Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...