Homeಕರ್ನಾಟಕಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ - ವಿಡಿಯೋ ನೋಡಿ

ಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ – ವಿಡಿಯೋ ನೋಡಿ

- Advertisement -
- Advertisement -

ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕನೊಬ್ಬ ಚರಂಡಿಯ ಗುಂಡಿಯಲ್ಲಿ ಸಿಲುಕಿದ ಪರಿಣಾಮ ಆತನನ್ನು ಹೊರತೆಗೆಯಲು ಸುಮಾರು ಅರ್ಧ ಗಂಟೆ ಹರಸಾಹಸ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಗುರುವಾರ ಅಪರಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಮಾಡಲು ಹೋದ ಸಾರ್ವಜನಿಕರೊಬ್ಬರಿಗೆ ಇಂಜಿನಿಯರ್ ಅಡ್ಡಿಪಡಿಸಿರುವ ಸಂಗತಿಯೂ ವರದಿಯಾಗಿದೆ.

ಒಳಚರಂಡಿಯಲ್ಲಿ ಮೂವರು ಕೆಲಸ ಮಾಡುತ್ತಿದ್ದರು. ಆಗ ಓರ್ವ ಕಾರ್ಮಿಕ ದಿಢೀರ್ ಮ್ಯಾನ್ ಹೋಲ್ ನಲ್ಲಿ ಸೊಂಟದವರೆಗೆ ಸಿಲುಕಿದ್ದಾನೆ. ಮೇಲೆ ಏಳಲು ಸತತ ಪ್ರಯತ್ನಪಟ್ಟರು ಆತನಿಂದ ಆಗಿಲ್ಲ. ಈ ವೇಲೆ ಮೇಲೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿಗೆ ಪೋಟೋ ಮತ್ತು ವಿಡಿಯೋ ತೆಗೆಯದಂತೆ ಇಂಜಿನಿಯರ್ ಧಮಕಿ ಹಾಕಿದ್ದಾರೆ.

ವಿಡಿಯೋ ನೋಡಿ

ಆದರೂ ಇಂಜಿನಿಯರ್ ಮಾತುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಆ ವ್ಯಕ್ತಿ ಸಂಪೂರ್ಣ ವಿಡಿಯೋ ಮಾಡಿದ್ದಾರೆ. ಆ ವಿಡಿಯೋದಲ್ಲಿ ಬುರುಜೆಯಲ್ಲಿ ಹೂತಿರುವ ಕಾರ್ಮಿಕ ಮೇಲೆ ಬರಲು ಹೆಣಗುತ್ತಿದ್ದರೆ, ಇನ್ನಿಬ್ಬರು ಕೂಡ ಅತನ ಸಹಾಯಕಕ್ಕೆ ಬರಲೂ ಆಗದೆ ಅತ್ತಿತ್ತ ಹೆಜ್ಜೆ ಇಡುವ ದೃಶ್ಯ ಸೆರೆಯಾಗಿದೆ.

ಜೆಸಿಬಿಯಲ್ಲಿ ಸುಮಾರು 20 ಅಡಿ ಆಳ ದೊಡ್ಡ ಗುಂಡಿ ತೋಡಿದ್ದು ಒಳಚರಂಡಿಯ ಮಾರ್ಗ ಹುಡುಕುತ್ತಿರುವಾಗ ಕಾರ್ಮಿಕನೊಬ್ಬ ದಿಢೀರ್ ಕೆಸರು ತುಂಬಿಕೊಂಡಿದ್ದ ಮ್ಯಾನ್ ಹೋಲ್ ಗೆ ಕುಸಿದುಹೋಗಿದ್ದಾನೆ. ಕಾಲು ಕೆಸರಿನಿಂದ ಕೂಡಿದ ಬುರುಜೆಯಲ್ಲಿ ಸಿಲುಕಿದ ಪರಿಣಾಮ ಆತ ಮೇಲೆ ಬರಲು ಹರಸಾಹಸ ಬೀಳಬೇಕಾಗಿದೆ.

ಸತತ 45 ನಿಮಿಷಗಳ ನಂತರ ಮತ್ತೊಬ್ಬ ಕಾರ್ಮಿಕ ಕೆಸರಿನಲ್ಲಿ ಸಿಲುಕಿದ ಕಾರ್ಮಿಕನ ನೆರವಿಗೆ ಬಂದಿದ್ದು ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯ ಕಾಲನ್ನು ಹಿಡಿದು ಶ್ರಮಪಟ್ಟು ಮೇಲೆತ್ತುವಲ್ಲಿ ಸಫಲನಾಗಿದ್ದಾನೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

20 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಸಲಕರಣೆಗಳನ್ನು ನೀಡದೇ ಕೆಲಸ ಮಾಡಿಸುತ್ತಿದ್ದುದು ಕಂಡು ಬಂದಿದೆ. ಕೆಸರಿನಿಂದ ಮೇಲೆದ್ದ ಕಾರ್ಮಿಕರನನ್ನು ಜೆಸಿಬಿಯ ಮೂಲಕವೇ ರಸ್ತೆಯ ಮೇಲೆ ತರಲಾಗಿರುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು ಕಾರ್ಮಿಕರಿಗೆ ಏನೇ ಅನಾಹುತವಾದರೂ ಯಾರೂ ಕೇಳುವಂತಹ ಪರಿಸ್ಥಿತಿ ಇಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ವೈಜ್ಞಾನಿಕವಾಗಿ ಕಾಮಗಾರಿ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...