Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...