Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...