Homeಕರ್ನಾಟಕವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ತುಮಕೂರು ಕ್ಯಾತ್ಸಂದ್ರದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಹೈಟೆಕ್ ವೇಶ್ಯಾವಾಟಿಕೆ ಜಾಲವೊಂದು ಬಯಲಿಗೆ ಬಂದಿದೆ.

- Advertisement -
- Advertisement -

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದೆರಡು ವಾರಗಳ ಹಿಂದೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ವಿಚಾರ ಜನರಲ್ಲಿ ಗೊಂದಲ ಮೂಡಿಸಿತ್ತು. ಇದು ನಗರದಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆಯ ಪರಿಣಾಮ ಎಂದು ಇದೀಗ ತಿಳಿದುಬಂದಿದೆ.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ಸ್ಟ್ಯಾನ್ಲಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರು ನಾನುಗೌರಿ.ಕಾಂ ಜೊತೆ ತುಮಕೂರಿನಲ್ಲಿನ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ.

“ಕಳೆದೆರಡು ವಾರಗಳ ಹಿಂದೆ ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಇಂದು (ಮಂಗಳವಾರ) ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದೇವೆ” ಎಂದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದರು.

“ಹಣ ಸಂಪಾದನೆಗೆ ಹೆಣ್ಣು ಮಕ್ಕಳನ್ನು ಬಳಸುವುದು, ಅವರ ಮೂಲಕ ಹಣ ಸಂಪಾದಿಸುವುದು ಅಮಾನವೀಯ. ಒಬ್ಬೊಬ್ಬ ಹೆಣ್ಣು ಮಕ್ಕಳು ಪ್ರತಿದಿನ 10, 15, 18 ಗಂಡಸರನ್ನು ನಿಭಾಯಿಸಬೇಕು. ಇದಕ್ಕಾಗಿ ಇವರನ್ನು ಹಿಂಸೆಗೆ ನೂಕಲಾಗುತ್ತದೆ. ಹೆದರಿಸಿ, ಬೆದರಿಸಿ ಇಂತಹ ಮಾನಸಿಕ ಸ್ಥಿತಿಯನ್ನು ಮಹಿಳೆಯರಲ್ಲಿ ಸೃಷ್ಟಿಸುತ್ತಾರೆ. ವಿಳಾಸವಿಲ್ಲದ ಉತ್ತರ ಭಾರತ, ಬಾಂಗ್ಲಾದ ಮಹಿಳೆಯರನ್ನು ಇಂತಹ ಕೆಲಸಗಳಿಗೆ ಬಳಸಲಾಗುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

“ರಾಜ್ಯದಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡಿದ್ದಾರೆ. ಅಡಗುದಾಣಗಳನ್ನು ನಿರ್ಮಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ಮುಂಬೈ ಮಾದರಿಯ ವೇಶ್ಯಾವಾಟಿಕೆ. ಇದನ್ನು ಒಡನಾಡಿ ಸಂಸ್ಥೆ 15 ವರ್ಷಗಳ ಹಿಂದೆ ಕಂಡು ಹಿಡಿದಿತ್ತು. ದಾಳಿ ನಡೆಯುವಾಗ ಇಲ್ಲಿ ಅಡಗುದಾಣ ಇದೆ ಎಂಬುದು ತಿಳಿಯುವುದು ಇಲ್ಲ. ಅವರ ಮಾಹಿತಿದಾರರು ಹಲವು ಕಡೆಗಳಲ್ಲಿ ಇರುತ್ತಾರೆ. ಪೊಲೀಸರು, ನಾವುಗಳು ದಾಳಿಗೆ ಹೋಗುತ್ತಿರುವ ಮಾಹಿತಿ ದಂಧೆ ನಡೆಸುವವರಿಗೆ ಬೇಗನೆ ತಿಳಿದುಬಿಡುತ್ತದೆ. ನಮ್ಮ ಚಲನವಲನಗಳನ್ನು ಈ ಇವರು ಗಮನಿಸುತ್ತಿರುತ್ತಾರೆ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿರುತ್ತಾರೆ” ಎಂದರು.

ಸ್ಟ್ಯಾನ್ಲಿ ಅವರು ತುಮಕೂರಿನ ವಿಚಾರದ ಬಗ್ಗೆ ವಿವರಸಿದ್ದು ಹೀಗೆ, “ಕಾಂಡೋಮ್‌ಗಳ ಸುದ್ದಿಯಿಂದ ನಾವು ಇದರ ಜಾಡು ಹಿಡಿದೆವು. ಕ್ಯಾತ್ಸಂದ್ರದ ನಂದಿ ಲಾಡ್ಜ್‌, ನಾಲ್ಕು ಅಂತಸ್ತಿನ ಕಟ್ಟಡ. ಉಳಿಯಲು ಅಷ್ಟು ಯೋಗ್ಯವಲ್ಲದ ಅದು, ಹಣ ಮುದ್ರಿಸುವ ಟಂಕಸಾಲೆಯಾಗಿದೆ. ಒಂದು ರೂಮ್‌ನಿಂದ ದಿನಕ್ಕೆ 10, 20 ಸಾವಿರಕ್ಕೂ ಹೆಚ್ಚು ಗಳಿಸುತ್ತಾರೆ. ರೂಮ್‌ಗಳನ್ನು ಮಾರ್ಪಡಿಸಿದ್ದಾರೆ. ಲಾಡ್ಜ್‌ನ ಮೂರನೇ ಮಹಡಿಯಲ್ಲಿ ಒಂದು ಗೇಟ್ ಇದೆ ಅದನ್ನು ಕ್ಲೋಸ್ ಮಾಡಿ, ಅಲ್ಲಿರುವ ಎಲ್ಲಾ ಹುಡುಗಿರನ್ನು ಮೊದಲೇ ರಚನೆ ಮಾಡಿರುವ ಅಡಗುದಾಣಗಳಲ್ಲಿ ಬಚ್ಚಿಡಲಾಗುತ್ತದೆ. ಈ ಅಡಗುದಾಣಗಳು ವಿಚಿತ್ರವಾಗಿರುತ್ತವೆ. ಕಬೋರ್ಡ್, ಟಿವಿಯ ಹಿಂದೆ, ಡ್ರೈನೇಜ್‌ನಲ್ಲಿಯೂ ಅಡಗುದಾಣಗಳು ಇರುತ್ತವೆ. ಇವುಗಳನ್ನ ಒಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಿಸ್ಕ್ ತೆಗೆದುಕೊಳ್ಳಬೇಕು ಅಷ್ಟೆ. ಇಲ್ಲಿ ಒಂದು ಟೇಬಲ್‌ ತರಹದ ರಚನೆಯಲ್ಲಿ ಅಡಗುದಾಣವಿತ್ತು. ಸದ್ಯ ಪೊಲಿಸರು ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಒಬ್ಬ ಮಹಿಳೆಯನ್ನು ಪಿಂಪ್‌ಗಳು ಆಟೋದಲ್ಲಿ ಕರೆದುಕೊಂಡು ಪರಾರಿಯಾಗಿದ್ದಾರೆ” ಎಂದರು.

“ಇಂದು ಸಿಕ್ಕಿಹಾಕಿಕೊಂಡವರಲ್ಲಿ ಇಬ್ಬರನ್ನು ಈ ಮೊದಲು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೆ ಕೆಲಸದಲ್ಲಿ ತೊಡಗುತ್ತಾರೆ. ಇವರಿಗೆ ಭಯ, ಮುಜುಗುರ ಇಲ್ಲ. ಇವರಿಗಾಗಿ ಒಂದು ಸಪೋರ್ಟ್ ಸಿಸ್ಟಮ್ ಇದೆ. ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಸಂಘಟಿತ ಅಪರಾಧ. ಇದಕ್ಕೆ ಐಟಿಪಿಎ ಸೆಕ್ಷನ್ ಸಾಕಾಗುವುದಿಲ್ಲ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಬಳಸಿದ್ದಾರೆ. ರಾಜ್ಯದಲ್ಲಿ ವೇಶ್ಯಾವಾಟಿಕೆ ನೆಟ್‌ವರ್ಕ್ ದೊಡ್ಡ ಕ್ಯಾನ್ಸರ್‌ ತರ ಬೆಳೆದಿದೆ. ಮನಸ್ಸು ಮಾಡಿದರೆ ಈ ಜಾಲವನ್ನು ಹಿಡಿಯಬಹುದು” ಎಂದು ಸ್ಟ್ಯಾನ್ಲಿ ಅಭಿಪ್ರಾಯ ಪಟ್ಟರು.

ಹೆಣ್ಣು ಮಕ್ಕಳ ಜೀವನದಲ್ಲಿ ದೌರ್ಜನ್ಯ ನಡೆಸುವ ಈ ಪಿಂಪ್‌ಗಳು ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. “ಒಬ್ಬೊಬ್ಬ ಕಿಂಗ್ ಪಿಂಪ್ 150, 175 ಕೋಟಿ ಬೆಲೆ ಬಾಳುತ್ತಾರೆ. ಇವರು ಮುಂದೊಂದು ದಿನ ನಮ್ಮನ್ನು ಆಳುವವರಾಗುತ್ತಾರೆ. ಮಂಗಳೂರಿನಲ್ಲಿ ಒಬ್ಬ ಪಿಂಪ್ 175 ಕೋಟಿ ಬೆಲೆ ಬಾಳುತ್ತಾನೆ. ಆತ ಎಂಎಲ್‌ಎ ಆಗಲು ಕೂಡ ಪ್ರಯತ್ನಿಸಿದ್ದ. ಇನ್ನೊಬ್ಬ ಬೆಂಗಳೂರಿನ ಪಿಂಪ್ ರಾಜಕಾರಣಿಯ ಆಶ್ರಯದಲ್ಲಿದ್ದಾನೆ. ಇವರೆಲ್ಲಾ ತುಂಬಾ ಅಪಾಯಕಾರಿ. ನಮಗೆ ಜನರ ಬೆಂಬಲ ಇರೋದ್ರಿಂದ ನಾವು ಈ ಕೆಲಸದಲ್ಲಿ ಮುಂದುವರೆಯತ್ತಿದ್ದೇವೆ” ಎಂದರು.

ಮುಂದುವರಿದು, “ಇಂತಹ ಅಡಗುತಾಣಗಳನ್ನು ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಾಶಗೊಳಿಸಲು, ಕೆಡವಲು ಈಗಾಗಲೇ ಆದೇಶವಿದೆ. ಕಟ್ಟಡಗಳನ್ನು ಕೆಡವಿ, ತನಿಖೆ ನಡೆಸಲ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಎಲ್ಲ ಅಧಿಕಾರಿಗಳ ಬಗ್ಗೆ ಇದರ ಆರ್ಡರ್ ಕಾಪಿ ಇದೆ ಕ್ರಮ ಕೈಗೊಳ್ಳಬೇಕು ಅಷ್ಟೆ. ಒಂದೇ ಜಾಗದಲ್ಲಿ ಪುನರಾವರ್ತಿತ ಅಪರಾಧಗಳು ಮತ್ತು ಕಟ್ಟಡದ ನಕ್ಷೆ ಬದಲಿಸಿದ ಆರೋಪ ಸೇರಿ ಹಲವು ಅಪರಾಧಗಳಿಗೆ ಕಾರಣವಾಗುತ್ತದೆ. ಹಾಗಾಗಿ ಇದಕ್ಕೆ ಇರುವ ಕಾನೂನು ಬಳಸಿ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರನ್ನು ಮಾನವೀಯ ನೆಲೆಯಲ್ಲಿ ನೋಡಬೇಕು” ಎಂದರು.

ಮೈಸೂರಿನ ಒಡನಾಡಿ… ಒಂದು ಸಾಮಾಜಿಕ, ಸರ್ಕಾರೇತರ ಸಂಸ್ಥೆ. ಈ ಸಂಸ್ಥೆ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ, ಇತ್ಯಾದಿ ಕೆಲಸಗಳನ್ನು ಮಾಡುತ್ತಿದೆ. ಈ ಸಂಸ್ಥೆಯನ್ನು 1984ರಲ್ಲಿ ಕೆ. ವಿ ಸ್ಟಾನ್ಲಿ ಮತ್ತು ಎಂ. ಎಲ್. ಪರಶುರಾಮ ಅವರು ಪ್ರಾರಂಭಿಸಿದರು. ಅದನ್ನು 1993 ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಾಯಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...