Homeಕರ್ನಾಟಕಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ - ವಿಡಿಯೋ ನೋಡಿ

ಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ – ವಿಡಿಯೋ ನೋಡಿ

- Advertisement -
- Advertisement -

ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕನೊಬ್ಬ ಚರಂಡಿಯ ಗುಂಡಿಯಲ್ಲಿ ಸಿಲುಕಿದ ಪರಿಣಾಮ ಆತನನ್ನು ಹೊರತೆಗೆಯಲು ಸುಮಾರು ಅರ್ಧ ಗಂಟೆ ಹರಸಾಹಸ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಗುರುವಾರ ಅಪರಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಮಾಡಲು ಹೋದ ಸಾರ್ವಜನಿಕರೊಬ್ಬರಿಗೆ ಇಂಜಿನಿಯರ್ ಅಡ್ಡಿಪಡಿಸಿರುವ ಸಂಗತಿಯೂ ವರದಿಯಾಗಿದೆ.

ಒಳಚರಂಡಿಯಲ್ಲಿ ಮೂವರು ಕೆಲಸ ಮಾಡುತ್ತಿದ್ದರು. ಆಗ ಓರ್ವ ಕಾರ್ಮಿಕ ದಿಢೀರ್ ಮ್ಯಾನ್ ಹೋಲ್ ನಲ್ಲಿ ಸೊಂಟದವರೆಗೆ ಸಿಲುಕಿದ್ದಾನೆ. ಮೇಲೆ ಏಳಲು ಸತತ ಪ್ರಯತ್ನಪಟ್ಟರು ಆತನಿಂದ ಆಗಿಲ್ಲ. ಈ ವೇಲೆ ಮೇಲೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿಗೆ ಪೋಟೋ ಮತ್ತು ವಿಡಿಯೋ ತೆಗೆಯದಂತೆ ಇಂಜಿನಿಯರ್ ಧಮಕಿ ಹಾಕಿದ್ದಾರೆ.

ವಿಡಿಯೋ ನೋಡಿ

ಆದರೂ ಇಂಜಿನಿಯರ್ ಮಾತುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಆ ವ್ಯಕ್ತಿ ಸಂಪೂರ್ಣ ವಿಡಿಯೋ ಮಾಡಿದ್ದಾರೆ. ಆ ವಿಡಿಯೋದಲ್ಲಿ ಬುರುಜೆಯಲ್ಲಿ ಹೂತಿರುವ ಕಾರ್ಮಿಕ ಮೇಲೆ ಬರಲು ಹೆಣಗುತ್ತಿದ್ದರೆ, ಇನ್ನಿಬ್ಬರು ಕೂಡ ಅತನ ಸಹಾಯಕಕ್ಕೆ ಬರಲೂ ಆಗದೆ ಅತ್ತಿತ್ತ ಹೆಜ್ಜೆ ಇಡುವ ದೃಶ್ಯ ಸೆರೆಯಾಗಿದೆ.

ಜೆಸಿಬಿಯಲ್ಲಿ ಸುಮಾರು 20 ಅಡಿ ಆಳ ದೊಡ್ಡ ಗುಂಡಿ ತೋಡಿದ್ದು ಒಳಚರಂಡಿಯ ಮಾರ್ಗ ಹುಡುಕುತ್ತಿರುವಾಗ ಕಾರ್ಮಿಕನೊಬ್ಬ ದಿಢೀರ್ ಕೆಸರು ತುಂಬಿಕೊಂಡಿದ್ದ ಮ್ಯಾನ್ ಹೋಲ್ ಗೆ ಕುಸಿದುಹೋಗಿದ್ದಾನೆ. ಕಾಲು ಕೆಸರಿನಿಂದ ಕೂಡಿದ ಬುರುಜೆಯಲ್ಲಿ ಸಿಲುಕಿದ ಪರಿಣಾಮ ಆತ ಮೇಲೆ ಬರಲು ಹರಸಾಹಸ ಬೀಳಬೇಕಾಗಿದೆ.

ಸತತ 45 ನಿಮಿಷಗಳ ನಂತರ ಮತ್ತೊಬ್ಬ ಕಾರ್ಮಿಕ ಕೆಸರಿನಲ್ಲಿ ಸಿಲುಕಿದ ಕಾರ್ಮಿಕನ ನೆರವಿಗೆ ಬಂದಿದ್ದು ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯ ಕಾಲನ್ನು ಹಿಡಿದು ಶ್ರಮಪಟ್ಟು ಮೇಲೆತ್ತುವಲ್ಲಿ ಸಫಲನಾಗಿದ್ದಾನೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

20 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಸಲಕರಣೆಗಳನ್ನು ನೀಡದೇ ಕೆಲಸ ಮಾಡಿಸುತ್ತಿದ್ದುದು ಕಂಡು ಬಂದಿದೆ. ಕೆಸರಿನಿಂದ ಮೇಲೆದ್ದ ಕಾರ್ಮಿಕರನನ್ನು ಜೆಸಿಬಿಯ ಮೂಲಕವೇ ರಸ್ತೆಯ ಮೇಲೆ ತರಲಾಗಿರುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು ಕಾರ್ಮಿಕರಿಗೆ ಏನೇ ಅನಾಹುತವಾದರೂ ಯಾರೂ ಕೇಳುವಂತಹ ಪರಿಸ್ಥಿತಿ ಇಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ವೈಜ್ಞಾನಿಕವಾಗಿ ಕಾಮಗಾರಿ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...