Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...