Homeಕರ್ನಾಟಕತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

- Advertisement -
- Advertisement -

ತುಮಕೂರಿನ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅಕ್ರಮಗಳು ನಡೆದಿದ್ದು, ಕೂಡಲೇ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ. ಕೋಟ್ಯಂತರ ರೂಪಾಯಿ ಹಣ ಪೋಲಾಗಿದೆ. ಇದರ ಉಸ್ತುವಾರಿ ವಹಿಸಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ತನಿಖೆ ಆಗಬೆಕು ಎಂದು ಆಗ್ರಹಿಸಿದ್ದಾರೆ.

ಈಗ ತುಮಕೂರಿನಲ್ಲಿ ನಡೆದಿರುವ ಒಂದು ಕಾಮಗಾರಿಯೂ ಗುಣಮಟ್ಟದಿಂದ ಕೂಡಿಲ್ಲ. ಎಲ್ಲವೂ ಕಳಪೆಯಿಂದ ಕೂಡಿವೆ. ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಉಸ್ತುವಾರಿ ವಹಿಸಿರುವ ಶಾಲಿನಿ ರಜನೀಶ್ ಅವರನ್ನು ಅಮಾನತು ಮಾಡಬೇಕು. ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕಾಮಗಾರಿಯ ಬಗ್ಗೆ ತನಿಖೆ ನಡೆಸದಿದ್ದರೆ, ಉಪಚುನಾವಣೆಯ ನಂತರ ಸ್ಮಾರ್ಟ್ ಸಿಟಿ ಕಚೇರಿಗೆ ಬೀಗ ಜಡಿಯುತ್ತೇನೆ. ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯಹಾರ ನಡೆದಿರುವುದು ಕಳಪೆ ಕಾಮಗಾರಿಯಿಂದ ಗೊತ್ತಾಗುತ್ತದೆ ಎಂದು ಆರೋಪಿಸಿದರು.

ತುಮಕೂರು ನಗರಕ್ಕೆ ನೀರು ಪೂರೈಕೆ ಮಾಡುವ ಜಲಸಂಗ್ರಹಾಗಾರದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಂಡಿದ್ದು ಇದಕ್ಕೆ ಶೇಕಡ 50ರಷ್ಟು ಹಣ ವೆಚ್ಚವಾಗಿದೆ. ಇದನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜು ಒತ್ತಾಯಿಸಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದರು.

ಸುಮಾರು 2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆದಿದ್ದು ಅದರಲ್ಲಿ ಅವ್ಯಹಾರ ನಡೆದಿದೆ ಎಂದು ಈ ಹಿಂದೆ ನಾನುಗೌರಿ.ಕಾಂ ಜಾಲತಾಣ ಸುದ್ಧಿಯನ್ನು ಪ್ರಕಟಿಸಿತ್ತು. ಕಾಮಗಾರಿಗಳು ವೈಜ್ಞಾನಿಕವಾಗಿ ನಡೆದಿಲ್ಲ ಎಂಬ ಬಗ್ಗೆಯೂ ಬೆಳಕು ಚೆಲ್ಲಿತ್ತು. ಇದೀಗ ಮಾಜಿ ಸಚಿವರು ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಯ ಕುರಿತು ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: 2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜಿ.ಬಿ.ಜ್ಯೋತಿಗಣೇಶ್ ಕೂಡ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದನಿ ಎತ್ತಿದ್ದರು. ಸಂಸದರು ಮತ್ತು ಶಾಸಕರು ತಮ್ಮದೇ ಸರ್ಕಾರದಲ್ಲಿ ಕಾಮಗಾರಿಯಲ್ಲಿ ಆಗಿರುವ ಅವೈಜ್ಞಾನಿಕತೆ ಮತ್ತು ಅವ್ಯವಹಾರದ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಬಹುದಲ್ಲವೇ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಈಗಿನ ವಿಶೇಷವೆಂದರೆ ಮತ್ತೆ ಸಂಸದ ಜಿ.ಎಸ್.ಬಸವರಾಜು ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ನಡುವೆ  ಸಮರ ಏರ್ಪಟ್ಟಿರುವುದು ತಿಳಿಯುತ್ತದೆ. ಬಸವರಾಜು ಹಣ ಬಿಡುಗಡೆ ಮಾಡಬೇಕು ಅಂದರೆ, ಸೊಗಡು ಶಿವಣ್ಣ ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಒಂದಂತೂ ಸತ್ಯ ಅಪ್ಪ ಮಗ ವರ್ಸಸ್ ಸೊಗಡು ಗುದ್ದಾಟ ಮುಂದುವರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...