Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...