Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...