Homeಕರ್ನಾಟಕತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ. 

- Advertisement -
- Advertisement -

ಸ್ಮಾರ್ಟ್ ಸಿಟಿ ಕಾಮಗಾರಿಗಳು ತುಮಕೂರು ನಗರದೆಲ್ಲೆಡೆ ನಡೆಯುತ್ತಿದ್ದು ನಗರ ಅಧ್ವಾನಗೊಂಡಿದೆ. ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿಂದ ಮಳೆ ನೀರು ರಸ್ತೆಯ ಮೇಲೆ ಹರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಕೂಗುಹಾಕಿದವರು ಸೊಲ್ಲೇ ಎತ್ತದೆ ಮೌನಕ್ಕೆ ಜಾರಿದ್ದಾರೆ. ಕಳಪೆ ಕಾಮಗಾರಿಯ ತನಿಖೆ ನಡೆಸಬೇಕೆಂದರೂ ಅದು ಅಲ್ಲಿಗೆ ನಿಂತುಹೋಗಿದೆ. ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿರುವುದರಿಂದ ಜನರು ತೊಂದರೆ ಪಡುವಂತಾಗಿದೆ. ರಸ್ತೆಯ ಉದ್ದಕ್ಕೂ ತೋಡಿರುವ ಗುಂಡಿಗಳು ಹಾಗೆಯೇ ಉಳಿದಿವೆ. ಮಳೆ ಬಂದು ತೋಡಿದ ಚರಂಡಿಯ ಮಣ್ಣು ಮತ್ತೆ ಗುಂಡಿಗೆ ಕೊಚ್ಚಿಕೊಂಡು ಹೋಗಿರುವಂತಹ ನಿದರ್ಶನಗಳು ನಗರ ಹೃದಯ ಭಾಗದಲ್ಲಿ ಎತ್ತನೋಡಿದರೂ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣನ್ನು ಅಗೆದಿರುವ ದೃಶ್ಯಗಳೇ ಕಣ್ಣಿಗೆ ರಾಚುತ್ತವೆ.

ಆಡಳಿತ ಪಕ್ಷ ಬಿಜೆಪಿಯ ಮಾಜಿ ಸಚಿವ ಸೊಗಡು ಶಿವಣ್ಣ, ಸಂಸದ ಜಿ. ಎಸ್. ಬಸವರಾಜು ಮತ್ತು ಶಾಸಕ ಜಿ. ಬಿ. ಜ್ಯೋತಿಗಣೇಶ್, ಕಾಂಗ್ರೆಸ್ ಮಾಜಿ ಶಾಸಕ ರಫೀಕ್ ಅಹಮದ್ ಎಲ್ಲರೂ ಕೂಡ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆ ಮತ್ತು ಕಳಪೆ ಕಾಮಗಾರಿ ಬಗ್ಗೆ ಮಾಧ್ಯಮಗಳ ಮೂಲಕ ಧ್ವನಿ ಎತ್ತಿದ್ದರು. ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಆದರೆ ಅದ್ಯಾಕೋ ಎಲ್ಲರೂ ಸುಮ್ಮನಾಗಿದ್ದಾರೆ.

ನಗರದಲ್ಲಿ ಕೋಟ್ಯಂತರ ರೂಪಾಯಿ ವೆಚ್ದದ ವಿವಿಧ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬಾರ್ ಲೈನ್ ರಸ್ತೆ, ಅಶೋಕ ರಸ್ತೆ, ಗುಂಚಿಚೌಕ, ಮಂಡಿಪೇಟೆ, ಜೆ.ಸಿ.ರಸ್ತೆ, ವಿವೇಕಾನಂದ ರಸ್ತೆ, ಡಾ.ರಾಧಾಕೃಷ್ಣ ರಸ್ತೆ, ಹೀಗೆ ನಗರದ ಬಹುತೇಕ ಕಡೆಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಿಂತುಹೋಗಿವೆ. ಹಾಗಾಗಿ ನಗರದ ಜನತೆ ಸಮಸ್ಯೆ ಎದುರಿಸಬೇಕಾಗಿ ಬಂದಿದೆ.

ಒಳಚರಂಡಿ, ವಿವಿಧ ಕೇಬಲ್ ಅಳವಡಿಕೆಗೆ, ಹೊಸ ಚರಂಡಿ, ಮ್ಯಾನ್ ಹೋಲ್  ನಿರ್ಮಾಣ, ಹೀಗೆ ಹತ್ತು ಹಲವು ರೀತಿಯ ಕಾಮಗಾರಿಗಳಿಗೆ ರಸ್ತೆ ನಡುವೆ ಮತ್ತು ಇಕ್ಕೆಲೆಗಳಲ್ಲಿ ದೊಡ್ಡದೊಡ್ಡ ಚರಂಡಿಗಳನ್ನು ತೋಡಿ ಹಾಗೆಯೇ ಬಿಟ್ಟಿದ್ದು ಅನಾಹುತಕ್ಕೆ ಬಾಯಿ ತೆರೆದಿವೆ. ಬಿ.ಎಚ್. ರಸ್ತೆಯಲ್ಲಿ ಚರಂಡಿ ನಿರ್ಮಾಣಕ್ಕಾಗಿ ತೋಡಿದ್ದು ಅವುಗಳನ್ನು ಸರಿಯಾಗಿ ಮುಚ್ಚಿಲ್ಲ. ವಿವೇಕಾನಂದ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಮಾಡಿದ್ದು ಪದೇಪದೇ ರಸ್ತೆ ನಡುವೆಯೇ ಗುಂಡಿ ಬೀಳುತ್ತದೆ. ಅದನ್ನು ಮುಚ್ಚಿದರೆ ಮತ್ತೊಂದು ಕಡೆ ಗುಂಡಿ ಳೀಳುತ್ತದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜನತೆ ದೂರಿದ್ದಾರೆ.

ಗುಣಮಟ್ಟದ ಕಾಮಗಾರಿಗಳನ್ನು ಕೊರತೆ, ಕಾಮಗಾರಿಗಳ ಅವ್ಯವಸ್ಥೆಯಿಂದ ಕನ್ನಡ ಭವನದ ಕೆಳಹಂತದ ಶಭಾ ಭವನಕ್ಕೆ ನೀರು ನುಗ್ಗಿತ್ತು. ಪೀಠೋಪಕರಣಗಳು, ನೂರಾರು ಬಂಡಲ್ ಪೇಪರ್ ಗಳು ನೀರಿನಲ್ಲಿ ಮುಳುಗಿ ಹೋಗಿದ್ದವು.. ಸ್ಮಾರ್ಟ್ ಸಿಟಿ ಕಾಮಗಾರಿಗೆ ರಸ್ತೆ ಬದಿಯಲ್ಲಿ ತೋಡಿದ ಗುಂಡಿಯನ್ನು ಸರಿಯಾಗಿ ಮುಚ್ಚದೆ ನೀರು ನುಗ್ಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ ಆರೋಪಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾರ್ಯಕ್ಕೆ ತುಮಕೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಗಳ ಬರುತ್ತಲೇ ಇವೆ. ಆದರೆ ನಗರ ಗಬ್ಬೆದ್ದು ಹೋಗಿರುವುದನ್ನು ನೋಡಿದರೆ ಅದು ಹೇಗೆ ಪ್ರಶಸ್ತಿಗಳನ್ನು ನೀಡಲಾಯಿತು ಎಂದು ಜನರ ಪ್ರಶ್ನಿಸುತ್ತಿದ್ದಾರೆ.

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಕಾಮಗಾರಿಗಳಿಗೆ ಸುರಿಯುತ್ತಿದ್ದರೂ ನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ.ಕೆಲವರ ಜೇಬುಗಳು ಸ್ಮಾರ್ಟ್ ಗೊಳ್ಳುತ್ತಿವೆ. ಜನರಿಗೆ ಮಾತ್ರ ಮೂರು ಕಾಸಿನ ಉಪಯೋಗವೂ ಇಲ್ಲ ಎಂದು ದೂರಲಾಗಿದೆ.


ಓದಿ: ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...