Homeಕರ್ನಾಟಕತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

- Advertisement -
- Advertisement -

ತುಮಕೂರಿನ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅಕ್ರಮಗಳು ನಡೆದಿದ್ದು, ಕೂಡಲೇ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ. ಕೋಟ್ಯಂತರ ರೂಪಾಯಿ ಹಣ ಪೋಲಾಗಿದೆ. ಇದರ ಉಸ್ತುವಾರಿ ವಹಿಸಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ತನಿಖೆ ಆಗಬೆಕು ಎಂದು ಆಗ್ರಹಿಸಿದ್ದಾರೆ.

ಈಗ ತುಮಕೂರಿನಲ್ಲಿ ನಡೆದಿರುವ ಒಂದು ಕಾಮಗಾರಿಯೂ ಗುಣಮಟ್ಟದಿಂದ ಕೂಡಿಲ್ಲ. ಎಲ್ಲವೂ ಕಳಪೆಯಿಂದ ಕೂಡಿವೆ. ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಉಸ್ತುವಾರಿ ವಹಿಸಿರುವ ಶಾಲಿನಿ ರಜನೀಶ್ ಅವರನ್ನು ಅಮಾನತು ಮಾಡಬೇಕು. ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕಾಮಗಾರಿಯ ಬಗ್ಗೆ ತನಿಖೆ ನಡೆಸದಿದ್ದರೆ, ಉಪಚುನಾವಣೆಯ ನಂತರ ಸ್ಮಾರ್ಟ್ ಸಿಟಿ ಕಚೇರಿಗೆ ಬೀಗ ಜಡಿಯುತ್ತೇನೆ. ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯಹಾರ ನಡೆದಿರುವುದು ಕಳಪೆ ಕಾಮಗಾರಿಯಿಂದ ಗೊತ್ತಾಗುತ್ತದೆ ಎಂದು ಆರೋಪಿಸಿದರು.

ತುಮಕೂರು ನಗರಕ್ಕೆ ನೀರು ಪೂರೈಕೆ ಮಾಡುವ ಜಲಸಂಗ್ರಹಾಗಾರದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಂಡಿದ್ದು ಇದಕ್ಕೆ ಶೇಕಡ 50ರಷ್ಟು ಹಣ ವೆಚ್ಚವಾಗಿದೆ. ಇದನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜು ಒತ್ತಾಯಿಸಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದರು.

ಸುಮಾರು 2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆದಿದ್ದು ಅದರಲ್ಲಿ ಅವ್ಯಹಾರ ನಡೆದಿದೆ ಎಂದು ಈ ಹಿಂದೆ ನಾನುಗೌರಿ.ಕಾಂ ಜಾಲತಾಣ ಸುದ್ಧಿಯನ್ನು ಪ್ರಕಟಿಸಿತ್ತು. ಕಾಮಗಾರಿಗಳು ವೈಜ್ಞಾನಿಕವಾಗಿ ನಡೆದಿಲ್ಲ ಎಂಬ ಬಗ್ಗೆಯೂ ಬೆಳಕು ಚೆಲ್ಲಿತ್ತು. ಇದೀಗ ಮಾಜಿ ಸಚಿವರು ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಯ ಕುರಿತು ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: 2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜಿ.ಬಿ.ಜ್ಯೋತಿಗಣೇಶ್ ಕೂಡ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದನಿ ಎತ್ತಿದ್ದರು. ಸಂಸದರು ಮತ್ತು ಶಾಸಕರು ತಮ್ಮದೇ ಸರ್ಕಾರದಲ್ಲಿ ಕಾಮಗಾರಿಯಲ್ಲಿ ಆಗಿರುವ ಅವೈಜ್ಞಾನಿಕತೆ ಮತ್ತು ಅವ್ಯವಹಾರದ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಬಹುದಲ್ಲವೇ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಈಗಿನ ವಿಶೇಷವೆಂದರೆ ಮತ್ತೆ ಸಂಸದ ಜಿ.ಎಸ್.ಬಸವರಾಜು ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ನಡುವೆ  ಸಮರ ಏರ್ಪಟ್ಟಿರುವುದು ತಿಳಿಯುತ್ತದೆ. ಬಸವರಾಜು ಹಣ ಬಿಡುಗಡೆ ಮಾಡಬೇಕು ಅಂದರೆ, ಸೊಗಡು ಶಿವಣ್ಣ ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಒಂದಂತೂ ಸತ್ಯ ಅಪ್ಪ ಮಗ ವರ್ಸಸ್ ಸೊಗಡು ಗುದ್ದಾಟ ಮುಂದುವರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...