Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....