Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...