Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ.

- Advertisement -
- Advertisement -

ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳ ಹೆಸರಿನಲ್ಲಿದ್ದ ಹಲವು ಹೋಬಳಿಗಳನ್ನು ಒಳಗೊಂಡ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಸೃಷ್ಟಿಸಲಾಯಿತು. ತುಮಕೂರು ನಗರದ ಸುತ್ತಲೂ ಹಬ್ಬಿಕೊಂಡಿರುವ ಸಾಮಾನ್ಯ ವಿಧಾನಸಭಾ ಕ್ಷೇತ್ರ ಇದಾಗಿದೆ.

ರಾಜಕೀಯ ಇತಿಹಾಸ

2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಸುರೇಶ್‌ ಗೌಡರವರು ಸ್ಪರ್ಧಿಸಿದರು. ಜೆಡಿಎಸ್ ಪಕ್ಷದಿಂದ ಎಚ್.ನಿಂಗಪ್ಪ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಅರೆಕೆರೆ ರುದ್ರೇಶ್ ಅಭ್ಯರ್ಥಿಯಾಗಿದ್ದರು. ಆಗ ಬಿ.ಸುರೇಶ್‌ಗೌಡರವರು 60,904 ಮತಗಳನ್ನು ಪಡೆದು ಸಮೀಪದ ಅಭ್ಯರ್ಥಿ ಜೆಡಿಎಸ್‌ನ ನಿಂಗಪ್ಪರವರ ಎದುರು 28,392 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ನಿಂಗಪ್ಪನವರು 32,512 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರೆಕೆರೆ ರುದ್ರೇಶ್‌ರವರು 21,642 ಮತಗಳಿಗೆ ಸೀಮಿತಗೊಂಡರು.

ಕೊರಟಗೆರೆಯಿಂದ ಮೂರು ಬಾರಿ ಆರಿಸಿ ಬಂದಿದ್ದ ಚೆನ್ನಿಗಪ್ಪನವರ ಪುತ್ರ ಡಿ.ಸಿ ಗೌರಿಶಂಕರ್‌ರವರು 2008ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆನಂತರ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮತ್ತೆ 2013ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾದರು. ಆಗ ಹಾಲಿ ಶಾಸಕ ಬಿ. ಸುರೇಶ್‌ ಗೌಡರವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಕಣಕ್ಕಿಳಿದರು. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತು; 1,572 ಮತಗಳ ಅಂತರದಲ್ಲಿ ಬಿಜೆಪಿಯ ಸುರೇಶ್‌ ಗೌಡರವರು ಮರು ಆಯ್ಕೆಯಾದರು. ಅವರು 55,029 ಮತಗಳನ್ನು ಪಡೆದರೆ ಗೌರಿಶಂಕರ್‌ರವರು 53,457 ಮತಗಳನ್ನು ಪಡೆದರು. ಆ ಚುನಾವಣೆಯಲ್ಲಿ ಕೆಜೆಪಿ ಸೇರಿದ್ದ ಎಚ್.ನಿಂಗಪ್ಪನವರು 22,709 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಡಿಟರ್ ನಾಗರಾಜುರವರು ಕೇವಲ 8,599 ಮತಗಳಿಗೆ ಕುಸಿದರು.

2018ರಲ್ಲಿ ಮತ್ತೆ ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವೆ ಜಿದ್ದಾಜಿದ್ದಿ ನಡೆಯಿತು. ಬಿಜೆಪಿಯ ಸುರೇಶ್‌ಗೌಡರವರ ಹ್ಯಾಟ್ರಿಕ್ ಗೆಲುವಿಗೆ ತಡೆಯೊಡ್ಡಿದ ಜೆಡಿಎಸ್‌ನ ಗೌರಿಶಂಕರ್‌ರವರು 5,640 ಮತಗಳ ಅಂತರದಲ್ಲಿ ಗೆದ್ದುಬಂದರು. ಗೌರಿಶಂಕರ್ 82,740 ಮತಗಳನ್ನು ಪಡೆದರೆ, ಸುರೇಶ್‌ಗೌಡರು 77,100 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಕೇವಲ 7,633 ಮತಗಳಿಗೆ ಕುಸಿದರು. ಈ ಚುನಾವಣೆಯಲ್ಲಿ ಅಕ್ರಮ ನಡೆಸಿ, ಬಾಂಡ್ ವಿತರಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ ಎಂದು ಸುರೇಶ್‌ಗೌಡರು ಆರೋಪಿಸಿದ್ದರು. ಅಲ್ಲದೆ ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಳಿಸಬೇಕೆಂದು ದೂರು ನೀಡಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

‘ಆರ್‌ಎಸ್‌ಎಸ್‌ನಂಥ ಭ್ರಷ್ಟರು ಮತ್ಯಾರು ಇಲ್ಲ. ಸುಮ್ಮನೇ ದೇಶಪ್ರೇಮ ಅನ್ನುತ್ತಾರೆ. ಆದರೆ ಅವರು ಭಾರೀ ಭ್ರಷ್ಟರು. ನಮ್ಮ ಕರ್ನಾಟಕದ ಆರ್‌ಎಸ್‌ಎಸ್‌ ಮುಖಂಡರನ್ನು ನೋಡಿ ಎಷ್ಟು ಹಣ ಮಾಡಿದ್ದಾರೆ’ ಎಂದಿದ್ದ ಸುರೇಶ್‌ಗೌಡರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಯಡಿಯೂರಪ್ಪನವರನ್ನು ಹೊಗಳಿದ್ದ ಅವರು 2018ರಲ್ಲಿ ಸೋತ ನಂತರ ಕ್ಷೇತ್ರದಲ್ಲಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸಿದ್ದಾರೆ.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,10,000; ಒಕ್ಕಲಿಗರು: 60,000; ಲಿಂಗಾಯಿತ: 40,000; ಪ.ಜಾ: 37,000; ಮುಸ್ಲಿಂ: 21,000; ಪ.ಪಂ: 15,000; ಕುರುಬ: 10,000; ಇತರೆ: 27,000

ಹಾಲಿ ಪರಿಸ್ಥಿತಿ

ಎರಡನೇ ಬಾರಿಗೆ ಶಾಸಕರಾಗಿರುವ ಗೌರಿಶಂಕರ್‌ರವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಸುರೇಶ್‌ಗೌಡರೊಂದಿಗಿನ ಜಗಳದಲ್ಲಿಯೇ ಹೆಚ್ಚು ಚರ್ಚೆಯಲ್ಲಿದ್ದಾರೆ.

ತುಮಕೂರಿನ ರಾಜಕೀಯ ರೌಡಿಸಂ ಇದ್ದ ಹಾಗೆ ಇರುತ್ತದೆ. ಇಲ್ಲಿ ಬಿ.ಸುರೇಶ್ ಗೌಡ ಮತ್ತು ಗೌರಿಶಂಕರ್‌ ಒಬ್ಬರಿಗೊಬ್ಬರು ಕುಸ್ತಿ ಆಡುವ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ತನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಸುರೇಶ್‌ಗೌಡರು ಆರೋಪಿಸಿ ಪೊಲೀಸ್ ದೂರು ನೀಡಿದ್ದು ಹಾಲಿ ಶಾಸಕರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೌರಿಶಂಕರ್ ಸುರೇಶ್‌ಗೌಡರಿಂದ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಪ್ರತಿ ದೂರು ನೀಡಿದ್ದಾರೆ. ಇವರಿಬ್ಬರ ಜಗಳ ಈ ರೀತಿ ಇದ್ದರೆ ಅವರ ಕಾರ್ಯಕರ್ತರೂ ಕಡಿಮೆಯೇನಿಲ್ಲ. ಪ್ರತಿ ಊರಿನಲ್ಲಿ ಗೌರಿಶಂಕರ್ ಮತ್ತು ಸುರೇಶ್‌ಗೌಡರ ಬಣಗಳಿದ್ದು ಪರಸ್ಪರ ಹೊಡೆದಾಡಿರುವ ಘಟನೆಗಳು ವರಿದಿಯಾಗಿವೆ. ಇದು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಬೇರೆ ಯಾವುದೇ ಅಭ್ಯರ್ಥಿಗಳು ಇಲ್ಲಿ ಬೆಳೆಯಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ.

ಬಿಜೆಪಿಯಿಂದ ಮಾಜಿ ಶಾಸಕ ಬಿ.ಸುರೇಶ್‌ಗೌಡರವರಿಗೆ ಟಿಕೆಟ್ ಖಚಿತವಾಗಿದೆ. ಅವರು ತನ್ನ ಆಡಳಿತಾವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಮತ ಕೊಡಿ ಎನ್ನುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಾಜಿ ಶಾಸಕರಾದ ಎಚ್.ನಿಂಗಪ್ಪರವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಜೆಡಿಎಸ್‌ನಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂದು ತಿಳಿಯುತ್ತಲೇ ಅವರು ಕಾಂಗ್ರೆಸ್ ಸೇರಿದ್ದಾರೆ. ಹಲವು ಸೋಲುಗಳನ್ನು ಕಂಡಿರುವ ಅವರು ಮತ್ತೊಂದು ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದ್‌ರಾಜ್ ಮತ್ತು ಶ್ರೀನಿವಾಸ್‌ರವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಎಚ್.ನಿಂಗಪ್ಪ

ಜೆಡಿಎಸ್‌ನಿಂದ ಗೌರಿಶಂಕರ್‌ರವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಅವರ ಮೇಲಿರುವ ಚುನಾವಣಾ ಅಕ್ರಮ ಪ್ರಕರಣದ ತೀರ್ಪು ಯಾವಾಗ ಹೊರಬೀಳಲಿದೆ ಎಂಬುದು ಗೊತ್ತಿಲ್ಲ. ಅವರ ಪರವಾಗಿ ತೀರ್ಪು ಬಂದಲ್ಲಿ ನಿರಾಂತರವಾಗಿ ಚುನಾವಣೆ ಎದುರಿಸಬಹುದು. ಒಂದು ಪಕ್ಷ ತೀರ್ಪು ವಿರುದ್ಧವಾಗಿ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಾದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಆಗ ಅವರು ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಬೇಕಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಎನಿಸಿದರೂ ಈಗಲೂ ನೇರಾ ನೇರ ಪೈಪೋಟಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಯಾರೇ ಗೆದ್ದರೂ ಅಂತರ ಬಹಳ ಕಡಿಮೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...