Homeಕರ್ನಾಟಕತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ. 

- Advertisement -
- Advertisement -

ಸ್ಮಾರ್ಟ್ ಸಿಟಿ ಕಾಮಗಾರಿಗಳು ತುಮಕೂರು ನಗರದೆಲ್ಲೆಡೆ ನಡೆಯುತ್ತಿದ್ದು ನಗರ ಅಧ್ವಾನಗೊಂಡಿದೆ. ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿಂದ ಮಳೆ ನೀರು ರಸ್ತೆಯ ಮೇಲೆ ಹರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಕೂಗುಹಾಕಿದವರು ಸೊಲ್ಲೇ ಎತ್ತದೆ ಮೌನಕ್ಕೆ ಜಾರಿದ್ದಾರೆ. ಕಳಪೆ ಕಾಮಗಾರಿಯ ತನಿಖೆ ನಡೆಸಬೇಕೆಂದರೂ ಅದು ಅಲ್ಲಿಗೆ ನಿಂತುಹೋಗಿದೆ. ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿರುವುದರಿಂದ ಜನರು ತೊಂದರೆ ಪಡುವಂತಾಗಿದೆ. ರಸ್ತೆಯ ಉದ್ದಕ್ಕೂ ತೋಡಿರುವ ಗುಂಡಿಗಳು ಹಾಗೆಯೇ ಉಳಿದಿವೆ. ಮಳೆ ಬಂದು ತೋಡಿದ ಚರಂಡಿಯ ಮಣ್ಣು ಮತ್ತೆ ಗುಂಡಿಗೆ ಕೊಚ್ಚಿಕೊಂಡು ಹೋಗಿರುವಂತಹ ನಿದರ್ಶನಗಳು ನಗರ ಹೃದಯ ಭಾಗದಲ್ಲಿ ಎತ್ತನೋಡಿದರೂ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣನ್ನು ಅಗೆದಿರುವ ದೃಶ್ಯಗಳೇ ಕಣ್ಣಿಗೆ ರಾಚುತ್ತವೆ.

ಆಡಳಿತ ಪಕ್ಷ ಬಿಜೆಪಿಯ ಮಾಜಿ ಸಚಿವ ಸೊಗಡು ಶಿವಣ್ಣ, ಸಂಸದ ಜಿ. ಎಸ್. ಬಸವರಾಜು ಮತ್ತು ಶಾಸಕ ಜಿ. ಬಿ. ಜ್ಯೋತಿಗಣೇಶ್, ಕಾಂಗ್ರೆಸ್ ಮಾಜಿ ಶಾಸಕ ರಫೀಕ್ ಅಹಮದ್ ಎಲ್ಲರೂ ಕೂಡ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆ ಮತ್ತು ಕಳಪೆ ಕಾಮಗಾರಿ ಬಗ್ಗೆ ಮಾಧ್ಯಮಗಳ ಮೂಲಕ ಧ್ವನಿ ಎತ್ತಿದ್ದರು. ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಆದರೆ ಅದ್ಯಾಕೋ ಎಲ್ಲರೂ ಸುಮ್ಮನಾಗಿದ್ದಾರೆ.

ನಗರದಲ್ಲಿ ಕೋಟ್ಯಂತರ ರೂಪಾಯಿ ವೆಚ್ದದ ವಿವಿಧ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬಾರ್ ಲೈನ್ ರಸ್ತೆ, ಅಶೋಕ ರಸ್ತೆ, ಗುಂಚಿಚೌಕ, ಮಂಡಿಪೇಟೆ, ಜೆ.ಸಿ.ರಸ್ತೆ, ವಿವೇಕಾನಂದ ರಸ್ತೆ, ಡಾ.ರಾಧಾಕೃಷ್ಣ ರಸ್ತೆ, ಹೀಗೆ ನಗರದ ಬಹುತೇಕ ಕಡೆಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಿಂತುಹೋಗಿವೆ. ಹಾಗಾಗಿ ನಗರದ ಜನತೆ ಸಮಸ್ಯೆ ಎದುರಿಸಬೇಕಾಗಿ ಬಂದಿದೆ.

ಒಳಚರಂಡಿ, ವಿವಿಧ ಕೇಬಲ್ ಅಳವಡಿಕೆಗೆ, ಹೊಸ ಚರಂಡಿ, ಮ್ಯಾನ್ ಹೋಲ್  ನಿರ್ಮಾಣ, ಹೀಗೆ ಹತ್ತು ಹಲವು ರೀತಿಯ ಕಾಮಗಾರಿಗಳಿಗೆ ರಸ್ತೆ ನಡುವೆ ಮತ್ತು ಇಕ್ಕೆಲೆಗಳಲ್ಲಿ ದೊಡ್ಡದೊಡ್ಡ ಚರಂಡಿಗಳನ್ನು ತೋಡಿ ಹಾಗೆಯೇ ಬಿಟ್ಟಿದ್ದು ಅನಾಹುತಕ್ಕೆ ಬಾಯಿ ತೆರೆದಿವೆ. ಬಿ.ಎಚ್. ರಸ್ತೆಯಲ್ಲಿ ಚರಂಡಿ ನಿರ್ಮಾಣಕ್ಕಾಗಿ ತೋಡಿದ್ದು ಅವುಗಳನ್ನು ಸರಿಯಾಗಿ ಮುಚ್ಚಿಲ್ಲ. ವಿವೇಕಾನಂದ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಮಾಡಿದ್ದು ಪದೇಪದೇ ರಸ್ತೆ ನಡುವೆಯೇ ಗುಂಡಿ ಬೀಳುತ್ತದೆ. ಅದನ್ನು ಮುಚ್ಚಿದರೆ ಮತ್ತೊಂದು ಕಡೆ ಗುಂಡಿ ಳೀಳುತ್ತದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜನತೆ ದೂರಿದ್ದಾರೆ.

ಗುಣಮಟ್ಟದ ಕಾಮಗಾರಿಗಳನ್ನು ಕೊರತೆ, ಕಾಮಗಾರಿಗಳ ಅವ್ಯವಸ್ಥೆಯಿಂದ ಕನ್ನಡ ಭವನದ ಕೆಳಹಂತದ ಶಭಾ ಭವನಕ್ಕೆ ನೀರು ನುಗ್ಗಿತ್ತು. ಪೀಠೋಪಕರಣಗಳು, ನೂರಾರು ಬಂಡಲ್ ಪೇಪರ್ ಗಳು ನೀರಿನಲ್ಲಿ ಮುಳುಗಿ ಹೋಗಿದ್ದವು.. ಸ್ಮಾರ್ಟ್ ಸಿಟಿ ಕಾಮಗಾರಿಗೆ ರಸ್ತೆ ಬದಿಯಲ್ಲಿ ತೋಡಿದ ಗುಂಡಿಯನ್ನು ಸರಿಯಾಗಿ ಮುಚ್ಚದೆ ನೀರು ನುಗ್ಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ ಆರೋಪಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾರ್ಯಕ್ಕೆ ತುಮಕೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಗಳ ಬರುತ್ತಲೇ ಇವೆ. ಆದರೆ ನಗರ ಗಬ್ಬೆದ್ದು ಹೋಗಿರುವುದನ್ನು ನೋಡಿದರೆ ಅದು ಹೇಗೆ ಪ್ರಶಸ್ತಿಗಳನ್ನು ನೀಡಲಾಯಿತು ಎಂದು ಜನರ ಪ್ರಶ್ನಿಸುತ್ತಿದ್ದಾರೆ.

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಕಾಮಗಾರಿಗಳಿಗೆ ಸುರಿಯುತ್ತಿದ್ದರೂ ನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ.ಕೆಲವರ ಜೇಬುಗಳು ಸ್ಮಾರ್ಟ್ ಗೊಳ್ಳುತ್ತಿವೆ. ಜನರಿಗೆ ಮಾತ್ರ ಮೂರು ಕಾಸಿನ ಉಪಯೋಗವೂ ಇಲ್ಲ ಎಂದು ದೂರಲಾಗಿದೆ.


ಓದಿ: ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...