನ್ಲಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರು ನಾನುಗೌರಿ.ಕಾಂ ಜೊತೆ ತುಮಕೂರಿನಲ್ಲಿನ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ.

“ಕಳೆದೆರಡು ವಾರಗಳ ಹಿಂದೆ ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಇಂದು (ಮಂಗಳವಾರ) ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದೇವೆ” ಎಂದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದರು.

“ಹಣ ಸಂಪಾದನೆಗೆ ಹೆಣ್ಣು ಮಕ್ಕಳನ್ನು ಬಳಸುವುದು, ಅವರ ಮೂಲಕ ಹಣ ಸಂಪಾದಿಸುವುದು ಅಮಾನವೀಯ. ಒಬ್ಬೊಬ್ಬ ಹೆಣ್ಣು ಮಕ್ಕಳು ಪ್ರತಿದಿನ 10, 15, 18 ಗಂಡಸರನ್ನು ನಿಭಾಯಿಸಬೇಕು. ಇದಕ್ಕಾಗಿ ಇವರನ್ನು ಹಿಂಸೆಗೆ ನೂಕಲಾಗುತ್ತದೆ. ಹೆದರಿಸಿ, ಬೆದರಿಸಿ ಇಂತಹ ಮಾನಸಿಕ ಸ್ಥಿತಿಯನ್ನು ಮಹಿಳೆಯರಲ್ಲಿ ಸೃಷ್ಟಿಸುತ್ತಾರೆ. ವಿಳಾಸವಿಲ್ಲದ ಉತ್ತರ ಭಾರತ, ಬಾಂಗ್ಲಾದ ಮಹಿಳೆಯರನ್ನು ಇಂತಹ ಕೆಲಸಗಳಿಗೆ ಬಳಸಲಾಗುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

“ರಾಜ್ಯದಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡಿದ್ದಾರೆ. ಅಡಗುದಾಣಗಳನ್ನು ನಿರ್ಮಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ಮುಂಬೈ ಮಾದರಿಯ ವೇಶ್ಯಾವಾಟಿಕೆ. ಇದನ್ನು ಒಡನಾಡಿ ಸಂಸ್ಥೆ 15 ವರ್ಷಗಳ ಹಿಂದೆ ಕಂಡು ಹಿಡಿದಿತ್ತು. ದಾಳಿ ನಡೆಯುವಾಗ ಇಲ್ಲಿ ಅಡಗುದಾಣ ಇದೆ ಎಂಬುದು ತಿಳಿಯುವುದು ಇಲ್ಲ. ಅವರ ಮಾಹಿತಿದಾರರು ಹಲವು ಕಡೆಗಳಲ್ಲಿ ಇರುತ್ತಾರೆ. ಪೊಲೀಸರು, ನಾವುಗಳು ದಾಳಿಗೆ ಹೋಗುತ್ತಿರುವ ಮಾಹಿತಿ ದಂಧೆ ನಡೆಸುವವರಿಗೆ ಬೇಗನೆ ತಿಳಿದುಬಿಡುತ್ತದೆ. ನಮ್ಮ ಚಲನವಲನಗಳನ್ನು ಈ ಇವರು ಗಮನಿಸುತ್ತಿರುತ್ತಾರೆ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿರುತ್ತಾರೆ” ಎಂದರು.

ಸ್ಟ್ಯಾನ್ಲಿ ಅವರು ತುಮಕೂರಿನ ವಿಚಾರದ ಬಗ್ಗೆ ವಿವರಸಿದ್ದು ಹೀಗೆ, “ಕಾಂಡೋಮ್‌ಗಳ ಸುದ್ದಿಯಿಂದ ನಾವು ಇದರ ಜಾಡು ಹಿಡಿದೆವು. ಕ್ಯಾತ್ಸಂದ್ರದ ನಂದಿ ಲಾಡ್ಜ್‌, ನಾಲ್ಕು ಅಂತಸ್ತಿನ ಕಟ್ಟಡ. ಉಳಿಯಲು ಅಷ್ಟು ಯೋಗ್ಯವಲ್ಲದ ಅದು, ಹಣ ಮುದ್ರಿಸುವ ಟಂಕಸಾಲೆಯಾಗಿದೆ. ಒಂದು ರೂಮ್‌ನಿಂದ ದಿನಕ್ಕೆ 10, 20 ಸಾವಿರಕ್ಕೂ ಹೆಚ್ಚು ಗಳಿಸುತ್ತಾರೆ. ರೂಮ್‌ಗಳನ್ನು ಮಾರ್ಪಡಿಸಿದ್ದಾರೆ. ಲಾಡ್ಜ್‌ನ ಮೂರನೇ ಮಹಡಿಯಲ್ಲಿ ಒಂದು ಗೇಟ್ ಇದೆ ಅದನ್ನು ಕ್ಲೋಸ್ ಮಾಡಿ, ಅಲ್ಲಿರುವ ಎಲ್ಲಾ ಹುಡುಗಿರನ್ನು ಮೊದಲೇ ರಚನೆ ಮಾಡಿರುವ ಅಡಗುದಾಣಗಳಲ್ಲಿ ಬಚ್ಚಿಡಲಾಗುತ್ತದೆ. ಈ ಅಡಗುದಾಣಗಳು ವಿಚಿತ್ರವಾಗಿರುತ್ತವೆ. ಕಬೋರ್ಡ್, ಟಿವಿಯ ಹಿಂದೆ, ಡ್ರೈನೇಜ್‌ನಲ್ಲಿಯೂ ಅಡಗುದಾಣಗಳು ಇರುತ್ತವೆ. ಇವುಗಳನ್ನ ಒಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಿಸ್ಕ್ ತೆಗೆದುಕೊಳ್ಳಬೇಕು ಅಷ್ಟೆ. ಇಲ್ಲಿ ಒಂದು ಟೇಬಲ್‌ ತರಹದ ರಚನೆಯಲ್ಲಿ ಅಡಗುದಾಣವಿತ್ತು. ಸದ್ಯ ಪೊಲಿಸರು ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಒಬ್ಬ ಮಹಿಳೆಯನ್ನು ಪಿಂಪ್‌ಗಳು ಆಟೋದಲ್ಲಿ ಕರೆದುಕೊಂಡು ಪರಾರಿಯಾಗಿದ್ದಾರೆ” ಎಂದರು.

“ಇಂದು ಸಿಕ್ಕಿಹಾಕಿಕೊಂಡವರಲ್ಲಿ ಇಬ್ಬರನ್ನು ಈ ಮೊದಲು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೆ ಕೆಲಸದಲ್ಲಿ ತೊಡಗುತ್ತಾರೆ. ಇವರಿಗೆ ಭಯ, ಮುಜುಗುರ ಇಲ್ಲ. ಇವರಿಗಾಗಿ ಒಂದು ಸಪೋರ್ಟ್ ಸಿಸ್ಟಮ್ ಇದೆ. ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಸಂಘಟಿತ ಅಪರಾಧ. ಇದಕ್ಕೆ ಐಟಿಪಿಎ ಸೆಕ್ಷನ್ ಸಾಕಾಗುವುದಿಲ್ಲ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಬಳಸಿದ್ದಾರೆ. ರಾಜ್ಯದಲ್ಲಿ ವೇಶ್ಯಾವಾಟಿಕೆ ನೆಟ್‌ವರ್ಕ್ ದೊಡ್ಡ ಕ್ಯಾನ್ಸರ್‌ ತರ ಬೆಳೆದಿದೆ. ಮನಸ್ಸು ಮಾಡಿದರೆ ಈ ಜಾಲವನ್ನು ಹಿಡಿಯಬಹುದು” ಎಂದು ಸ್ಟ್ಯಾನ್ಲಿ ಅಭಿಪ್ರಾಯ ಪಟ್ಟರು.

ಹೆಣ್ಣು ಮಕ್ಕಳ ಜೀವನದಲ್ಲಿ ದೌರ್ಜನ್ಯ ನಡೆಸುವ ಈ ಪಿಂಪ್‌ಗಳು ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. “ಒಬ್ಬೊಬ್ಬ ಕಿಂಗ್ ಪಿಂಪ್ 150, 175 ಕೋಟಿ ಬೆಲೆ ಬಾಳುತ್ತಾರೆ. ಇವರು ಮುಂದೊಂದು ದಿನ ನಮ್ಮನ್ನು ಆಳುವವರಾಗುತ್ತಾರೆ. ಮಂಗಳೂರಿನಲ್ಲಿ ಒಬ್ಬ ಪಿಂಪ್ 175 ಕೋಟಿ ಬೆಲೆ ಬಾಳುತ್ತಾನೆ. ಆತ ಎಂಎಲ್‌ಎ ಆಗಲು ಕೂಡ ಪ್ರಯತ್ನಿಸಿದ್ದ. ಇನ್ನೊಬ್ಬ ಬೆಂಗಳೂರಿನ ಪಿಂಪ್ ರಾಜಕಾರಣಿಯ ಆಶ್ರಯದಲ್ಲಿದ್ದಾನೆ. ಇವರೆಲ್ಲಾ ತುಂಬಾ ಅಪಾಯಕಾರಿ. ನಮಗೆ ಜನರ ಬೆಂಬಲ ಇರೋದ್ರಿಂದ ನಾವು ಈ ಕೆಲಸದಲ್ಲಿ ಮುಂದುವರೆಯತ್ತಿದ್ದೇವೆ” ಎಂದರು.

ಮುಂದುವರಿದು, “ಇಂತಹ ಅಡಗುತಾಣಗಳನ್ನು ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಾಶಗೊಳಿಸಲು, ಕೆಡವಲು ಈಗಾಗಲೇ ಆದೇಶವಿದೆ. ಕಟ್ಟಡಗಳನ್ನು ಕೆಡವಿ, ತನಿಖೆ ನಡೆಸಲ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಎಲ್ಲ ಅಧಿಕಾರಿಗಳ ಬಗ್ಗೆ ಇದರ ಆರ್ಡರ್ ಕಾಪಿ ಇದೆ ಕ್ರಮ ಕೈಗೊಳ್ಳಬೇಕು ಅಷ್ಟೆ. ಒಂದೇ ಜಾಗದಲ್ಲಿ ಪುನರಾವರ್ತಿತ ಅಪರಾಧಗಳು ಮತ್ತು ಕಟ್ಟಡದ ನಕ್ಷೆ ಬದಲಿಸಿದ ಆರೋಪ ಸೇರಿ ಹಲವು ಅಪರಾಧಗಳಿಗೆ ಕಾರಣವಾಗುತ್ತದೆ. ಹಾಗಾಗಿ ಇದಕ್ಕೆ ಇರುವ ಕಾನೂನು ಬಳಸಿ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರನ್ನು ಮಾನವೀಯ ನೆಲೆಯಲ್ಲಿ ನೋಡಬೇಕು” ಎಂದರು.

ಮೈಸೂರಿನ ಒಡನಾಡಿ… ಒಂದು ಸಾಮಾಜಿಕ, ಸರ್ಕಾರೇತರ ಸಂಸ್ಥೆ. ಈ ಸಂಸ್ಥೆ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ, ಇತ್ಯಾದಿ ಕೆಲಸಗಳನ್ನು ಮಾಡುತ್ತಿದೆ. ಈ ಸಂಸ್ಥೆಯನ್ನು 1984ರಲ್ಲಿ ಕೆ. ವಿ ಸ್ಟಾನ್ಲಿ ಮತ್ತು ಎಂ. ಎಲ್. ಪರಶುರಾಮ ಅವರು ಪ್ರಾರಂಭಿಸಿದರು. ಅದನ್ನು 1993 ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಾಯಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...