Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ.

- Advertisement -
- Advertisement -

ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳ ಹೆಸರಿನಲ್ಲಿದ್ದ ಹಲವು ಹೋಬಳಿಗಳನ್ನು ಒಳಗೊಂಡ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಸೃಷ್ಟಿಸಲಾಯಿತು. ತುಮಕೂರು ನಗರದ ಸುತ್ತಲೂ ಹಬ್ಬಿಕೊಂಡಿರುವ ಸಾಮಾನ್ಯ ವಿಧಾನಸಭಾ ಕ್ಷೇತ್ರ ಇದಾಗಿದೆ.

ರಾಜಕೀಯ ಇತಿಹಾಸ

2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಸುರೇಶ್‌ ಗೌಡರವರು ಸ್ಪರ್ಧಿಸಿದರು. ಜೆಡಿಎಸ್ ಪಕ್ಷದಿಂದ ಎಚ್.ನಿಂಗಪ್ಪ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಅರೆಕೆರೆ ರುದ್ರೇಶ್ ಅಭ್ಯರ್ಥಿಯಾಗಿದ್ದರು. ಆಗ ಬಿ.ಸುರೇಶ್‌ಗೌಡರವರು 60,904 ಮತಗಳನ್ನು ಪಡೆದು ಸಮೀಪದ ಅಭ್ಯರ್ಥಿ ಜೆಡಿಎಸ್‌ನ ನಿಂಗಪ್ಪರವರ ಎದುರು 28,392 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ನಿಂಗಪ್ಪನವರು 32,512 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರೆಕೆರೆ ರುದ್ರೇಶ್‌ರವರು 21,642 ಮತಗಳಿಗೆ ಸೀಮಿತಗೊಂಡರು.

ಕೊರಟಗೆರೆಯಿಂದ ಮೂರು ಬಾರಿ ಆರಿಸಿ ಬಂದಿದ್ದ ಚೆನ್ನಿಗಪ್ಪನವರ ಪುತ್ರ ಡಿ.ಸಿ ಗೌರಿಶಂಕರ್‌ರವರು 2008ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆನಂತರ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮತ್ತೆ 2013ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾದರು. ಆಗ ಹಾಲಿ ಶಾಸಕ ಬಿ. ಸುರೇಶ್‌ ಗೌಡರವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಕಣಕ್ಕಿಳಿದರು. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತು; 1,572 ಮತಗಳ ಅಂತರದಲ್ಲಿ ಬಿಜೆಪಿಯ ಸುರೇಶ್‌ ಗೌಡರವರು ಮರು ಆಯ್ಕೆಯಾದರು. ಅವರು 55,029 ಮತಗಳನ್ನು ಪಡೆದರೆ ಗೌರಿಶಂಕರ್‌ರವರು 53,457 ಮತಗಳನ್ನು ಪಡೆದರು. ಆ ಚುನಾವಣೆಯಲ್ಲಿ ಕೆಜೆಪಿ ಸೇರಿದ್ದ ಎಚ್.ನಿಂಗಪ್ಪನವರು 22,709 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಡಿಟರ್ ನಾಗರಾಜುರವರು ಕೇವಲ 8,599 ಮತಗಳಿಗೆ ಕುಸಿದರು.

2018ರಲ್ಲಿ ಮತ್ತೆ ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವೆ ಜಿದ್ದಾಜಿದ್ದಿ ನಡೆಯಿತು. ಬಿಜೆಪಿಯ ಸುರೇಶ್‌ಗೌಡರವರ ಹ್ಯಾಟ್ರಿಕ್ ಗೆಲುವಿಗೆ ತಡೆಯೊಡ್ಡಿದ ಜೆಡಿಎಸ್‌ನ ಗೌರಿಶಂಕರ್‌ರವರು 5,640 ಮತಗಳ ಅಂತರದಲ್ಲಿ ಗೆದ್ದುಬಂದರು. ಗೌರಿಶಂಕರ್ 82,740 ಮತಗಳನ್ನು ಪಡೆದರೆ, ಸುರೇಶ್‌ಗೌಡರು 77,100 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಕೇವಲ 7,633 ಮತಗಳಿಗೆ ಕುಸಿದರು. ಈ ಚುನಾವಣೆಯಲ್ಲಿ ಅಕ್ರಮ ನಡೆಸಿ, ಬಾಂಡ್ ವಿತರಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ ಎಂದು ಸುರೇಶ್‌ಗೌಡರು ಆರೋಪಿಸಿದ್ದರು. ಅಲ್ಲದೆ ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಳಿಸಬೇಕೆಂದು ದೂರು ನೀಡಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

‘ಆರ್‌ಎಸ್‌ಎಸ್‌ನಂಥ ಭ್ರಷ್ಟರು ಮತ್ಯಾರು ಇಲ್ಲ. ಸುಮ್ಮನೇ ದೇಶಪ್ರೇಮ ಅನ್ನುತ್ತಾರೆ. ಆದರೆ ಅವರು ಭಾರೀ ಭ್ರಷ್ಟರು. ನಮ್ಮ ಕರ್ನಾಟಕದ ಆರ್‌ಎಸ್‌ಎಸ್‌ ಮುಖಂಡರನ್ನು ನೋಡಿ ಎಷ್ಟು ಹಣ ಮಾಡಿದ್ದಾರೆ’ ಎಂದಿದ್ದ ಸುರೇಶ್‌ಗೌಡರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಯಡಿಯೂರಪ್ಪನವರನ್ನು ಹೊಗಳಿದ್ದ ಅವರು 2018ರಲ್ಲಿ ಸೋತ ನಂತರ ಕ್ಷೇತ್ರದಲ್ಲಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸಿದ್ದಾರೆ.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,10,000; ಒಕ್ಕಲಿಗರು: 60,000; ಲಿಂಗಾಯಿತ: 40,000; ಪ.ಜಾ: 37,000; ಮುಸ್ಲಿಂ: 21,000; ಪ.ಪಂ: 15,000; ಕುರುಬ: 10,000; ಇತರೆ: 27,000

ಹಾಲಿ ಪರಿಸ್ಥಿತಿ

ಎರಡನೇ ಬಾರಿಗೆ ಶಾಸಕರಾಗಿರುವ ಗೌರಿಶಂಕರ್‌ರವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಸುರೇಶ್‌ಗೌಡರೊಂದಿಗಿನ ಜಗಳದಲ್ಲಿಯೇ ಹೆಚ್ಚು ಚರ್ಚೆಯಲ್ಲಿದ್ದಾರೆ.

ತುಮಕೂರಿನ ರಾಜಕೀಯ ರೌಡಿಸಂ ಇದ್ದ ಹಾಗೆ ಇರುತ್ತದೆ. ಇಲ್ಲಿ ಬಿ.ಸುರೇಶ್ ಗೌಡ ಮತ್ತು ಗೌರಿಶಂಕರ್‌ ಒಬ್ಬರಿಗೊಬ್ಬರು ಕುಸ್ತಿ ಆಡುವ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ತನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಸುರೇಶ್‌ಗೌಡರು ಆರೋಪಿಸಿ ಪೊಲೀಸ್ ದೂರು ನೀಡಿದ್ದು ಹಾಲಿ ಶಾಸಕರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೌರಿಶಂಕರ್ ಸುರೇಶ್‌ಗೌಡರಿಂದ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಪ್ರತಿ ದೂರು ನೀಡಿದ್ದಾರೆ. ಇವರಿಬ್ಬರ ಜಗಳ ಈ ರೀತಿ ಇದ್ದರೆ ಅವರ ಕಾರ್ಯಕರ್ತರೂ ಕಡಿಮೆಯೇನಿಲ್ಲ. ಪ್ರತಿ ಊರಿನಲ್ಲಿ ಗೌರಿಶಂಕರ್ ಮತ್ತು ಸುರೇಶ್‌ಗೌಡರ ಬಣಗಳಿದ್ದು ಪರಸ್ಪರ ಹೊಡೆದಾಡಿರುವ ಘಟನೆಗಳು ವರಿದಿಯಾಗಿವೆ. ಇದು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಬೇರೆ ಯಾವುದೇ ಅಭ್ಯರ್ಥಿಗಳು ಇಲ್ಲಿ ಬೆಳೆಯಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ.

ಬಿಜೆಪಿಯಿಂದ ಮಾಜಿ ಶಾಸಕ ಬಿ.ಸುರೇಶ್‌ಗೌಡರವರಿಗೆ ಟಿಕೆಟ್ ಖಚಿತವಾಗಿದೆ. ಅವರು ತನ್ನ ಆಡಳಿತಾವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಮತ ಕೊಡಿ ಎನ್ನುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಾಜಿ ಶಾಸಕರಾದ ಎಚ್.ನಿಂಗಪ್ಪರವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಜೆಡಿಎಸ್‌ನಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂದು ತಿಳಿಯುತ್ತಲೇ ಅವರು ಕಾಂಗ್ರೆಸ್ ಸೇರಿದ್ದಾರೆ. ಹಲವು ಸೋಲುಗಳನ್ನು ಕಂಡಿರುವ ಅವರು ಮತ್ತೊಂದು ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದ್‌ರಾಜ್ ಮತ್ತು ಶ್ರೀನಿವಾಸ್‌ರವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಎಚ್.ನಿಂಗಪ್ಪ

ಜೆಡಿಎಸ್‌ನಿಂದ ಗೌರಿಶಂಕರ್‌ರವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಅವರ ಮೇಲಿರುವ ಚುನಾವಣಾ ಅಕ್ರಮ ಪ್ರಕರಣದ ತೀರ್ಪು ಯಾವಾಗ ಹೊರಬೀಳಲಿದೆ ಎಂಬುದು ಗೊತ್ತಿಲ್ಲ. ಅವರ ಪರವಾಗಿ ತೀರ್ಪು ಬಂದಲ್ಲಿ ನಿರಾಂತರವಾಗಿ ಚುನಾವಣೆ ಎದುರಿಸಬಹುದು. ಒಂದು ಪಕ್ಷ ತೀರ್ಪು ವಿರುದ್ಧವಾಗಿ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಾದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಆಗ ಅವರು ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಬೇಕಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಎನಿಸಿದರೂ ಈಗಲೂ ನೇರಾ ನೇರ ಪೈಪೋಟಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಯಾರೇ ಗೆದ್ದರೂ ಅಂತರ ಬಹಳ ಕಡಿಮೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...