Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....