Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ.

- Advertisement -
- Advertisement -

ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳ ಹೆಸರಿನಲ್ಲಿದ್ದ ಹಲವು ಹೋಬಳಿಗಳನ್ನು ಒಳಗೊಂಡ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಸೃಷ್ಟಿಸಲಾಯಿತು. ತುಮಕೂರು ನಗರದ ಸುತ್ತಲೂ ಹಬ್ಬಿಕೊಂಡಿರುವ ಸಾಮಾನ್ಯ ವಿಧಾನಸಭಾ ಕ್ಷೇತ್ರ ಇದಾಗಿದೆ.

ರಾಜಕೀಯ ಇತಿಹಾಸ

2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಸುರೇಶ್‌ ಗೌಡರವರು ಸ್ಪರ್ಧಿಸಿದರು. ಜೆಡಿಎಸ್ ಪಕ್ಷದಿಂದ ಎಚ್.ನಿಂಗಪ್ಪ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಅರೆಕೆರೆ ರುದ್ರೇಶ್ ಅಭ್ಯರ್ಥಿಯಾಗಿದ್ದರು. ಆಗ ಬಿ.ಸುರೇಶ್‌ಗೌಡರವರು 60,904 ಮತಗಳನ್ನು ಪಡೆದು ಸಮೀಪದ ಅಭ್ಯರ್ಥಿ ಜೆಡಿಎಸ್‌ನ ನಿಂಗಪ್ಪರವರ ಎದುರು 28,392 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ನಿಂಗಪ್ಪನವರು 32,512 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರೆಕೆರೆ ರುದ್ರೇಶ್‌ರವರು 21,642 ಮತಗಳಿಗೆ ಸೀಮಿತಗೊಂಡರು.

ಕೊರಟಗೆರೆಯಿಂದ ಮೂರು ಬಾರಿ ಆರಿಸಿ ಬಂದಿದ್ದ ಚೆನ್ನಿಗಪ್ಪನವರ ಪುತ್ರ ಡಿ.ಸಿ ಗೌರಿಶಂಕರ್‌ರವರು 2008ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆನಂತರ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮತ್ತೆ 2013ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾದರು. ಆಗ ಹಾಲಿ ಶಾಸಕ ಬಿ. ಸುರೇಶ್‌ ಗೌಡರವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಕಣಕ್ಕಿಳಿದರು. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತು; 1,572 ಮತಗಳ ಅಂತರದಲ್ಲಿ ಬಿಜೆಪಿಯ ಸುರೇಶ್‌ ಗೌಡರವರು ಮರು ಆಯ್ಕೆಯಾದರು. ಅವರು 55,029 ಮತಗಳನ್ನು ಪಡೆದರೆ ಗೌರಿಶಂಕರ್‌ರವರು 53,457 ಮತಗಳನ್ನು ಪಡೆದರು. ಆ ಚುನಾವಣೆಯಲ್ಲಿ ಕೆಜೆಪಿ ಸೇರಿದ್ದ ಎಚ್.ನಿಂಗಪ್ಪನವರು 22,709 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಡಿಟರ್ ನಾಗರಾಜುರವರು ಕೇವಲ 8,599 ಮತಗಳಿಗೆ ಕುಸಿದರು.

2018ರಲ್ಲಿ ಮತ್ತೆ ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವೆ ಜಿದ್ದಾಜಿದ್ದಿ ನಡೆಯಿತು. ಬಿಜೆಪಿಯ ಸುರೇಶ್‌ಗೌಡರವರ ಹ್ಯಾಟ್ರಿಕ್ ಗೆಲುವಿಗೆ ತಡೆಯೊಡ್ಡಿದ ಜೆಡಿಎಸ್‌ನ ಗೌರಿಶಂಕರ್‌ರವರು 5,640 ಮತಗಳ ಅಂತರದಲ್ಲಿ ಗೆದ್ದುಬಂದರು. ಗೌರಿಶಂಕರ್ 82,740 ಮತಗಳನ್ನು ಪಡೆದರೆ, ಸುರೇಶ್‌ಗೌಡರು 77,100 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಕೇವಲ 7,633 ಮತಗಳಿಗೆ ಕುಸಿದರು. ಈ ಚುನಾವಣೆಯಲ್ಲಿ ಅಕ್ರಮ ನಡೆಸಿ, ಬಾಂಡ್ ವಿತರಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ ಎಂದು ಸುರೇಶ್‌ಗೌಡರು ಆರೋಪಿಸಿದ್ದರು. ಅಲ್ಲದೆ ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಳಿಸಬೇಕೆಂದು ದೂರು ನೀಡಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

‘ಆರ್‌ಎಸ್‌ಎಸ್‌ನಂಥ ಭ್ರಷ್ಟರು ಮತ್ಯಾರು ಇಲ್ಲ. ಸುಮ್ಮನೇ ದೇಶಪ್ರೇಮ ಅನ್ನುತ್ತಾರೆ. ಆದರೆ ಅವರು ಭಾರೀ ಭ್ರಷ್ಟರು. ನಮ್ಮ ಕರ್ನಾಟಕದ ಆರ್‌ಎಸ್‌ಎಸ್‌ ಮುಖಂಡರನ್ನು ನೋಡಿ ಎಷ್ಟು ಹಣ ಮಾಡಿದ್ದಾರೆ’ ಎಂದಿದ್ದ ಸುರೇಶ್‌ಗೌಡರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಯಡಿಯೂರಪ್ಪನವರನ್ನು ಹೊಗಳಿದ್ದ ಅವರು 2018ರಲ್ಲಿ ಸೋತ ನಂತರ ಕ್ಷೇತ್ರದಲ್ಲಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸಿದ್ದಾರೆ.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,10,000; ಒಕ್ಕಲಿಗರು: 60,000; ಲಿಂಗಾಯಿತ: 40,000; ಪ.ಜಾ: 37,000; ಮುಸ್ಲಿಂ: 21,000; ಪ.ಪಂ: 15,000; ಕುರುಬ: 10,000; ಇತರೆ: 27,000

ಹಾಲಿ ಪರಿಸ್ಥಿತಿ

ಎರಡನೇ ಬಾರಿಗೆ ಶಾಸಕರಾಗಿರುವ ಗೌರಿಶಂಕರ್‌ರವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಸುರೇಶ್‌ಗೌಡರೊಂದಿಗಿನ ಜಗಳದಲ್ಲಿಯೇ ಹೆಚ್ಚು ಚರ್ಚೆಯಲ್ಲಿದ್ದಾರೆ.

ತುಮಕೂರಿನ ರಾಜಕೀಯ ರೌಡಿಸಂ ಇದ್ದ ಹಾಗೆ ಇರುತ್ತದೆ. ಇಲ್ಲಿ ಬಿ.ಸುರೇಶ್ ಗೌಡ ಮತ್ತು ಗೌರಿಶಂಕರ್‌ ಒಬ್ಬರಿಗೊಬ್ಬರು ಕುಸ್ತಿ ಆಡುವ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ತನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಸುರೇಶ್‌ಗೌಡರು ಆರೋಪಿಸಿ ಪೊಲೀಸ್ ದೂರು ನೀಡಿದ್ದು ಹಾಲಿ ಶಾಸಕರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೌರಿಶಂಕರ್ ಸುರೇಶ್‌ಗೌಡರಿಂದ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಪ್ರತಿ ದೂರು ನೀಡಿದ್ದಾರೆ. ಇವರಿಬ್ಬರ ಜಗಳ ಈ ರೀತಿ ಇದ್ದರೆ ಅವರ ಕಾರ್ಯಕರ್ತರೂ ಕಡಿಮೆಯೇನಿಲ್ಲ. ಪ್ರತಿ ಊರಿನಲ್ಲಿ ಗೌರಿಶಂಕರ್ ಮತ್ತು ಸುರೇಶ್‌ಗೌಡರ ಬಣಗಳಿದ್ದು ಪರಸ್ಪರ ಹೊಡೆದಾಡಿರುವ ಘಟನೆಗಳು ವರಿದಿಯಾಗಿವೆ. ಇದು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಬೇರೆ ಯಾವುದೇ ಅಭ್ಯರ್ಥಿಗಳು ಇಲ್ಲಿ ಬೆಳೆಯಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ.

ಬಿಜೆಪಿಯಿಂದ ಮಾಜಿ ಶಾಸಕ ಬಿ.ಸುರೇಶ್‌ಗೌಡರವರಿಗೆ ಟಿಕೆಟ್ ಖಚಿತವಾಗಿದೆ. ಅವರು ತನ್ನ ಆಡಳಿತಾವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಮತ ಕೊಡಿ ಎನ್ನುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಾಜಿ ಶಾಸಕರಾದ ಎಚ್.ನಿಂಗಪ್ಪರವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಜೆಡಿಎಸ್‌ನಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂದು ತಿಳಿಯುತ್ತಲೇ ಅವರು ಕಾಂಗ್ರೆಸ್ ಸೇರಿದ್ದಾರೆ. ಹಲವು ಸೋಲುಗಳನ್ನು ಕಂಡಿರುವ ಅವರು ಮತ್ತೊಂದು ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದ್‌ರಾಜ್ ಮತ್ತು ಶ್ರೀನಿವಾಸ್‌ರವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಎಚ್.ನಿಂಗಪ್ಪ

ಜೆಡಿಎಸ್‌ನಿಂದ ಗೌರಿಶಂಕರ್‌ರವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಅವರ ಮೇಲಿರುವ ಚುನಾವಣಾ ಅಕ್ರಮ ಪ್ರಕರಣದ ತೀರ್ಪು ಯಾವಾಗ ಹೊರಬೀಳಲಿದೆ ಎಂಬುದು ಗೊತ್ತಿಲ್ಲ. ಅವರ ಪರವಾಗಿ ತೀರ್ಪು ಬಂದಲ್ಲಿ ನಿರಾಂತರವಾಗಿ ಚುನಾವಣೆ ಎದುರಿಸಬಹುದು. ಒಂದು ಪಕ್ಷ ತೀರ್ಪು ವಿರುದ್ಧವಾಗಿ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಾದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಆಗ ಅವರು ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಬೇಕಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಎನಿಸಿದರೂ ಈಗಲೂ ನೇರಾ ನೇರ ಪೈಪೋಟಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಯಾರೇ ಗೆದ್ದರೂ ಅಂತರ ಬಹಳ ಕಡಿಮೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...