Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...