Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...