Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...