Homeಕರ್ನಾಟಕವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ತುಮಕೂರು ಕ್ಯಾತ್ಸಂದ್ರದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಹೈಟೆಕ್ ವೇಶ್ಯಾವಾಟಿಕೆ ಜಾಲವೊಂದು ಬಯಲಿಗೆ ಬಂದಿದೆ.

- Advertisement -
- Advertisement -

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದೆರಡು ವಾರಗಳ ಹಿಂದೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ವಿಚಾರ ಜನರಲ್ಲಿ ಗೊಂದಲ ಮೂಡಿಸಿತ್ತು. ಇದು ನಗರದಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆಯ ಪರಿಣಾಮ ಎಂದು ಇದೀಗ ತಿಳಿದುಬಂದಿದೆ.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ಸ್ಟ್ಯಾನ್ಲಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರು ನಾನುಗೌರಿ.ಕಾಂ ಜೊತೆ ತುಮಕೂರಿನಲ್ಲಿನ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ.

“ಕಳೆದೆರಡು ವಾರಗಳ ಹಿಂದೆ ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಇಂದು (ಮಂಗಳವಾರ) ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದೇವೆ” ಎಂದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದರು.

“ಹಣ ಸಂಪಾದನೆಗೆ ಹೆಣ್ಣು ಮಕ್ಕಳನ್ನು ಬಳಸುವುದು, ಅವರ ಮೂಲಕ ಹಣ ಸಂಪಾದಿಸುವುದು ಅಮಾನವೀಯ. ಒಬ್ಬೊಬ್ಬ ಹೆಣ್ಣು ಮಕ್ಕಳು ಪ್ರತಿದಿನ 10, 15, 18 ಗಂಡಸರನ್ನು ನಿಭಾಯಿಸಬೇಕು. ಇದಕ್ಕಾಗಿ ಇವರನ್ನು ಹಿಂಸೆಗೆ ನೂಕಲಾಗುತ್ತದೆ. ಹೆದರಿಸಿ, ಬೆದರಿಸಿ ಇಂತಹ ಮಾನಸಿಕ ಸ್ಥಿತಿಯನ್ನು ಮಹಿಳೆಯರಲ್ಲಿ ಸೃಷ್ಟಿಸುತ್ತಾರೆ. ವಿಳಾಸವಿಲ್ಲದ ಉತ್ತರ ಭಾರತ, ಬಾಂಗ್ಲಾದ ಮಹಿಳೆಯರನ್ನು ಇಂತಹ ಕೆಲಸಗಳಿಗೆ ಬಳಸಲಾಗುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

“ರಾಜ್ಯದಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡಿದ್ದಾರೆ. ಅಡಗುದಾಣಗಳನ್ನು ನಿರ್ಮಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ಮುಂಬೈ ಮಾದರಿಯ ವೇಶ್ಯಾವಾಟಿಕೆ. ಇದನ್ನು ಒಡನಾಡಿ ಸಂಸ್ಥೆ 15 ವರ್ಷಗಳ ಹಿಂದೆ ಕಂಡು ಹಿಡಿದಿತ್ತು. ದಾಳಿ ನಡೆಯುವಾಗ ಇಲ್ಲಿ ಅಡಗುದಾಣ ಇದೆ ಎಂಬುದು ತಿಳಿಯುವುದು ಇಲ್ಲ. ಅವರ ಮಾಹಿತಿದಾರರು ಹಲವು ಕಡೆಗಳಲ್ಲಿ ಇರುತ್ತಾರೆ. ಪೊಲೀಸರು, ನಾವುಗಳು ದಾಳಿಗೆ ಹೋಗುತ್ತಿರುವ ಮಾಹಿತಿ ದಂಧೆ ನಡೆಸುವವರಿಗೆ ಬೇಗನೆ ತಿಳಿದುಬಿಡುತ್ತದೆ. ನಮ್ಮ ಚಲನವಲನಗಳನ್ನು ಈ ಇವರು ಗಮನಿಸುತ್ತಿರುತ್ತಾರೆ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿರುತ್ತಾರೆ” ಎಂದರು.

ಸ್ಟ್ಯಾನ್ಲಿ ಅವರು ತುಮಕೂರಿನ ವಿಚಾರದ ಬಗ್ಗೆ ವಿವರಸಿದ್ದು ಹೀಗೆ, “ಕಾಂಡೋಮ್‌ಗಳ ಸುದ್ದಿಯಿಂದ ನಾವು ಇದರ ಜಾಡು ಹಿಡಿದೆವು. ಕ್ಯಾತ್ಸಂದ್ರದ ನಂದಿ ಲಾಡ್ಜ್‌, ನಾಲ್ಕು ಅಂತಸ್ತಿನ ಕಟ್ಟಡ. ಉಳಿಯಲು ಅಷ್ಟು ಯೋಗ್ಯವಲ್ಲದ ಅದು, ಹಣ ಮುದ್ರಿಸುವ ಟಂಕಸಾಲೆಯಾಗಿದೆ. ಒಂದು ರೂಮ್‌ನಿಂದ ದಿನಕ್ಕೆ 10, 20 ಸಾವಿರಕ್ಕೂ ಹೆಚ್ಚು ಗಳಿಸುತ್ತಾರೆ. ರೂಮ್‌ಗಳನ್ನು ಮಾರ್ಪಡಿಸಿದ್ದಾರೆ. ಲಾಡ್ಜ್‌ನ ಮೂರನೇ ಮಹಡಿಯಲ್ಲಿ ಒಂದು ಗೇಟ್ ಇದೆ ಅದನ್ನು ಕ್ಲೋಸ್ ಮಾಡಿ, ಅಲ್ಲಿರುವ ಎಲ್ಲಾ ಹುಡುಗಿರನ್ನು ಮೊದಲೇ ರಚನೆ ಮಾಡಿರುವ ಅಡಗುದಾಣಗಳಲ್ಲಿ ಬಚ್ಚಿಡಲಾಗುತ್ತದೆ. ಈ ಅಡಗುದಾಣಗಳು ವಿಚಿತ್ರವಾಗಿರುತ್ತವೆ. ಕಬೋರ್ಡ್, ಟಿವಿಯ ಹಿಂದೆ, ಡ್ರೈನೇಜ್‌ನಲ್ಲಿಯೂ ಅಡಗುದಾಣಗಳು ಇರುತ್ತವೆ. ಇವುಗಳನ್ನ ಒಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಿಸ್ಕ್ ತೆಗೆದುಕೊಳ್ಳಬೇಕು ಅಷ್ಟೆ. ಇಲ್ಲಿ ಒಂದು ಟೇಬಲ್‌ ತರಹದ ರಚನೆಯಲ್ಲಿ ಅಡಗುದಾಣವಿತ್ತು. ಸದ್ಯ ಪೊಲಿಸರು ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಒಬ್ಬ ಮಹಿಳೆಯನ್ನು ಪಿಂಪ್‌ಗಳು ಆಟೋದಲ್ಲಿ ಕರೆದುಕೊಂಡು ಪರಾರಿಯಾಗಿದ್ದಾರೆ” ಎಂದರು.

“ಇಂದು ಸಿಕ್ಕಿಹಾಕಿಕೊಂಡವರಲ್ಲಿ ಇಬ್ಬರನ್ನು ಈ ಮೊದಲು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೆ ಕೆಲಸದಲ್ಲಿ ತೊಡಗುತ್ತಾರೆ. ಇವರಿಗೆ ಭಯ, ಮುಜುಗುರ ಇಲ್ಲ. ಇವರಿಗಾಗಿ ಒಂದು ಸಪೋರ್ಟ್ ಸಿಸ್ಟಮ್ ಇದೆ. ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಸಂಘಟಿತ ಅಪರಾಧ. ಇದಕ್ಕೆ ಐಟಿಪಿಎ ಸೆಕ್ಷನ್ ಸಾಕಾಗುವುದಿಲ್ಲ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಬಳಸಿದ್ದಾರೆ. ರಾಜ್ಯದಲ್ಲಿ ವೇಶ್ಯಾವಾಟಿಕೆ ನೆಟ್‌ವರ್ಕ್ ದೊಡ್ಡ ಕ್ಯಾನ್ಸರ್‌ ತರ ಬೆಳೆದಿದೆ. ಮನಸ್ಸು ಮಾಡಿದರೆ ಈ ಜಾಲವನ್ನು ಹಿಡಿಯಬಹುದು” ಎಂದು ಸ್ಟ್ಯಾನ್ಲಿ ಅಭಿಪ್ರಾಯ ಪಟ್ಟರು.

ಹೆಣ್ಣು ಮಕ್ಕಳ ಜೀವನದಲ್ಲಿ ದೌರ್ಜನ್ಯ ನಡೆಸುವ ಈ ಪಿಂಪ್‌ಗಳು ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. “ಒಬ್ಬೊಬ್ಬ ಕಿಂಗ್ ಪಿಂಪ್ 150, 175 ಕೋಟಿ ಬೆಲೆ ಬಾಳುತ್ತಾರೆ. ಇವರು ಮುಂದೊಂದು ದಿನ ನಮ್ಮನ್ನು ಆಳುವವರಾಗುತ್ತಾರೆ. ಮಂಗಳೂರಿನಲ್ಲಿ ಒಬ್ಬ ಪಿಂಪ್ 175 ಕೋಟಿ ಬೆಲೆ ಬಾಳುತ್ತಾನೆ. ಆತ ಎಂಎಲ್‌ಎ ಆಗಲು ಕೂಡ ಪ್ರಯತ್ನಿಸಿದ್ದ. ಇನ್ನೊಬ್ಬ ಬೆಂಗಳೂರಿನ ಪಿಂಪ್ ರಾಜಕಾರಣಿಯ ಆಶ್ರಯದಲ್ಲಿದ್ದಾನೆ. ಇವರೆಲ್ಲಾ ತುಂಬಾ ಅಪಾಯಕಾರಿ. ನಮಗೆ ಜನರ ಬೆಂಬಲ ಇರೋದ್ರಿಂದ ನಾವು ಈ ಕೆಲಸದಲ್ಲಿ ಮುಂದುವರೆಯತ್ತಿದ್ದೇವೆ” ಎಂದರು.

ಮುಂದುವರಿದು, “ಇಂತಹ ಅಡಗುತಾಣಗಳನ್ನು ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಾಶಗೊಳಿಸಲು, ಕೆಡವಲು ಈಗಾಗಲೇ ಆದೇಶವಿದೆ. ಕಟ್ಟಡಗಳನ್ನು ಕೆಡವಿ, ತನಿಖೆ ನಡೆಸಲ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಎಲ್ಲ ಅಧಿಕಾರಿಗಳ ಬಗ್ಗೆ ಇದರ ಆರ್ಡರ್ ಕಾಪಿ ಇದೆ ಕ್ರಮ ಕೈಗೊಳ್ಳಬೇಕು ಅಷ್ಟೆ. ಒಂದೇ ಜಾಗದಲ್ಲಿ ಪುನರಾವರ್ತಿತ ಅಪರಾಧಗಳು ಮತ್ತು ಕಟ್ಟಡದ ನಕ್ಷೆ ಬದಲಿಸಿದ ಆರೋಪ ಸೇರಿ ಹಲವು ಅಪರಾಧಗಳಿಗೆ ಕಾರಣವಾಗುತ್ತದೆ. ಹಾಗಾಗಿ ಇದಕ್ಕೆ ಇರುವ ಕಾನೂನು ಬಳಸಿ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರನ್ನು ಮಾನವೀಯ ನೆಲೆಯಲ್ಲಿ ನೋಡಬೇಕು” ಎಂದರು.

ಮೈಸೂರಿನ ಒಡನಾಡಿ… ಒಂದು ಸಾಮಾಜಿಕ, ಸರ್ಕಾರೇತರ ಸಂಸ್ಥೆ. ಈ ಸಂಸ್ಥೆ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ, ಇತ್ಯಾದಿ ಕೆಲಸಗಳನ್ನು ಮಾಡುತ್ತಿದೆ. ಈ ಸಂಸ್ಥೆಯನ್ನು 1984ರಲ್ಲಿ ಕೆ. ವಿ ಸ್ಟಾನ್ಲಿ ಮತ್ತು ಎಂ. ಎಲ್. ಪರಶುರಾಮ ಅವರು ಪ್ರಾರಂಭಿಸಿದರು. ಅದನ್ನು 1993 ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಾಯಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...