Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...