Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...