Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...