Homeಕರ್ನಾಟಕತುಮಕೂರು: ಜನಸಂಗ್ರಾಮ ಪರಿಷತ್‌‌ನಿಂದ ಹುತಾತ್ಮ ರೈತರಿಗೆ ಶ್ರದ್ದಾಂಜಲಿ ಸಭೆ

ತುಮಕೂರು: ಜನಸಂಗ್ರಾಮ ಪರಿಷತ್‌‌ನಿಂದ ಹುತಾತ್ಮ ರೈತರಿಗೆ ಶ್ರದ್ದಾಂಜಲಿ ಸಭೆ

ಹೋರಾಟದ ಸಂದರ್ಭದಲ್ಲಿ ಮಡಿದ ರೈತ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ಸಂಘಟನೆಗಳ ಸದಸ್ಯರು ಎಚ್ಚರಿಸಿದ್ದಾರೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ತೀವ್ರ ಚಳಿಗೆ ಮೃತಪಟ್ಟ ಹುತಾತ್ಮರಿಗೆ ತುಮಕೂರಿನಲ್ಲಿ ಜನಸಂಗ್ರಾಮ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು. ಮಕ್ಕಳು, ಯುವತಿಯರು ಮೇಣದ ಬತ್ತಿಗಳನ್ನು ಹಿಡಿದು ಅಗಲಿದ ರೈತರಿಗೆ ನಮನ ಸಲ್ಲಿಸಿದರು.

ಹೋರಾಟದ ಸಂದರ್ಭದಲ್ಲಿ ಮಡಿದ ರೈತ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ಸಂಘಟನೆಗಳ ಸದಸ್ಯರು ಹೇಳಿದರು.

ಜನಸಂಗ್ರಾಮ ಪರಿಷತ್ ಜಿಲ್ಲಾ ಮುಖಂಡ ಜವಾಹರ್ ಮಾತನಾಡಿ, “ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು 25 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಚಳಿಯನ್ನೂ ಲೆಕ್ಕಿಸದೆ ದೆಹಲಿ ಸಮೀಪದ ಸಿಂಘು ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಕಿಂಚಿತ್ತು ಗಮನ ಕೊಡುತ್ತಿಲ್ಲ. ದೇಶಕ್ಕೆ ಅನ್ನ ಕೊಡುವ ರೈತರೊಂದಿಗೆ ಮಾತನಾಡುವ ಸೌಜನ್ಯವನ್ನೂ ಪ್ರಧಾನಿ ತೋರುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೋದಿ ಮನ್ ಕಿ ಬಾತ್ ಸಮಯದಲ್ಲಿ ತಟ್ಟೆ ಬಾರಿಸಿ: ಹೋರಾಟನಿರತ ರೈತರ ಕರೆ

“ಪ್ರಧಾನಿ ನರೇಂದ್ರ ಮೋದಿ ರೈತರು ದೇಶದ ಬೆನ್ನೆಲುಬು ಎಂದು ಹೇಳುತ್ತಾರೆ. ಆದರೆ ಅವರ ಸಂಪುಟ ಸಹದ್ಯೋಗಿಗಳು ರೈತರಿಗೆ ಅವಮಾನ ಮಾಡುತ್ತಿದ್ದಾರೆ. ತೋರಿಕೆಗೆ ರೈತರನ್ನು ಮಾತುಕತೆಗೆ ಆಹ್ವಾನಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಕೇಂದ್ರದ ಈ ನಡೆಯಲ್ಲಿ ಏನೋ ಹುನ್ನಾರ ಇದ್ದಂತೆ ಕಾಣುತ್ತಿದೆ. ಚಳವಳಿಯನ್ನು ಹತ್ತಿಕ್ಕಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ. ಅನಗತ್ಯ ಮಾಹಿತಿಗಳನ್ನು ಹರಿಯಬಿಡುತ್ತಿದೆ” ಎಂದು ಅವರು ಟೀಕಿಸಿದರು.

“ರೈತರ ಹೋರಾಟವನ್ನು ಬಗ್ಗುಬಡಿಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಚಳವಳಿಕಾರರನ್ನು ಖಲಿಸ್ತಾನಿಗಳು, ನಕ್ಸಲರು, ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಬಿಂಬಿಸಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆಗಳು ನಡೆದರೂ ಕೇಂದ್ರ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಇದು ದೇಶ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ರೈತರ ಬೆನ್ನಿಗೆ ಎಲ್ಲಾ ವರ್ಗದ ಜನರೂ ನಿಲ್ಲಬೇಕು. ಸಾಮಾನ್ಯ ಜನರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಹಾಗಾಗಿ ಜನರನ್ನು ಒಗ್ಗೂಡಿಸಲು ಸಾಮಾನ್ಯ ವೇದಿಕೆಯ ನಿರ್ಮಾಣ ಆಗಬೇಕು. ಆ ಮೂಲಕ ಸರ್ಕಾರದ ವಿರೋಧಿ ನೀತಿಗಳನ್ನು ಪ್ರಶ್ನಿಸಬೇಕು” ಎಂದು ಹೇಳಿದರು.

ಪರಿಸರವಾದಿ, ಜನಪರ ಹೋರಾಟಗಾರ ಸಿ.ಯತಿರಾಜು ಮಾತನಾಡಿ ಕೇಂದ್ರ ಸರ್ಕಾರ ತನ್ನ ಧೋರಣೆಯನ್ನು ಬದಲಿಸಿಕೊಳ್ಳಬೇಕು. ರೈತರ ಸಮಸ್ಯೆಗಳನ್ನು ಆಲಿಸಬೇಕು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ರೈತ ಮುಖಂಡ ಸಿ.ಅಜ್ಜಪ್ಪ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...