Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...