Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....