Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...