Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ.

- Advertisement -
- Advertisement -

ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳ ಹೆಸರಿನಲ್ಲಿದ್ದ ಹಲವು ಹೋಬಳಿಗಳನ್ನು ಒಳಗೊಂಡ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಸೃಷ್ಟಿಸಲಾಯಿತು. ತುಮಕೂರು ನಗರದ ಸುತ್ತಲೂ ಹಬ್ಬಿಕೊಂಡಿರುವ ಸಾಮಾನ್ಯ ವಿಧಾನಸಭಾ ಕ್ಷೇತ್ರ ಇದಾಗಿದೆ.

ರಾಜಕೀಯ ಇತಿಹಾಸ

2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಸುರೇಶ್‌ ಗೌಡರವರು ಸ್ಪರ್ಧಿಸಿದರು. ಜೆಡಿಎಸ್ ಪಕ್ಷದಿಂದ ಎಚ್.ನಿಂಗಪ್ಪ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಅರೆಕೆರೆ ರುದ್ರೇಶ್ ಅಭ್ಯರ್ಥಿಯಾಗಿದ್ದರು. ಆಗ ಬಿ.ಸುರೇಶ್‌ಗೌಡರವರು 60,904 ಮತಗಳನ್ನು ಪಡೆದು ಸಮೀಪದ ಅಭ್ಯರ್ಥಿ ಜೆಡಿಎಸ್‌ನ ನಿಂಗಪ್ಪರವರ ಎದುರು 28,392 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ನಿಂಗಪ್ಪನವರು 32,512 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರೆಕೆರೆ ರುದ್ರೇಶ್‌ರವರು 21,642 ಮತಗಳಿಗೆ ಸೀಮಿತಗೊಂಡರು.

ಕೊರಟಗೆರೆಯಿಂದ ಮೂರು ಬಾರಿ ಆರಿಸಿ ಬಂದಿದ್ದ ಚೆನ್ನಿಗಪ್ಪನವರ ಪುತ್ರ ಡಿ.ಸಿ ಗೌರಿಶಂಕರ್‌ರವರು 2008ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆನಂತರ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮತ್ತೆ 2013ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾದರು. ಆಗ ಹಾಲಿ ಶಾಸಕ ಬಿ. ಸುರೇಶ್‌ ಗೌಡರವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಕಣಕ್ಕಿಳಿದರು. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತು; 1,572 ಮತಗಳ ಅಂತರದಲ್ಲಿ ಬಿಜೆಪಿಯ ಸುರೇಶ್‌ ಗೌಡರವರು ಮರು ಆಯ್ಕೆಯಾದರು. ಅವರು 55,029 ಮತಗಳನ್ನು ಪಡೆದರೆ ಗೌರಿಶಂಕರ್‌ರವರು 53,457 ಮತಗಳನ್ನು ಪಡೆದರು. ಆ ಚುನಾವಣೆಯಲ್ಲಿ ಕೆಜೆಪಿ ಸೇರಿದ್ದ ಎಚ್.ನಿಂಗಪ್ಪನವರು 22,709 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಡಿಟರ್ ನಾಗರಾಜುರವರು ಕೇವಲ 8,599 ಮತಗಳಿಗೆ ಕುಸಿದರು.

2018ರಲ್ಲಿ ಮತ್ತೆ ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವೆ ಜಿದ್ದಾಜಿದ್ದಿ ನಡೆಯಿತು. ಬಿಜೆಪಿಯ ಸುರೇಶ್‌ಗೌಡರವರ ಹ್ಯಾಟ್ರಿಕ್ ಗೆಲುವಿಗೆ ತಡೆಯೊಡ್ಡಿದ ಜೆಡಿಎಸ್‌ನ ಗೌರಿಶಂಕರ್‌ರವರು 5,640 ಮತಗಳ ಅಂತರದಲ್ಲಿ ಗೆದ್ದುಬಂದರು. ಗೌರಿಶಂಕರ್ 82,740 ಮತಗಳನ್ನು ಪಡೆದರೆ, ಸುರೇಶ್‌ಗೌಡರು 77,100 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಕೇವಲ 7,633 ಮತಗಳಿಗೆ ಕುಸಿದರು. ಈ ಚುನಾವಣೆಯಲ್ಲಿ ಅಕ್ರಮ ನಡೆಸಿ, ಬಾಂಡ್ ವಿತರಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ ಎಂದು ಸುರೇಶ್‌ಗೌಡರು ಆರೋಪಿಸಿದ್ದರು. ಅಲ್ಲದೆ ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಳಿಸಬೇಕೆಂದು ದೂರು ನೀಡಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

‘ಆರ್‌ಎಸ್‌ಎಸ್‌ನಂಥ ಭ್ರಷ್ಟರು ಮತ್ಯಾರು ಇಲ್ಲ. ಸುಮ್ಮನೇ ದೇಶಪ್ರೇಮ ಅನ್ನುತ್ತಾರೆ. ಆದರೆ ಅವರು ಭಾರೀ ಭ್ರಷ್ಟರು. ನಮ್ಮ ಕರ್ನಾಟಕದ ಆರ್‌ಎಸ್‌ಎಸ್‌ ಮುಖಂಡರನ್ನು ನೋಡಿ ಎಷ್ಟು ಹಣ ಮಾಡಿದ್ದಾರೆ’ ಎಂದಿದ್ದ ಸುರೇಶ್‌ಗೌಡರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಯಡಿಯೂರಪ್ಪನವರನ್ನು ಹೊಗಳಿದ್ದ ಅವರು 2018ರಲ್ಲಿ ಸೋತ ನಂತರ ಕ್ಷೇತ್ರದಲ್ಲಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸಿದ್ದಾರೆ.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,10,000; ಒಕ್ಕಲಿಗರು: 60,000; ಲಿಂಗಾಯಿತ: 40,000; ಪ.ಜಾ: 37,000; ಮುಸ್ಲಿಂ: 21,000; ಪ.ಪಂ: 15,000; ಕುರುಬ: 10,000; ಇತರೆ: 27,000

ಹಾಲಿ ಪರಿಸ್ಥಿತಿ

ಎರಡನೇ ಬಾರಿಗೆ ಶಾಸಕರಾಗಿರುವ ಗೌರಿಶಂಕರ್‌ರವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಸುರೇಶ್‌ಗೌಡರೊಂದಿಗಿನ ಜಗಳದಲ್ಲಿಯೇ ಹೆಚ್ಚು ಚರ್ಚೆಯಲ್ಲಿದ್ದಾರೆ.

ತುಮಕೂರಿನ ರಾಜಕೀಯ ರೌಡಿಸಂ ಇದ್ದ ಹಾಗೆ ಇರುತ್ತದೆ. ಇಲ್ಲಿ ಬಿ.ಸುರೇಶ್ ಗೌಡ ಮತ್ತು ಗೌರಿಶಂಕರ್‌ ಒಬ್ಬರಿಗೊಬ್ಬರು ಕುಸ್ತಿ ಆಡುವ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ತನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಸುರೇಶ್‌ಗೌಡರು ಆರೋಪಿಸಿ ಪೊಲೀಸ್ ದೂರು ನೀಡಿದ್ದು ಹಾಲಿ ಶಾಸಕರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೌರಿಶಂಕರ್ ಸುರೇಶ್‌ಗೌಡರಿಂದ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಪ್ರತಿ ದೂರು ನೀಡಿದ್ದಾರೆ. ಇವರಿಬ್ಬರ ಜಗಳ ಈ ರೀತಿ ಇದ್ದರೆ ಅವರ ಕಾರ್ಯಕರ್ತರೂ ಕಡಿಮೆಯೇನಿಲ್ಲ. ಪ್ರತಿ ಊರಿನಲ್ಲಿ ಗೌರಿಶಂಕರ್ ಮತ್ತು ಸುರೇಶ್‌ಗೌಡರ ಬಣಗಳಿದ್ದು ಪರಸ್ಪರ ಹೊಡೆದಾಡಿರುವ ಘಟನೆಗಳು ವರಿದಿಯಾಗಿವೆ. ಇದು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಬೇರೆ ಯಾವುದೇ ಅಭ್ಯರ್ಥಿಗಳು ಇಲ್ಲಿ ಬೆಳೆಯಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ.

ಬಿಜೆಪಿಯಿಂದ ಮಾಜಿ ಶಾಸಕ ಬಿ.ಸುರೇಶ್‌ಗೌಡರವರಿಗೆ ಟಿಕೆಟ್ ಖಚಿತವಾಗಿದೆ. ಅವರು ತನ್ನ ಆಡಳಿತಾವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಮತ ಕೊಡಿ ಎನ್ನುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಾಜಿ ಶಾಸಕರಾದ ಎಚ್.ನಿಂಗಪ್ಪರವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಜೆಡಿಎಸ್‌ನಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂದು ತಿಳಿಯುತ್ತಲೇ ಅವರು ಕಾಂಗ್ರೆಸ್ ಸೇರಿದ್ದಾರೆ. ಹಲವು ಸೋಲುಗಳನ್ನು ಕಂಡಿರುವ ಅವರು ಮತ್ತೊಂದು ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದ್‌ರಾಜ್ ಮತ್ತು ಶ್ರೀನಿವಾಸ್‌ರವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಎಚ್.ನಿಂಗಪ್ಪ

ಜೆಡಿಎಸ್‌ನಿಂದ ಗೌರಿಶಂಕರ್‌ರವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಅವರ ಮೇಲಿರುವ ಚುನಾವಣಾ ಅಕ್ರಮ ಪ್ರಕರಣದ ತೀರ್ಪು ಯಾವಾಗ ಹೊರಬೀಳಲಿದೆ ಎಂಬುದು ಗೊತ್ತಿಲ್ಲ. ಅವರ ಪರವಾಗಿ ತೀರ್ಪು ಬಂದಲ್ಲಿ ನಿರಾಂತರವಾಗಿ ಚುನಾವಣೆ ಎದುರಿಸಬಹುದು. ಒಂದು ಪಕ್ಷ ತೀರ್ಪು ವಿರುದ್ಧವಾಗಿ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಾದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಆಗ ಅವರು ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಬೇಕಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಎನಿಸಿದರೂ ಈಗಲೂ ನೇರಾ ನೇರ ಪೈಪೋಟಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಯಾರೇ ಗೆದ್ದರೂ ಅಂತರ ಬಹಳ ಕಡಿಮೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...