Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....