Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...