Homeಕರ್ನಾಟಕವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ತುಮಕೂರು ಕ್ಯಾತ್ಸಂದ್ರದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ ಹೈಟೆಕ್ ವೇಶ್ಯಾವಾಟಿಕೆ ಜಾಲವೊಂದು ಬಯಲಿಗೆ ಬಂದಿದೆ.

- Advertisement -
- Advertisement -

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದೆರಡು ವಾರಗಳ ಹಿಂದೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ರಾಶಿ ರಾಶಿ ಕಾಂಡೋಮ್‌ಗಳ ವಿಚಾರ ಜನರಲ್ಲಿ ಗೊಂದಲ ಮೂಡಿಸಿತ್ತು. ಇದು ನಗರದಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆಯ ಪರಿಣಾಮ ಎಂದು ಇದೀಗ ತಿಳಿದುಬಂದಿದೆ.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ಸ್ಟ್ಯಾನ್ಲಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರು ನಾನುಗೌರಿ.ಕಾಂ ಜೊತೆ ತುಮಕೂರಿನಲ್ಲಿನ ನಡೆದ ದಾಳಿ ಬಗ್ಗೆ ಮಾತನಾಡಿದ್ದಾರೆ.

“ಕಳೆದೆರಡು ವಾರಗಳ ಹಿಂದೆ ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಇಂದು (ಮಂಗಳವಾರ) ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದೇವೆ” ಎಂದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದರು.

“ಹಣ ಸಂಪಾದನೆಗೆ ಹೆಣ್ಣು ಮಕ್ಕಳನ್ನು ಬಳಸುವುದು, ಅವರ ಮೂಲಕ ಹಣ ಸಂಪಾದಿಸುವುದು ಅಮಾನವೀಯ. ಒಬ್ಬೊಬ್ಬ ಹೆಣ್ಣು ಮಕ್ಕಳು ಪ್ರತಿದಿನ 10, 15, 18 ಗಂಡಸರನ್ನು ನಿಭಾಯಿಸಬೇಕು. ಇದಕ್ಕಾಗಿ ಇವರನ್ನು ಹಿಂಸೆಗೆ ನೂಕಲಾಗುತ್ತದೆ. ಹೆದರಿಸಿ, ಬೆದರಿಸಿ ಇಂತಹ ಮಾನಸಿಕ ಸ್ಥಿತಿಯನ್ನು ಮಹಿಳೆಯರಲ್ಲಿ ಸೃಷ್ಟಿಸುತ್ತಾರೆ. ವಿಳಾಸವಿಲ್ಲದ ಉತ್ತರ ಭಾರತ, ಬಾಂಗ್ಲಾದ ಮಹಿಳೆಯರನ್ನು ಇಂತಹ ಕೆಲಸಗಳಿಗೆ ಬಳಸಲಾಗುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

“ರಾಜ್ಯದಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡಿದ್ದಾರೆ. ಅಡಗುದಾಣಗಳನ್ನು ನಿರ್ಮಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ಮುಂಬೈ ಮಾದರಿಯ ವೇಶ್ಯಾವಾಟಿಕೆ. ಇದನ್ನು ಒಡನಾಡಿ ಸಂಸ್ಥೆ 15 ವರ್ಷಗಳ ಹಿಂದೆ ಕಂಡು ಹಿಡಿದಿತ್ತು. ದಾಳಿ ನಡೆಯುವಾಗ ಇಲ್ಲಿ ಅಡಗುದಾಣ ಇದೆ ಎಂಬುದು ತಿಳಿಯುವುದು ಇಲ್ಲ. ಅವರ ಮಾಹಿತಿದಾರರು ಹಲವು ಕಡೆಗಳಲ್ಲಿ ಇರುತ್ತಾರೆ. ಪೊಲೀಸರು, ನಾವುಗಳು ದಾಳಿಗೆ ಹೋಗುತ್ತಿರುವ ಮಾಹಿತಿ ದಂಧೆ ನಡೆಸುವವರಿಗೆ ಬೇಗನೆ ತಿಳಿದುಬಿಡುತ್ತದೆ. ನಮ್ಮ ಚಲನವಲನಗಳನ್ನು ಈ ಇವರು ಗಮನಿಸುತ್ತಿರುತ್ತಾರೆ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿರುತ್ತಾರೆ” ಎಂದರು.

ಸ್ಟ್ಯಾನ್ಲಿ ಅವರು ತುಮಕೂರಿನ ವಿಚಾರದ ಬಗ್ಗೆ ವಿವರಸಿದ್ದು ಹೀಗೆ, “ಕಾಂಡೋಮ್‌ಗಳ ಸುದ್ದಿಯಿಂದ ನಾವು ಇದರ ಜಾಡು ಹಿಡಿದೆವು. ಕ್ಯಾತ್ಸಂದ್ರದ ನಂದಿ ಲಾಡ್ಜ್‌, ನಾಲ್ಕು ಅಂತಸ್ತಿನ ಕಟ್ಟಡ. ಉಳಿಯಲು ಅಷ್ಟು ಯೋಗ್ಯವಲ್ಲದ ಅದು, ಹಣ ಮುದ್ರಿಸುವ ಟಂಕಸಾಲೆಯಾಗಿದೆ. ಒಂದು ರೂಮ್‌ನಿಂದ ದಿನಕ್ಕೆ 10, 20 ಸಾವಿರಕ್ಕೂ ಹೆಚ್ಚು ಗಳಿಸುತ್ತಾರೆ. ರೂಮ್‌ಗಳನ್ನು ಮಾರ್ಪಡಿಸಿದ್ದಾರೆ. ಲಾಡ್ಜ್‌ನ ಮೂರನೇ ಮಹಡಿಯಲ್ಲಿ ಒಂದು ಗೇಟ್ ಇದೆ ಅದನ್ನು ಕ್ಲೋಸ್ ಮಾಡಿ, ಅಲ್ಲಿರುವ ಎಲ್ಲಾ ಹುಡುಗಿರನ್ನು ಮೊದಲೇ ರಚನೆ ಮಾಡಿರುವ ಅಡಗುದಾಣಗಳಲ್ಲಿ ಬಚ್ಚಿಡಲಾಗುತ್ತದೆ. ಈ ಅಡಗುದಾಣಗಳು ವಿಚಿತ್ರವಾಗಿರುತ್ತವೆ. ಕಬೋರ್ಡ್, ಟಿವಿಯ ಹಿಂದೆ, ಡ್ರೈನೇಜ್‌ನಲ್ಲಿಯೂ ಅಡಗುದಾಣಗಳು ಇರುತ್ತವೆ. ಇವುಗಳನ್ನ ಒಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಿಸ್ಕ್ ತೆಗೆದುಕೊಳ್ಳಬೇಕು ಅಷ್ಟೆ. ಇಲ್ಲಿ ಒಂದು ಟೇಬಲ್‌ ತರಹದ ರಚನೆಯಲ್ಲಿ ಅಡಗುದಾಣವಿತ್ತು. ಸದ್ಯ ಪೊಲಿಸರು ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಒಬ್ಬ ಮಹಿಳೆಯನ್ನು ಪಿಂಪ್‌ಗಳು ಆಟೋದಲ್ಲಿ ಕರೆದುಕೊಂಡು ಪರಾರಿಯಾಗಿದ್ದಾರೆ” ಎಂದರು.

“ಇಂದು ಸಿಕ್ಕಿಹಾಕಿಕೊಂಡವರಲ್ಲಿ ಇಬ್ಬರನ್ನು ಈ ಮೊದಲು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಇದೆ ಕೆಲಸದಲ್ಲಿ ತೊಡಗುತ್ತಾರೆ. ಇವರಿಗೆ ಭಯ, ಮುಜುಗುರ ಇಲ್ಲ. ಇವರಿಗಾಗಿ ಒಂದು ಸಪೋರ್ಟ್ ಸಿಸ್ಟಮ್ ಇದೆ. ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಸಂಘಟಿತ ಅಪರಾಧ. ಇದಕ್ಕೆ ಐಟಿಪಿಎ ಸೆಕ್ಷನ್ ಸಾಕಾಗುವುದಿಲ್ಲ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಬಳಸಿದ್ದಾರೆ. ರಾಜ್ಯದಲ್ಲಿ ವೇಶ್ಯಾವಾಟಿಕೆ ನೆಟ್‌ವರ್ಕ್ ದೊಡ್ಡ ಕ್ಯಾನ್ಸರ್‌ ತರ ಬೆಳೆದಿದೆ. ಮನಸ್ಸು ಮಾಡಿದರೆ ಈ ಜಾಲವನ್ನು ಹಿಡಿಯಬಹುದು” ಎಂದು ಸ್ಟ್ಯಾನ್ಲಿ ಅಭಿಪ್ರಾಯ ಪಟ್ಟರು.

ಹೆಣ್ಣು ಮಕ್ಕಳ ಜೀವನದಲ್ಲಿ ದೌರ್ಜನ್ಯ ನಡೆಸುವ ಈ ಪಿಂಪ್‌ಗಳು ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. “ಒಬ್ಬೊಬ್ಬ ಕಿಂಗ್ ಪಿಂಪ್ 150, 175 ಕೋಟಿ ಬೆಲೆ ಬಾಳುತ್ತಾರೆ. ಇವರು ಮುಂದೊಂದು ದಿನ ನಮ್ಮನ್ನು ಆಳುವವರಾಗುತ್ತಾರೆ. ಮಂಗಳೂರಿನಲ್ಲಿ ಒಬ್ಬ ಪಿಂಪ್ 175 ಕೋಟಿ ಬೆಲೆ ಬಾಳುತ್ತಾನೆ. ಆತ ಎಂಎಲ್‌ಎ ಆಗಲು ಕೂಡ ಪ್ರಯತ್ನಿಸಿದ್ದ. ಇನ್ನೊಬ್ಬ ಬೆಂಗಳೂರಿನ ಪಿಂಪ್ ರಾಜಕಾರಣಿಯ ಆಶ್ರಯದಲ್ಲಿದ್ದಾನೆ. ಇವರೆಲ್ಲಾ ತುಂಬಾ ಅಪಾಯಕಾರಿ. ನಮಗೆ ಜನರ ಬೆಂಬಲ ಇರೋದ್ರಿಂದ ನಾವು ಈ ಕೆಲಸದಲ್ಲಿ ಮುಂದುವರೆಯತ್ತಿದ್ದೇವೆ” ಎಂದರು.

ಮುಂದುವರಿದು, “ಇಂತಹ ಅಡಗುತಾಣಗಳನ್ನು ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಾಶಗೊಳಿಸಲು, ಕೆಡವಲು ಈಗಾಗಲೇ ಆದೇಶವಿದೆ. ಕಟ್ಟಡಗಳನ್ನು ಕೆಡವಿ, ತನಿಖೆ ನಡೆಸಲ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ. ಎಲ್ಲ ಅಧಿಕಾರಿಗಳ ಬಗ್ಗೆ ಇದರ ಆರ್ಡರ್ ಕಾಪಿ ಇದೆ ಕ್ರಮ ಕೈಗೊಳ್ಳಬೇಕು ಅಷ್ಟೆ. ಒಂದೇ ಜಾಗದಲ್ಲಿ ಪುನರಾವರ್ತಿತ ಅಪರಾಧಗಳು ಮತ್ತು ಕಟ್ಟಡದ ನಕ್ಷೆ ಬದಲಿಸಿದ ಆರೋಪ ಸೇರಿ ಹಲವು ಅಪರಾಧಗಳಿಗೆ ಕಾರಣವಾಗುತ್ತದೆ. ಹಾಗಾಗಿ ಇದಕ್ಕೆ ಇರುವ ಕಾನೂನು ಬಳಸಿ ತೀವ್ರವಾದ  ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರನ್ನು ಮಾನವೀಯ ನೆಲೆಯಲ್ಲಿ ನೋಡಬೇಕು” ಎಂದರು.

ಮೈಸೂರಿನ ಒಡನಾಡಿ… ಒಂದು ಸಾಮಾಜಿಕ, ಸರ್ಕಾರೇತರ ಸಂಸ್ಥೆ. ಈ ಸಂಸ್ಥೆ ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ, ಇತ್ಯಾದಿ ಕೆಲಸಗಳನ್ನು ಮಾಡುತ್ತಿದೆ. ಈ ಸಂಸ್ಥೆಯನ್ನು 1984ರಲ್ಲಿ ಕೆ. ವಿ ಸ್ಟಾನ್ಲಿ ಮತ್ತು ಎಂ. ಎಲ್. ಪರಶುರಾಮ ಅವರು ಪ್ರಾರಂಭಿಸಿದರು. ಅದನ್ನು 1993 ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಾಯಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...