Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...