Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...