Homeಕರ್ನಾಟಕತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ. 

- Advertisement -
- Advertisement -

ಸ್ಮಾರ್ಟ್ ಸಿಟಿ ಕಾಮಗಾರಿಗಳು ತುಮಕೂರು ನಗರದೆಲ್ಲೆಡೆ ನಡೆಯುತ್ತಿದ್ದು ನಗರ ಅಧ್ವಾನಗೊಂಡಿದೆ. ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿಂದ ಮಳೆ ನೀರು ರಸ್ತೆಯ ಮೇಲೆ ಹರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಕೂಗುಹಾಕಿದವರು ಸೊಲ್ಲೇ ಎತ್ತದೆ ಮೌನಕ್ಕೆ ಜಾರಿದ್ದಾರೆ. ಕಳಪೆ ಕಾಮಗಾರಿಯ ತನಿಖೆ ನಡೆಸಬೇಕೆಂದರೂ ಅದು ಅಲ್ಲಿಗೆ ನಿಂತುಹೋಗಿದೆ. ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿರುವುದರಿಂದ ಜನರು ತೊಂದರೆ ಪಡುವಂತಾಗಿದೆ. ರಸ್ತೆಯ ಉದ್ದಕ್ಕೂ ತೋಡಿರುವ ಗುಂಡಿಗಳು ಹಾಗೆಯೇ ಉಳಿದಿವೆ. ಮಳೆ ಬಂದು ತೋಡಿದ ಚರಂಡಿಯ ಮಣ್ಣು ಮತ್ತೆ ಗುಂಡಿಗೆ ಕೊಚ್ಚಿಕೊಂಡು ಹೋಗಿರುವಂತಹ ನಿದರ್ಶನಗಳು ನಗರ ಹೃದಯ ಭಾಗದಲ್ಲಿ ಎತ್ತನೋಡಿದರೂ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣನ್ನು ಅಗೆದಿರುವ ದೃಶ್ಯಗಳೇ ಕಣ್ಣಿಗೆ ರಾಚುತ್ತವೆ.

ಆಡಳಿತ ಪಕ್ಷ ಬಿಜೆಪಿಯ ಮಾಜಿ ಸಚಿವ ಸೊಗಡು ಶಿವಣ್ಣ, ಸಂಸದ ಜಿ. ಎಸ್. ಬಸವರಾಜು ಮತ್ತು ಶಾಸಕ ಜಿ. ಬಿ. ಜ್ಯೋತಿಗಣೇಶ್, ಕಾಂಗ್ರೆಸ್ ಮಾಜಿ ಶಾಸಕ ರಫೀಕ್ ಅಹಮದ್ ಎಲ್ಲರೂ ಕೂಡ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆ ಮತ್ತು ಕಳಪೆ ಕಾಮಗಾರಿ ಬಗ್ಗೆ ಮಾಧ್ಯಮಗಳ ಮೂಲಕ ಧ್ವನಿ ಎತ್ತಿದ್ದರು. ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಆದರೆ ಅದ್ಯಾಕೋ ಎಲ್ಲರೂ ಸುಮ್ಮನಾಗಿದ್ದಾರೆ.

ನಗರದಲ್ಲಿ ಕೋಟ್ಯಂತರ ರೂಪಾಯಿ ವೆಚ್ದದ ವಿವಿಧ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬಾರ್ ಲೈನ್ ರಸ್ತೆ, ಅಶೋಕ ರಸ್ತೆ, ಗುಂಚಿಚೌಕ, ಮಂಡಿಪೇಟೆ, ಜೆ.ಸಿ.ರಸ್ತೆ, ವಿವೇಕಾನಂದ ರಸ್ತೆ, ಡಾ.ರಾಧಾಕೃಷ್ಣ ರಸ್ತೆ, ಹೀಗೆ ನಗರದ ಬಹುತೇಕ ಕಡೆಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಿಂತುಹೋಗಿವೆ. ಹಾಗಾಗಿ ನಗರದ ಜನತೆ ಸಮಸ್ಯೆ ಎದುರಿಸಬೇಕಾಗಿ ಬಂದಿದೆ.

ಒಳಚರಂಡಿ, ವಿವಿಧ ಕೇಬಲ್ ಅಳವಡಿಕೆಗೆ, ಹೊಸ ಚರಂಡಿ, ಮ್ಯಾನ್ ಹೋಲ್  ನಿರ್ಮಾಣ, ಹೀಗೆ ಹತ್ತು ಹಲವು ರೀತಿಯ ಕಾಮಗಾರಿಗಳಿಗೆ ರಸ್ತೆ ನಡುವೆ ಮತ್ತು ಇಕ್ಕೆಲೆಗಳಲ್ಲಿ ದೊಡ್ಡದೊಡ್ಡ ಚರಂಡಿಗಳನ್ನು ತೋಡಿ ಹಾಗೆಯೇ ಬಿಟ್ಟಿದ್ದು ಅನಾಹುತಕ್ಕೆ ಬಾಯಿ ತೆರೆದಿವೆ. ಬಿ.ಎಚ್. ರಸ್ತೆಯಲ್ಲಿ ಚರಂಡಿ ನಿರ್ಮಾಣಕ್ಕಾಗಿ ತೋಡಿದ್ದು ಅವುಗಳನ್ನು ಸರಿಯಾಗಿ ಮುಚ್ಚಿಲ್ಲ. ವಿವೇಕಾನಂದ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಮಾಡಿದ್ದು ಪದೇಪದೇ ರಸ್ತೆ ನಡುವೆಯೇ ಗುಂಡಿ ಬೀಳುತ್ತದೆ. ಅದನ್ನು ಮುಚ್ಚಿದರೆ ಮತ್ತೊಂದು ಕಡೆ ಗುಂಡಿ ಳೀಳುತ್ತದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜನತೆ ದೂರಿದ್ದಾರೆ.

ಗುಣಮಟ್ಟದ ಕಾಮಗಾರಿಗಳನ್ನು ಕೊರತೆ, ಕಾಮಗಾರಿಗಳ ಅವ್ಯವಸ್ಥೆಯಿಂದ ಕನ್ನಡ ಭವನದ ಕೆಳಹಂತದ ಶಭಾ ಭವನಕ್ಕೆ ನೀರು ನುಗ್ಗಿತ್ತು. ಪೀಠೋಪಕರಣಗಳು, ನೂರಾರು ಬಂಡಲ್ ಪೇಪರ್ ಗಳು ನೀರಿನಲ್ಲಿ ಮುಳುಗಿ ಹೋಗಿದ್ದವು.. ಸ್ಮಾರ್ಟ್ ಸಿಟಿ ಕಾಮಗಾರಿಗೆ ರಸ್ತೆ ಬದಿಯಲ್ಲಿ ತೋಡಿದ ಗುಂಡಿಯನ್ನು ಸರಿಯಾಗಿ ಮುಚ್ಚದೆ ನೀರು ನುಗ್ಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ ಆರೋಪಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾರ್ಯಕ್ಕೆ ತುಮಕೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಗಳ ಬರುತ್ತಲೇ ಇವೆ. ಆದರೆ ನಗರ ಗಬ್ಬೆದ್ದು ಹೋಗಿರುವುದನ್ನು ನೋಡಿದರೆ ಅದು ಹೇಗೆ ಪ್ರಶಸ್ತಿಗಳನ್ನು ನೀಡಲಾಯಿತು ಎಂದು ಜನರ ಪ್ರಶ್ನಿಸುತ್ತಿದ್ದಾರೆ.

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಕಾಮಗಾರಿಗಳಿಗೆ ಸುರಿಯುತ್ತಿದ್ದರೂ ನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ.ಕೆಲವರ ಜೇಬುಗಳು ಸ್ಮಾರ್ಟ್ ಗೊಳ್ಳುತ್ತಿವೆ. ಜನರಿಗೆ ಮಾತ್ರ ಮೂರು ಕಾಸಿನ ಉಪಯೋಗವೂ ಇಲ್ಲ ಎಂದು ದೂರಲಾಗಿದೆ.


ಓದಿ: ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...